ಬೆಂಗಳೂರು: ರಾಜ್ಯ ಸರ್ಕಾರವು ಸ್ಟ್ರಾಂಗ್ ಬಿಯರ್ ಮೇಲೆ ಅಬಕಾರಿ ಸುಂಕವನ್ನು ಹೆಚ್ಚಿಸಲು ಸಿದ್ಧವಾಗಿರುವುದರಿಂದ ಬಿಯರ್ ಕುಡಿಯುವವರು ತಮ್ಮ ನೆಚ್ಚಿನ ಪಾನೀಯಕ್ಕೆ ಹೆಚ್ಚಿನ ದರವನ್ನು ಪಾವತಿಸಬೇಕಾಗುತ್ತದೆ ಎಂದು ವರದಿಯಾಗಿದೆ.
ತೆರಿಗೆಗೆ ಪ್ರಸ್ತಾವನೆ ಜಾರಿಯಾದರೆ, ಕೇವಲ ಒಂದು ವರ್ಷಕ್ಕೆ ರಾಜ್ಯದಲ್ಲಿ ಬಿಯರ್ ಬೆಲೆ ಮೂರನೇ ಬಾರಿ ಹೆಚ್ಚಳವಾದಂತಗಲಿದೆ. ಈ ಮೂಲಕ ಬಿಯರ್ ಕುಡಿಯುವವರ ಜೇಬಿಗೆ ಮತ್ತಷ್ಟು ಕತ್ತರಿ ಬೀಳಲಿದೆ.
ಶೇ.5 ಮತ್ತು ಶೇ6.5ರ ನಡುವಿನ ಆಲ್ಕೋಹಾಲ್ ಅಂಶ ಹೊಂದಿರುವ ಬಿಯರ್ಗಳ ಮೇಲೆ ಪ್ರತಿ ಬೃಹತ್ ಲೀಟರ್ಗೆ 16 ರೂ. ಸುಂಕವನ್ನು ಪ್ರಸ್ತಾಪಿಸಲಾಗಿದೆ. ಶೇ.5ಕ್ಕಿಂತ ಕಡಿಮೆ ಆಲ್ಕೋಹಾಲ್ ಹೊಂದಿರುವ ಬಿಯರ್ಗಳ ಮೇಲೆ ಪ್ರತಿ ಬಲ್ಕ್ ಲೀಟರ್ಗೆ 10 ರೂ. ಸುಂಕ ಹೆಚ್ಚಳ ಮಾಡುವ ಪ್ರಸ್ತಾಪವಿದೆ. ಈ ನೂತನ ಪರಿಷ್ಕರಣ ದರವು ಅಕ್ಟೋಬರ್ 1ರಿಂದಲೇ ಜಾರಿಯಾಗಲಿದೆ ಎಂದು ವರದಿಯಾಗಿದೆ.
ಸ್ಟ್ರಾಂಗ್ ಬಿಯರ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಳ ಮಾಡುವಂತೆ ಅಬಕಾರಿ ಇಲಾಖೆ ಸಿಎಂ ಸಿದ್ದರಾಮಯ್ಯನವರಿಗೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ಹೀಗಾಗಿ, ಶೀಘ್ರದಲ್ಲೇ ಅಬಕಾರಿ ಅಧಿಕಾರಿಗಳ ಜೊತೆ ಸಭೆ ನಡೆಸಲಿರುವ ಸಿಎಂ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸಿ ಸ್ಟ್ರಾಂಗ್ ಬಿಯರ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಳ ಮಾಡುವುದು ಬಹುತೇಕ ಖಚಿತವಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರು: ಏಪ್ರಿಲ್.9ರಂದು ನಡೆಯಲಿರುವ ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಬಾಗಲಕೋಟೆ…
ಬೆಂಗಳೂರು: ಅಮೇರಿಕಾದಲ್ಲಿರುವ ಕನ್ನಡಿಗರ ಅತಿ ದೊಡ್ಡ ಸಾಂಸ್ಕೃತಿಕ ಸಂಭ್ರಮವಾಗಿರುವ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್ ಶೆಟ್ಟಿ…
ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯನ್ನು 48 ಗಂಟೆಯೊಳಗೆ ಸಂಪೂರ್ಣ ಓಪನ್ ಮಾಡಬೇಕು ಎಂದು ಇರಾನ್ಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಡುವು…
ಮೈಸೂರಿನ ಶಾರದಾದೇವಿ ನಗರದ ಸರ್ಕಲ್ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ…
ರೈಲ್ವೆ ಇಲಾಖೆಯ ಕನ್ನಡ ವಿರೋಧಿ ನೀತಿ ಇನ್ನೊಮ್ಮೆ ಬಯಲಾಗಿದೆ. ನೇಮಕಾತಿ ಮತ್ತು ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ ನಡೆಸುವುದಾಗಿ ಭರವಸೆ…
ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ಶ್ರೀಕಂಠೇಶ್ವರ ರಥೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಆದರೆ ಇದೇ ಮೊದಲ ಬಾರಿಗೆ…