ರಾಜ್ಯ

Alert | ಚಾರಣಿಗರಿಗೆ ನಿರಾಸೆ ; ಕುದುರೆಮುಖದ 11 ಟ್ರೆಕ್ಕಿಂಗ್‌ ಪಥಗಳಿಗೆ ಅರಣ್ಯ ಇಲಾಖೆ ನಿಷೇಧ

 ಚಿಕ್ಕಮಗಳೂರು : ಕುದುರೆಮುಖ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿರುವ 11 ಪ್ರಮುಖ ಚಾರಣ ಪಥಗಳಿಗೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಲಾಗಿದೆ.

ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್ ಬಾಬು.ಎಂ.ಅವರು, (ಕುದುರೆಮುಖ ವನ್ಯಜೀವಿ ವಿಭಾಗ, ಕಾರ್ಕಳ) ಹೊರಡಿಸಿದ ಆದೇಶದಂತೆ, ಬುಧವಾರದಿಂದಲೇ ಜಾರಿಗೆ ಬರುವಂತೆ ಮುಂದಿನ ಸೂಚನೆ ಹೊರಡುವವರೆಗೆ ಈ ನಿರ್ಬಂಧವನ್ನು ವಿಧಿಸಲಾಗಿದೆ.

ಬೇಸಿಗೆ ಹತ್ತಿರವಾಗುತ್ತಿರುವುದರಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ, ಸೋಮೇಶ್ವರ ಮತ್ತು ಮೂಕಾಂಬಿಕಾ ವನ್ಯಜೀವಿ ಅಭಯಾರಣ್ಯಗಳ ವ್ಯಾಪ್ತಿಯಲ್ಲಿ ಬೆಂಕಿ ಕಾಲ ಆರಂಭವಾಗುತ್ತಿದೆ. ಅರಣ್ಯದಲ್ಲಿ ಒಣ ಎಲೆಗಳು ಮತ್ತು ಹುಲ್ಲು ಹೆಚ್ಚಿರುವುದರಿಂದ ಕಾಡ್ಗಿಚ್ಚು ಸಂಭವಿಸುವ ಅಪಾಯ ಇದೆ. ಈ ಹಿನ್ನೆಲೆಯಲ್ಲಿ ಚಾರಣಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟು ಅರಣ್ಯ ಇಲಾಖೆ ಕೆಲವು ಚಾರಣ ಮಾರ್ಗಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಿದೆ.

ಗಂಗಡಿಕಲ್ ಚಾರಣ, ಕುದುರೆಮುಖ ಚಾರಣ, ಕುರಿಂಜಾಲು ಚಾರಣ, ವಾಲಿಕುಂಜ ಚಾರಣ – ಎಸ್.ಕೆ.ಬಾರ್ಡರ್, ವಾಲಿಕುಂಜ ಚಾರಣ – ಕೆರ್ವಾಶೆ, ನರಸಿಂಹ ಪರ್ವತ – ಕಿಗ್ಗ, ನರಸಿಂಹ ಪರ್ವತ – ಮಳಂದೂರು, ಕೊಡಚಾದ್ರಿ-ವಳೂರು, ಕೊಡಚಾದ್ರಿ – ಹಿಡ್ಲುಮನೆ, ಬಂಡಾಜೆ – ವೊಳಂಬ್ರ, ನೇತ್ರಾವತಿ ಚಾರಣಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗಿದೆ.

ಈ ಬಗ್ಗೆ ವ್ಯಾಪಕ ಪ್ರಚಾರ ನೀಡಲು ಹಾಗೂ ಸೂಚನಾ ಫಲಕಗಳನ್ನು ಅಳವಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಅಲ್ಲದೆ, ಪ್ರವೇಶ ನಿಷೇಧಿಸಿರುವ ಜಾಗಗಳಲ್ಲಿ ಕಾವಲುಗಾರರನ್ನು ನೇಮಿಸಿ ಸೂಕ್ತ ಕ್ರಮ ವಹಿಸಲಾಗುವುದು ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಇತರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಕಾಡ್ಗಿಚ್ಚು ಹೆಚ್ಚಾಗಿ ಮಾನವನಿಂದಲೇ ಹೆಚ್ಚಾಗಿ ಸಂಭವಿಸುತ್ತಿವೆ. ಹಿಂದಿನ ವರ್ಷಗಳಲ್ಲಿ ಅನೇಕ ಘಟನೆಗಳು ಉದ್ದೇಶಪೂರ್ವಕವಾಗಿಯೋ ಅಥವಾ ಗೊತ್ತಿಲ್ಲದೆಯೇ ಚಾರಣಕ್ಕೆ ಬಂದವರಿಂದ ಸಂಭವಿಸಿದೆ. ಸಮಗ್ರ ತಪಾಸಣೆ, ಜಾಗೃತಿ ಕಾರ್ಯಕ್ರಮಗಳು ಹಾಗೂ ಮಾರ್ಗದರ್ಶಕರ ನಿಯೋಜನೆಯಿದ್ದರೂ ಸಹ ಈ ಘಟನೆಗಳು ನಡೆದಿವೆ.

ಹೀಗಾಗಿ ಈ ಬಾರಿ ಬೇಸಿಗೆ ಆರಂಭಕ್ಕೂ ಮುನ್ನವೇ ರಾಜ್ಯದಾದ್ಯಂತ ಟ್ರಕ್ಕಿಂಗ್ ಅನ್ನು ಬಂದ್ ಮಾಡಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಗಣತಿ ಕಾರ್ಯ ನಡೆಯುತ್ತಿರುವುದೂ ಕೂಡ ಮತ್ತೊಂದು ಕಾರಣವಾಗಿದೆ. ಹುಲಿ ಗಣತಿ ಹಾಗೂ ಮಾನವವನ್ಯಜೀವಿ ಸಂಘರ್ಷ ತಡೆಯುವ ಕಾರ್ಯದಲ್ಲಿ ಸಿಬ್ಬಂದಿ ತೊಡಗಿಸಿಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ಟ್ರಕ್ಕಿಂಗ್‍ಗೆ ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಕಷ್ಟಕರ. ಅಲ್ಲದೆ, ಈ ಬಾರಿ ಗಣತಿ ಕಾರ್ಯಕ್ಕೆ ಸ್ವಯಂಸೇವಕರನ್ನು ಸೇರ್ಪಡೆಗೊಳಿಸಲಾಗಿಲ್ಲ. ಹೀಗಾಗಿ ಸಾರ್ವಜನಿಕರಿಗೆ ಅರಣ್ಯ ಪ್ರವೇಶ ನಿರ್ಬಂಧಿಸಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

42 mins ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

1 hour ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

2 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

4 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

7 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

7 hours ago