ರಾಜ್ಯ

ನನಗೆ ಎಲ್ಲಾ ದಿನಗಳು ಒಂದೆ, ಯುಗಾದಿ, ಶಿವರಾತ್ರಿ ದಿನವೂ ಮಾಂಸ ತಿನ್ನುತ್ತೇವೆ : ಮುಖ್ಯಮಂತ್ರಿ

ಬೆಂಗಳೂರು : ಯುಗಾದಿ, ಶಿವರಾತ್ರಿಯ ಹಬ್ಬದ ದಿನವೂ ನಾನು ಮಾಂಸ ತಿನ್ನುತ್ತೇನೆ. ಅದರಲ್ಲಿ ತಪ್ಪೇನು? ಎಲ್ಲಾ ದಿನಗಳು ಒಂದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಬಜೆಟ್ ಮೇಲೆ ನಡೆದ ಚರ್ಚೆಗೆ ಉತ್ತರ ನೀಡುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ಮ ಸಿದ್ದಾಂತವನ್ನು ತಾವು ನಂಬುವುದಿಲ್ಲ. ರಾಹುಕಾಲ ಗುಳಿಕಕಾಲ, ಯಮಗಂಡಕಾಲ ಯಾವುದರ ಮೇಲೂ ನಂಬಿಕೆ ಇಲ್ಲ, ದೇವರನ್ನು ನಂಬುತ್ತೇನೆ. ಆದರೆ ಮೂಢನಂಬಿಕೆಗಳಿಗೆ ಜೋತು ಬೀಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಬಹಳಷ್ಟು ಜನ ತಮ್ಮ ಈಗಿನ ಸ್ಥಿತಿ ಅಥವಾ ದುಃಸ್ಥಿತಿಗೆ ಹಿಂದಿನ ಜನ್ಮದ ಕರ್ಮ ಎಂದು ನಂಬುತ್ತಾರೆ. ನಾನು ಅದನ್ನು ನಂಬುವುದಿಲ್ಲ ಮೂಢ ನಂಬಿಕೆಗಳಿಂದ ದೂರ ಇದ್ದೇನೆ ಎಂದರು. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳುವುದು ಒಂದು, ಮಾಡುವುದು ಇನ್ನೊಂದು. ರಾಹುಕಾಲ ಕಳೆದ ಬಳಿಕ ಈ ಬಾರಿಯ ಬಜೆಟ್ ಮಂಡಿಸಿದ್ದೀರಾ, ಅಂಬೇಡ್ಕರ್ ಬಸವಣ್ಣ ಸೇರಿದಂತೆ ಹಲವಾರು ಸಿದ್ಧಾಂತಗಳನ್ನು ಹೇಳುತ್ತೀರಾ. ಆದರೆ ನಿಮ್ಮ ಸಿದ್ಧಾಂತ ಯಾವುದು ಎಂದರು.

ರಾಜಕೀಯವಾಗಿ ಅಧಿಕಾರಕ್ಕಾಗಿ ನಾವೆಲ್ಲ ಕಾಯುತ್ತಿದ್ದೇವೆ. ಆದರೆ ನಿಮಗೆ ಎಲ್ಲಾ ಕಡೆ ಬಾಗಿಲು ತೆರೆದುಕೊಂಡು ಅವಕಾಶಗಳು ಸಿಕ್ಕವು. ಜನತಾದಳದಲ್ಲಿ ಉಪಮುಖ್ಯಮಂತ್ರಿಯಾಗಿದ್ದೀರಿ. ಕಾಂಗ್ರೆಸ್‍ಗೆ ಬಂದು ಮುಖ್ಯಮಂತ್ರಿಯಾಗಿದಿರಾ. ನೀವು ಎಲ್ಲಿಗೆ ಹೋದರೂ ಅವಕಾಶ ಒದಗಿ ಬರುತ್ತಿದೆ. ಡಿ.ಕೆ.ಶಿವಕುಮಾರ್ ಅವರನ್ನು ನೋಡಿ, ಪಾಪ ದೇವಸ್ಥಾನ ಸುತ್ತುತ್ತಿದ್ದಾರೆ. ಕಾಮಾಖ್ಯದಲ್ಲಿ ಪೂಜೆ ಮಾಡಿಸಿದ್ದಾರೆ ಎಂದು ಹೇಳುತ್ತಿದ್ದಂತೆ ಖುದ್ದು ಶಿವಕುಮಾರ್ ಆಗಮಿಸಿದರು.

ಇದಕ್ಕೆ ಉತ್ತರ ನೀಡಿದ ಮುಖ್ಯಮಂತ್ರಿ ಅವರು, ನಾನು ಹಿಂದೆ ರಾಹುಕಾಲದಲ್ಲೂ ಬಜೆಟ್ ಮಂಡಿಸಿದ್ದೇನೆ. ಈ ಬಾರಿ ರಾಹುಕಾಲ ಕಳೆದ ಬಳಿಕ ಬಜೆಟ್ ಮಂಡಿಸಿದ್ದು ನಿಜ. ಅಧಿಕಾರಿಗಳು ಮತ್ತು ಮನೆಯವರು ಹೇಳಿದಂತೆ ಕೇಳಬೇಕಲ್ಲವೇ ಎಂದರು. ಆಗ ಅಶೋಕ್ ಅವರು, ಈ ಹಿಂದೆ ರಾಹುಕಾಲದಲ್ಲಿ ಬಜೆಟ್ ಮಂಡಿಸಿದ ಸಂದರ್ಭವೇ ಬೇರೆ, ಈಗ ಮುಂದಿನ ಬಜೆಟ್ ಅನ್ನು ನೀವು ಮಂಡಿಸುತ್ತೀರೋ, ಇಲ್ಲವೋ ಎಂಬ ಗೊಂದಲದ ವಾತಾವರಣ ಇದೆ. ಅದಕ್ಕಾಗಿ ಕಾಲ ನೋಡಿ ಬಜೆಟ್ ಮಂಡಿಸಿ, ಮುಂದಿನ ಬಜೆಟ್ ಪೀಠಿಕೆ ಹಾಕಿಕೊಂಡಿದ್ದೀರಾ ಎಂದರು. ಆಗ ಸಿದ್ದರಾಮಯ್ಯ ಅವರು ನನಗೆ ಯಾವ ಕಾಲದ ಮೇಲೂ ನಂಬಿಕೆ ಇಲ್ಲ. ಹಬ್ಬದ ದಿನವೂ ಕೂಡ ಮಾಂಸ ತಿನ್ನುತ್ತೇನೆ. ಎಲ್ಲವೂ ಅವರ ನಂಬಿಕೆ ಎಂದರು.

ಆಂದೋಲನ ಡೆಸ್ಕ್

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

2 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

2 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

2 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

2 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

2 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

3 hours ago