ರಾಜ್ಯ

Alert | ಚಾರಣಿಗರಿಗೆ ನಿರಾಸೆ ; ಕುದುರೆಮುಖದ 11 ಟ್ರೆಕ್ಕಿಂಗ್‌ ಪಥಗಳಿಗೆ ಅರಣ್ಯ ಇಲಾಖೆ ನಿಷೇಧ

 ಚಿಕ್ಕಮಗಳೂರು : ಕುದುರೆಮುಖ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿರುವ 11 ಪ್ರಮುಖ ಚಾರಣ ಪಥಗಳಿಗೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಲಾಗಿದೆ.

ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್ ಬಾಬು.ಎಂ.ಅವರು, (ಕುದುರೆಮುಖ ವನ್ಯಜೀವಿ ವಿಭಾಗ, ಕಾರ್ಕಳ) ಹೊರಡಿಸಿದ ಆದೇಶದಂತೆ, ಬುಧವಾರದಿಂದಲೇ ಜಾರಿಗೆ ಬರುವಂತೆ ಮುಂದಿನ ಸೂಚನೆ ಹೊರಡುವವರೆಗೆ ಈ ನಿರ್ಬಂಧವನ್ನು ವಿಧಿಸಲಾಗಿದೆ.

ಬೇಸಿಗೆ ಹತ್ತಿರವಾಗುತ್ತಿರುವುದರಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ, ಸೋಮೇಶ್ವರ ಮತ್ತು ಮೂಕಾಂಬಿಕಾ ವನ್ಯಜೀವಿ ಅಭಯಾರಣ್ಯಗಳ ವ್ಯಾಪ್ತಿಯಲ್ಲಿ ಬೆಂಕಿ ಕಾಲ ಆರಂಭವಾಗುತ್ತಿದೆ. ಅರಣ್ಯದಲ್ಲಿ ಒಣ ಎಲೆಗಳು ಮತ್ತು ಹುಲ್ಲು ಹೆಚ್ಚಿರುವುದರಿಂದ ಕಾಡ್ಗಿಚ್ಚು ಸಂಭವಿಸುವ ಅಪಾಯ ಇದೆ. ಈ ಹಿನ್ನೆಲೆಯಲ್ಲಿ ಚಾರಣಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟು ಅರಣ್ಯ ಇಲಾಖೆ ಕೆಲವು ಚಾರಣ ಮಾರ್ಗಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಿದೆ.

ಗಂಗಡಿಕಲ್ ಚಾರಣ, ಕುದುರೆಮುಖ ಚಾರಣ, ಕುರಿಂಜಾಲು ಚಾರಣ, ವಾಲಿಕುಂಜ ಚಾರಣ – ಎಸ್.ಕೆ.ಬಾರ್ಡರ್, ವಾಲಿಕುಂಜ ಚಾರಣ – ಕೆರ್ವಾಶೆ, ನರಸಿಂಹ ಪರ್ವತ – ಕಿಗ್ಗ, ನರಸಿಂಹ ಪರ್ವತ – ಮಳಂದೂರು, ಕೊಡಚಾದ್ರಿ-ವಳೂರು, ಕೊಡಚಾದ್ರಿ – ಹಿಡ್ಲುಮನೆ, ಬಂಡಾಜೆ – ವೊಳಂಬ್ರ, ನೇತ್ರಾವತಿ ಚಾರಣಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗಿದೆ.

ಈ ಬಗ್ಗೆ ವ್ಯಾಪಕ ಪ್ರಚಾರ ನೀಡಲು ಹಾಗೂ ಸೂಚನಾ ಫಲಕಗಳನ್ನು ಅಳವಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಅಲ್ಲದೆ, ಪ್ರವೇಶ ನಿಷೇಧಿಸಿರುವ ಜಾಗಗಳಲ್ಲಿ ಕಾವಲುಗಾರರನ್ನು ನೇಮಿಸಿ ಸೂಕ್ತ ಕ್ರಮ ವಹಿಸಲಾಗುವುದು ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಇತರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಕಾಡ್ಗಿಚ್ಚು ಹೆಚ್ಚಾಗಿ ಮಾನವನಿಂದಲೇ ಹೆಚ್ಚಾಗಿ ಸಂಭವಿಸುತ್ತಿವೆ. ಹಿಂದಿನ ವರ್ಷಗಳಲ್ಲಿ ಅನೇಕ ಘಟನೆಗಳು ಉದ್ದೇಶಪೂರ್ವಕವಾಗಿಯೋ ಅಥವಾ ಗೊತ್ತಿಲ್ಲದೆಯೇ ಚಾರಣಕ್ಕೆ ಬಂದವರಿಂದ ಸಂಭವಿಸಿದೆ. ಸಮಗ್ರ ತಪಾಸಣೆ, ಜಾಗೃತಿ ಕಾರ್ಯಕ್ರಮಗಳು ಹಾಗೂ ಮಾರ್ಗದರ್ಶಕರ ನಿಯೋಜನೆಯಿದ್ದರೂ ಸಹ ಈ ಘಟನೆಗಳು ನಡೆದಿವೆ.

ಹೀಗಾಗಿ ಈ ಬಾರಿ ಬೇಸಿಗೆ ಆರಂಭಕ್ಕೂ ಮುನ್ನವೇ ರಾಜ್ಯದಾದ್ಯಂತ ಟ್ರಕ್ಕಿಂಗ್ ಅನ್ನು ಬಂದ್ ಮಾಡಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಗಣತಿ ಕಾರ್ಯ ನಡೆಯುತ್ತಿರುವುದೂ ಕೂಡ ಮತ್ತೊಂದು ಕಾರಣವಾಗಿದೆ. ಹುಲಿ ಗಣತಿ ಹಾಗೂ ಮಾನವವನ್ಯಜೀವಿ ಸಂಘರ್ಷ ತಡೆಯುವ ಕಾರ್ಯದಲ್ಲಿ ಸಿಬ್ಬಂದಿ ತೊಡಗಿಸಿಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ಟ್ರಕ್ಕಿಂಗ್‍ಗೆ ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಕಷ್ಟಕರ. ಅಲ್ಲದೆ, ಈ ಬಾರಿ ಗಣತಿ ಕಾರ್ಯಕ್ಕೆ ಸ್ವಯಂಸೇವಕರನ್ನು ಸೇರ್ಪಡೆಗೊಳಿಸಲಾಗಿಲ್ಲ. ಹೀಗಾಗಿ ಸಾರ್ವಜನಿಕರಿಗೆ ಅರಣ್ಯ ಪ್ರವೇಶ ನಿರ್ಬಂಧಿಸಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ | ನೀರು ಬಿಟ್ಟು ರೈತರಿಗೆ ಅನುಕೂಲ ಕಲ್ಪಿಸಿ

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…

5 hours ago

ಓದುಗರ ಪತ್ರ | ಈ ವಿಶಾಲ ಪಾರ್ಕ್‌ಗೆ ಬೇಕು ಶೌಚಾಲಯ

ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…

5 hours ago

ಓದುಗರ ಪತ್ರ | ಚರಂಡಿ ಸೇರುತ್ತಿರುವ ನೀರಿಗೆ ‘ತಡೆ’ಹಾಕಿ

ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…

5 hours ago

ನಾಡಿನುದ್ದಕ್ಕೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಂಪು

ಡಿಸೆಂಬರ್‌ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ವಾದಕ್ಕೆ ಮನಸೋತಿದ್ದ ಬಳ್ಳಾರಿ ಸಿದ್ದಮ್ಮ

ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಆಹಾರದ ಕುರಿತು ಕೆಲವು ಚಿಲ್ಲರೆ ಪ್ರಯೋಗಗಳು

ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…

6 hours ago