ಬೆಂಗಳೂರು: ರಾಜ್ಯ ಸರ್ಕಾರವು ಸ್ಟ್ರಾಂಗ್ ಬಿಯರ್ ಮೇಲೆ ಅಬಕಾರಿ ಸುಂಕವನ್ನು ಹೆಚ್ಚಿಸಲು ಸಿದ್ಧವಾಗಿರುವುದರಿಂದ ಬಿಯರ್ ಕುಡಿಯುವವರು ತಮ್ಮ ನೆಚ್ಚಿನ ಪಾನೀಯಕ್ಕೆ ಹೆಚ್ಚಿನ ದರವನ್ನು ಪಾವತಿಸಬೇಕಾಗುತ್ತದೆ ಎಂದು ವರದಿಯಾಗಿದೆ.
ತೆರಿಗೆಗೆ ಪ್ರಸ್ತಾವನೆ ಜಾರಿಯಾದರೆ, ಕೇವಲ ಒಂದು ವರ್ಷಕ್ಕೆ ರಾಜ್ಯದಲ್ಲಿ ಬಿಯರ್ ಬೆಲೆ ಮೂರನೇ ಬಾರಿ ಹೆಚ್ಚಳವಾದಂತಗಲಿದೆ. ಈ ಮೂಲಕ ಬಿಯರ್ ಕುಡಿಯುವವರ ಜೇಬಿಗೆ ಮತ್ತಷ್ಟು ಕತ್ತರಿ ಬೀಳಲಿದೆ.
ಶೇ.5 ಮತ್ತು ಶೇ6.5ರ ನಡುವಿನ ಆಲ್ಕೋಹಾಲ್ ಅಂಶ ಹೊಂದಿರುವ ಬಿಯರ್ಗಳ ಮೇಲೆ ಪ್ರತಿ ಬೃಹತ್ ಲೀಟರ್ಗೆ 16 ರೂ. ಸುಂಕವನ್ನು ಪ್ರಸ್ತಾಪಿಸಲಾಗಿದೆ. ಶೇ.5ಕ್ಕಿಂತ ಕಡಿಮೆ ಆಲ್ಕೋಹಾಲ್ ಹೊಂದಿರುವ ಬಿಯರ್ಗಳ ಮೇಲೆ ಪ್ರತಿ ಬಲ್ಕ್ ಲೀಟರ್ಗೆ 10 ರೂ. ಸುಂಕ ಹೆಚ್ಚಳ ಮಾಡುವ ಪ್ರಸ್ತಾಪವಿದೆ. ಈ ನೂತನ ಪರಿಷ್ಕರಣ ದರವು ಅಕ್ಟೋಬರ್ 1ರಿಂದಲೇ ಜಾರಿಯಾಗಲಿದೆ ಎಂದು ವರದಿಯಾಗಿದೆ.
ಸ್ಟ್ರಾಂಗ್ ಬಿಯರ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಳ ಮಾಡುವಂತೆ ಅಬಕಾರಿ ಇಲಾಖೆ ಸಿಎಂ ಸಿದ್ದರಾಮಯ್ಯನವರಿಗೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ಹೀಗಾಗಿ, ಶೀಘ್ರದಲ್ಲೇ ಅಬಕಾರಿ ಅಧಿಕಾರಿಗಳ ಜೊತೆ ಸಭೆ ನಡೆಸಲಿರುವ ಸಿಎಂ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸಿ ಸ್ಟ್ರಾಂಗ್ ಬಿಯರ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಳ ಮಾಡುವುದು ಬಹುತೇಕ ಖಚಿತವಾಗಿದೆ ಎಂದು ತಿಳಿದುಬಂದಿದೆ.
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…
ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…