ರಾಜ್ಯ

Alert | ಚಾರಣಿಗರಿಗೆ ನಿರಾಸೆ ; ಕುದುರೆಮುಖದ 11 ಟ್ರೆಕ್ಕಿಂಗ್‌ ಪಥಗಳಿಗೆ ಅರಣ್ಯ ಇಲಾಖೆ ನಿಷೇಧ

 ಚಿಕ್ಕಮಗಳೂರು : ಕುದುರೆಮುಖ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿರುವ 11 ಪ್ರಮುಖ ಚಾರಣ ಪಥಗಳಿಗೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಲಾಗಿದೆ.

ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್ ಬಾಬು.ಎಂ.ಅವರು, (ಕುದುರೆಮುಖ ವನ್ಯಜೀವಿ ವಿಭಾಗ, ಕಾರ್ಕಳ) ಹೊರಡಿಸಿದ ಆದೇಶದಂತೆ, ಬುಧವಾರದಿಂದಲೇ ಜಾರಿಗೆ ಬರುವಂತೆ ಮುಂದಿನ ಸೂಚನೆ ಹೊರಡುವವರೆಗೆ ಈ ನಿರ್ಬಂಧವನ್ನು ವಿಧಿಸಲಾಗಿದೆ.

ಬೇಸಿಗೆ ಹತ್ತಿರವಾಗುತ್ತಿರುವುದರಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ, ಸೋಮೇಶ್ವರ ಮತ್ತು ಮೂಕಾಂಬಿಕಾ ವನ್ಯಜೀವಿ ಅಭಯಾರಣ್ಯಗಳ ವ್ಯಾಪ್ತಿಯಲ್ಲಿ ಬೆಂಕಿ ಕಾಲ ಆರಂಭವಾಗುತ್ತಿದೆ. ಅರಣ್ಯದಲ್ಲಿ ಒಣ ಎಲೆಗಳು ಮತ್ತು ಹುಲ್ಲು ಹೆಚ್ಚಿರುವುದರಿಂದ ಕಾಡ್ಗಿಚ್ಚು ಸಂಭವಿಸುವ ಅಪಾಯ ಇದೆ. ಈ ಹಿನ್ನೆಲೆಯಲ್ಲಿ ಚಾರಣಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟು ಅರಣ್ಯ ಇಲಾಖೆ ಕೆಲವು ಚಾರಣ ಮಾರ್ಗಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಿದೆ.

ಗಂಗಡಿಕಲ್ ಚಾರಣ, ಕುದುರೆಮುಖ ಚಾರಣ, ಕುರಿಂಜಾಲು ಚಾರಣ, ವಾಲಿಕುಂಜ ಚಾರಣ – ಎಸ್.ಕೆ.ಬಾರ್ಡರ್, ವಾಲಿಕುಂಜ ಚಾರಣ – ಕೆರ್ವಾಶೆ, ನರಸಿಂಹ ಪರ್ವತ – ಕಿಗ್ಗ, ನರಸಿಂಹ ಪರ್ವತ – ಮಳಂದೂರು, ಕೊಡಚಾದ್ರಿ-ವಳೂರು, ಕೊಡಚಾದ್ರಿ – ಹಿಡ್ಲುಮನೆ, ಬಂಡಾಜೆ – ವೊಳಂಬ್ರ, ನೇತ್ರಾವತಿ ಚಾರಣಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗಿದೆ.

ಈ ಬಗ್ಗೆ ವ್ಯಾಪಕ ಪ್ರಚಾರ ನೀಡಲು ಹಾಗೂ ಸೂಚನಾ ಫಲಕಗಳನ್ನು ಅಳವಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಅಲ್ಲದೆ, ಪ್ರವೇಶ ನಿಷೇಧಿಸಿರುವ ಜಾಗಗಳಲ್ಲಿ ಕಾವಲುಗಾರರನ್ನು ನೇಮಿಸಿ ಸೂಕ್ತ ಕ್ರಮ ವಹಿಸಲಾಗುವುದು ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಇತರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಕಾಡ್ಗಿಚ್ಚು ಹೆಚ್ಚಾಗಿ ಮಾನವನಿಂದಲೇ ಹೆಚ್ಚಾಗಿ ಸಂಭವಿಸುತ್ತಿವೆ. ಹಿಂದಿನ ವರ್ಷಗಳಲ್ಲಿ ಅನೇಕ ಘಟನೆಗಳು ಉದ್ದೇಶಪೂರ್ವಕವಾಗಿಯೋ ಅಥವಾ ಗೊತ್ತಿಲ್ಲದೆಯೇ ಚಾರಣಕ್ಕೆ ಬಂದವರಿಂದ ಸಂಭವಿಸಿದೆ. ಸಮಗ್ರ ತಪಾಸಣೆ, ಜಾಗೃತಿ ಕಾರ್ಯಕ್ರಮಗಳು ಹಾಗೂ ಮಾರ್ಗದರ್ಶಕರ ನಿಯೋಜನೆಯಿದ್ದರೂ ಸಹ ಈ ಘಟನೆಗಳು ನಡೆದಿವೆ.

ಹೀಗಾಗಿ ಈ ಬಾರಿ ಬೇಸಿಗೆ ಆರಂಭಕ್ಕೂ ಮುನ್ನವೇ ರಾಜ್ಯದಾದ್ಯಂತ ಟ್ರಕ್ಕಿಂಗ್ ಅನ್ನು ಬಂದ್ ಮಾಡಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಗಣತಿ ಕಾರ್ಯ ನಡೆಯುತ್ತಿರುವುದೂ ಕೂಡ ಮತ್ತೊಂದು ಕಾರಣವಾಗಿದೆ. ಹುಲಿ ಗಣತಿ ಹಾಗೂ ಮಾನವವನ್ಯಜೀವಿ ಸಂಘರ್ಷ ತಡೆಯುವ ಕಾರ್ಯದಲ್ಲಿ ಸಿಬ್ಬಂದಿ ತೊಡಗಿಸಿಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ಟ್ರಕ್ಕಿಂಗ್‍ಗೆ ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಕಷ್ಟಕರ. ಅಲ್ಲದೆ, ಈ ಬಾರಿ ಗಣತಿ ಕಾರ್ಯಕ್ಕೆ ಸ್ವಯಂಸೇವಕರನ್ನು ಸೇರ್ಪಡೆಗೊಳಿಸಲಾಗಿಲ್ಲ. ಹೀಗಾಗಿ ಸಾರ್ವಜನಿಕರಿಗೆ ಅರಣ್ಯ ಪ್ರವೇಶ ನಿರ್ಬಂಧಿಸಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರಿನಲ್ಲಿ ಮುಂದುವರಿದ ಕಾಡುಪ್ರಾಣಿಗಳ ಉಪಟಳ

ಮೈಸೂರು: ಮೈಸೂರಿನಲ್ಲಿ ಕಾಡುಪ್ರಾಣಿಗಳ ಉಪಟಳ ಮುಂದುವರಿದಿದ್ದು, ಚಿರತೆಯೊಂದ ನಾಯಿ ಬೇಟೆಯಾಡಿರುವ ಘಟನೆ ಗೌರಿಶಂಕರನಗರದ ಗವಿಮಠದ ಹತ್ತಿರ ನಡೆದಿದೆ. ರಾತ್ರೋರಾತ್ರಿ ಚಿರತೆಯೊಂದು…

26 mins ago

ಓದುಗರ ಪತ್ರ: ಚಿನ್ನದ ಹೆಸರಿನಲ್ಲಾಗುವ ವಂಚನೆಯನ್ನು ತಡೆಗಟ್ಟಿ

ಚಿನ್ನದ ಹೂಡಿಕೆಯ ಹೆಸರಿನಲ್ಲಿ ನಡೆಯುತ್ತಿರುವ ವಂಚನೆ ಅತ್ಯಂತ ಸಂಕೀರ್ಣವೂ ಮತ್ತು ವ್ಯವಸ್ಥಿತವೂ ಆಗಿದೆ. ವಂಚಕರು ಮುಖ್ಯವಾಗಿ ಪೊಂಜಿ ಮಾದರಿಯ ಯೋಜನೆಗಳನ್ನು…

58 mins ago

ಓದುಗರ ಪತ್ರ: ವಿಜಯ್ ಉತ್ತಮ ಆಡಳಿತ ನೀಡಲಿ

ತಮಿಳುನಾಡಿನ ‘ತಮಿಳಿಗ ವೆಟ್ರಿ ಕಳಗಂ’ ಪಕ್ಷದ ಸ್ಥಾಪಕ ಜೋಸೆಫ್ ವಿಜಯ್ ಅವರು ಕೇವಲ ಎರಡು ವರ್ಷಗಳ ಹಿಂದೆ ರಾಜಕೀಯ ಪಕ್ಷ…

60 mins ago

ಓದುಗರ ಪತ್ರ: ಖಾಸಗಿ ಅಂಗಡಿಗಳ ಮಾಲೀಕರಿಂದ ರಸ್ತೆ ಅತಿಕ್ರಮಣ

ಮೈಸೂರು ನಗರದ ಅಶೋಕ ರಸ್ತೆ, ದೇವರಾಜ ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆ, ಧನ್ವಂತರಿ ರಸ್ತೆ, ಶಿವರಾಂ ಪೇಟೆಯ ಹಲವಾರು ಕಡೆಗಳಲ್ಲಿ…

1 hour ago

ಓದುಗರ ಪತ್ರ: ಕೆರೆಗೆ ಘನತ್ಯಾಜ್ಯ ಸುರಿಯುವುದನ್ನು ತಡೆಗಟ್ಟಿ

ಮೈಸೂರಿನ ಅಜ್ಜಯ್ಯನಹುಂಡಿ ಕೆರೆಯ ಬಳಿ ಕಟ್ಟಡ ನಿರ್ಮಾಣ ತ್ಯಾಜ್ಯ ಮತ್ತು ಘನತ್ಯಾಜ್ಯವನ್ನು ಸುರಿಯುತ್ತಿರುವುದರಿಂದ ಕೆರೆ ಕಲುಷಿತವಾಗುತ್ತಿದೆ. ವರ್ತುಲ ರಸ್ತೆ ನಿರ್ಮಾಣವಾಗಿದ್ದರಿಂದ…

1 hour ago

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ಪಿಎಗೆ ಗುಂಡಿಕ್ಕಿ ಹತ್ಯೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಫಲಿತಾಂಶ ಬಳಿಕ ಹಿಂಸಾಚಾರ ತೀವ್ರಗೊಂಡಿದ್ದು, ಬಿಜೆಪಿ ಹಿರಿಯ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ…

1 hour ago