ಬೆಂಗಳೂರು : ಯುಗಾದಿ, ಶಿವರಾತ್ರಿಯ ಹಬ್ಬದ ದಿನವೂ ನಾನು ಮಾಂಸ ತಿನ್ನುತ್ತೇನೆ. ಅದರಲ್ಲಿ ತಪ್ಪೇನು? ಎಲ್ಲಾ ದಿನಗಳು ಒಂದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಬಜೆಟ್ ಮೇಲೆ ನಡೆದ ಚರ್ಚೆಗೆ ಉತ್ತರ ನೀಡುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ಮ ಸಿದ್ದಾಂತವನ್ನು ತಾವು ನಂಬುವುದಿಲ್ಲ. ರಾಹುಕಾಲ ಗುಳಿಕಕಾಲ, ಯಮಗಂಡಕಾಲ ಯಾವುದರ ಮೇಲೂ ನಂಬಿಕೆ ಇಲ್ಲ, ದೇವರನ್ನು ನಂಬುತ್ತೇನೆ. ಆದರೆ ಮೂಢನಂಬಿಕೆಗಳಿಗೆ ಜೋತು ಬೀಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಬಹಳಷ್ಟು ಜನ ತಮ್ಮ ಈಗಿನ ಸ್ಥಿತಿ ಅಥವಾ ದುಃಸ್ಥಿತಿಗೆ ಹಿಂದಿನ ಜನ್ಮದ ಕರ್ಮ ಎಂದು ನಂಬುತ್ತಾರೆ. ನಾನು ಅದನ್ನು ನಂಬುವುದಿಲ್ಲ ಮೂಢ ನಂಬಿಕೆಗಳಿಂದ ದೂರ ಇದ್ದೇನೆ ಎಂದರು. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳುವುದು ಒಂದು, ಮಾಡುವುದು ಇನ್ನೊಂದು. ರಾಹುಕಾಲ ಕಳೆದ ಬಳಿಕ ಈ ಬಾರಿಯ ಬಜೆಟ್ ಮಂಡಿಸಿದ್ದೀರಾ, ಅಂಬೇಡ್ಕರ್ ಬಸವಣ್ಣ ಸೇರಿದಂತೆ ಹಲವಾರು ಸಿದ್ಧಾಂತಗಳನ್ನು ಹೇಳುತ್ತೀರಾ. ಆದರೆ ನಿಮ್ಮ ಸಿದ್ಧಾಂತ ಯಾವುದು ಎಂದರು.
ರಾಜಕೀಯವಾಗಿ ಅಧಿಕಾರಕ್ಕಾಗಿ ನಾವೆಲ್ಲ ಕಾಯುತ್ತಿದ್ದೇವೆ. ಆದರೆ ನಿಮಗೆ ಎಲ್ಲಾ ಕಡೆ ಬಾಗಿಲು ತೆರೆದುಕೊಂಡು ಅವಕಾಶಗಳು ಸಿಕ್ಕವು. ಜನತಾದಳದಲ್ಲಿ ಉಪಮುಖ್ಯಮಂತ್ರಿಯಾಗಿದ್ದೀರಿ. ಕಾಂಗ್ರೆಸ್ಗೆ ಬಂದು ಮುಖ್ಯಮಂತ್ರಿಯಾಗಿದಿರಾ. ನೀವು ಎಲ್ಲಿಗೆ ಹೋದರೂ ಅವಕಾಶ ಒದಗಿ ಬರುತ್ತಿದೆ. ಡಿ.ಕೆ.ಶಿವಕುಮಾರ್ ಅವರನ್ನು ನೋಡಿ, ಪಾಪ ದೇವಸ್ಥಾನ ಸುತ್ತುತ್ತಿದ್ದಾರೆ. ಕಾಮಾಖ್ಯದಲ್ಲಿ ಪೂಜೆ ಮಾಡಿಸಿದ್ದಾರೆ ಎಂದು ಹೇಳುತ್ತಿದ್ದಂತೆ ಖುದ್ದು ಶಿವಕುಮಾರ್ ಆಗಮಿಸಿದರು.
ಇದಕ್ಕೆ ಉತ್ತರ ನೀಡಿದ ಮುಖ್ಯಮಂತ್ರಿ ಅವರು, ನಾನು ಹಿಂದೆ ರಾಹುಕಾಲದಲ್ಲೂ ಬಜೆಟ್ ಮಂಡಿಸಿದ್ದೇನೆ. ಈ ಬಾರಿ ರಾಹುಕಾಲ ಕಳೆದ ಬಳಿಕ ಬಜೆಟ್ ಮಂಡಿಸಿದ್ದು ನಿಜ. ಅಧಿಕಾರಿಗಳು ಮತ್ತು ಮನೆಯವರು ಹೇಳಿದಂತೆ ಕೇಳಬೇಕಲ್ಲವೇ ಎಂದರು. ಆಗ ಅಶೋಕ್ ಅವರು, ಈ ಹಿಂದೆ ರಾಹುಕಾಲದಲ್ಲಿ ಬಜೆಟ್ ಮಂಡಿಸಿದ ಸಂದರ್ಭವೇ ಬೇರೆ, ಈಗ ಮುಂದಿನ ಬಜೆಟ್ ಅನ್ನು ನೀವು ಮಂಡಿಸುತ್ತೀರೋ, ಇಲ್ಲವೋ ಎಂಬ ಗೊಂದಲದ ವಾತಾವರಣ ಇದೆ. ಅದಕ್ಕಾಗಿ ಕಾಲ ನೋಡಿ ಬಜೆಟ್ ಮಂಡಿಸಿ, ಮುಂದಿನ ಬಜೆಟ್ ಪೀಠಿಕೆ ಹಾಕಿಕೊಂಡಿದ್ದೀರಾ ಎಂದರು. ಆಗ ಸಿದ್ದರಾಮಯ್ಯ ಅವರು ನನಗೆ ಯಾವ ಕಾಲದ ಮೇಲೂ ನಂಬಿಕೆ ಇಲ್ಲ. ಹಬ್ಬದ ದಿನವೂ ಕೂಡ ಮಾಂಸ ತಿನ್ನುತ್ತೇನೆ. ಎಲ್ಲವೂ ಅವರ ನಂಬಿಕೆ ಎಂದರು.
ಮೈಸೂರು : ಕೆಎಸ್ಆರ್ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…
ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…
ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…