ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಫ್ರೀಡಂಪಾರ್ಕ್ ನಲ್ಲಿ “ಮನರೇಗಾ ಬಚಾವೋ ಆಂದೋಲನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಹಾತ್ಮಗಾಂಧಿ ಹೆಸರು ಕೇಳಿದರೆ ಇವರಿಗೆ ಆಗಲ್ಲ. ದುರುದ್ದೇಶದಿಂದ ಮನ್ ರೇಗಾ ಹೆಸರು ಬದಲಾವಣೆ ಮಾಡಿ ‘ವಿಬಿ ಜೀ ರಾಮ್ ಜೀ’ ಜಾರಿ ಮಾಡಿದ್ದಾರೆ.
ಮನ್ ರೇಗಾ ಯೋಜನೆಯಲ್ಲಿ ರಾಮ ಅನ್ನೋ ಹೆಸರು ಬರುವ ರೀತಿ ಯೋಜನೆ ಮಾಡಿದ್ದಾರೆ. ದಶರಥ ರಾಮ ಇಲ್ಲ ಕೌಶಲ್ಯ ರಾಮ ಇಲ್ಲ ಸೀತಾ ರಾಮ ಸಹ ಇಲ್ಲ. ಈ ಕಾಯ್ದೆಯಲ್ಲಿ ರಾಮ ಇಲ್ಲ. ಬಡವರು ದಲಿತರು, ರೈತರ ಬಗ್ಗೆ ಚಿಂತಿಸುವುದು ಕಾಂಗ್ರೆಸ್ ಮಾತ್ರ. ಬಡವರ ಬಗ್ಗೆ ಮಾತಾಡುವುದು ಕಾಂಗ್ರೆಸ್ ಮಾತ್ರ. RSS ಮಾರ್ಗದರ್ಶನದಂತೆ ಬಡವರ ಕಾರ್ಯಕ್ರಮಗಳನ್ನ ಬಿಜೆಪಿಯವರು ರದ್ದು ಮಾಡಿದ್ದಾರೆ. ಆರ್ಎಸ್ಎಸ್ನವರಿಗೆ ಬಡವರು ಮುಖ್ಯವಾಹಿನಿಗೆ ಬರುವುದು ಬೇಕಾಗಿಲ್ಲ. ಬಡವರು ಬಡವರಾಗಿಯೇ ಉಳಿದು ಸದಾಕಾಲ ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ ಸಿದ್ಧಾಂತ. ಬಡವರ ವಿರೋಧಿ ಬಿಜೆಪಿ ಬಡವರ ಪರವಾದ ಎಲ್ಲ ಕಾರ್ಯಕ್ರಮಗಳನ್ನೂ ರದ್ದುಗೊಳಿಸುತ್ತಿದೆ ಎಂದು ಸಿದ್ದರಾಮಯ್ಯ ಅವರು ಆಕ್ರೋಶ ಹೊರಹಾಕಿದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…