ರಾಜ್ಯ

ನನಗೆ ಇರುವುದು ಬಿಡದಿ ಬಳಿ ಜಮೀನು ಮಾತ್ರ : ಡಿಕೆಶಿ ಯಾವ ಕಷ್ಟಪಟ್ಟು ಇಷ್ಟು ಆಸ್ತಿ ಸಂಪಾದಿಸಿದ್ದಾರೆ? :ಹೆಚ್‌ಡಿಕೆ

ಬೆಂಗಳೂರು : ನಗರದ ಸುತ್ತಮುತ್ತ 1000 ಎಕರೆ ಕುಮಾರಸ್ವಾಮಿಗೆ ಜಮೀನು ಇದೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಹೌದು.. ನನ್ನದು ಬಿಡದಿಯ ಬಳಿ 45-48 ಎಕರೆ ಭೂಮಿ ಇದೆ. ಸಿನಿಮಾದಲ್ಲಿ ದುಡಿದ ದುಡ್ಡಿನಲ್ಲಿ ಅದನ್ನು ಖರೀದಿ ಮಾಡಿದ್ದು. ರಾಜಕೀಯಕ್ಕೆ ಬರುವುದಕ್ಕೆ ಮೊದಲೇ ಈ ಜಾಮೀನು ಖರೀದಿ ಮಾಡಿದ್ದೇನೆ. ನಾನು ತೋಟದಲ್ಲಿ ರೆಸಾರ್ಟ್ ಮಾಡಿಲ್ಲ. ಬಂದು ನೋಡಪ್ಪ. ಕಲ್ಲಂಗಡಿ, ಬಾಳೆ, ಕೊಬ್ಬರಿ ಬೆಳೆದಿದ್ದೇನೆ. ಎಲ್ಲಾ ವಿಡಿಯೋ ಇದೆಯಪ್ಪ. ದೇವೇಗೌಡರು ವಿರೋಧ ಪಕ್ಷದಲ್ಲಿ ಇದ್ದಾಗಲೂ ನಿಕ್ಕರ್ ಹಾಕಿಕೊಂಡು ಶನಿವಾರ, ಭಾನುವಾರ ತೋಟದ ಕೆಲಸ ಮಾಡುತ್ತಿದ್ದರು ಎಂದರು.

ಡಿ.ಕೆ.ಶಿವಕುಮಾರ್ ಯಾವ ಕಷ್ಟಪಟ್ಟು ಆಸ್ತಿ ಸಂಪಾದನೆ ಮಾಡಿದ್ದಾರೆ? ಕಲ್ಲು ಬಂಡೆ ಕದ್ದು ವಿದೇಶಕ್ಕೆ ಸಾಗಿಸಿರೋದೇ ಅವರ ಕೆಲಸ. ಹೇಳಿದರೆ ಆ ವ್ಯಕ್ತಿಯ ಬಗ್ಗೆ ಕಂತೆ ಕಂತೆ ಹೇಳಬಹುದು. ಅವರಿಗೆ ನನ್ನದೇ ಆಪತ್ತು. ಅದಕ್ಕೆ ನನ್ನ ವಿರುದ್ದ ಮಾತಾಡ್ತಿದ್ದಾರೆ. 8 ಒಕ್ಕಲಿಗರಿಗೆ ಸೀಟು ಕೊಟ್ಟಿದ್ದೀನಿ ಅಂತಾರೆ. ಕೊಟ್ಟು ಏನ್ ಆಯ್ತು. ಸಿಎಂ ಆಗೋ ಅವಕಾಶ ಇದೆ, ಆಶೀರ್ವಾದ ಮಾಡಿ ಅಂದರು. ಈಗ ಒಂದು ಸಾರಿ ಪೇಪರು ಪೆನ್ನು ಕೊಟ್ಟು ತಮಿಳುನಾಡಿಗೆ ನೀರು ಹೋಗ್ತಿಲ್ಲವಾ? ಈಗ ಮತ್ತೆ ಪೆನ್ನು ಪೇಪರ್ ಕೊಡಬೇಕಾ? ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.

ಮಹಿಳಾ ಆಯೋಗ ದೂರು ದಾಖಲು ಮಾಡಿಕೊಂಡಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ; ಮಹಿಳಾ ಆಯೋಗ ನೊಟೀಸ್ ಕೊಡಲಿ ಉತ್ತರ ಕೊಡ್ತೀನಿ ಎಂದು ಉತ್ತರಿಸಿದರು.

ಬೆಂಗಳೂರು ನಗರ ಜೆಡಿಎಸ್ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಸೇರಿ ಪಕ್ಷದ ಅನೇಕ ಮಹಿಳಾ ಮುಖಂಡರು ಉಪಸ್ಥಿತರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಬೆಂಗಳೂರು ಬ್ಯುಸಿನೆಸ್‌ ಕಾರಿಡಾರ್‌ ನಿರ್ಮಾಣ : ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : 26,000 ಕೋಟಿ ಸಾಲ ಪಡೆದು ಸಂಚಾರ ದಟ್ಟಣೆ ಕಡಿಮೆ ಮಾಡಲು ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ನಿರ್ಮಾಣವಾಗುತ್ತಿದೆ ಎಂದು…

22 mins ago

ಗೃಹಜ್ಯೋತಿ | ಮನೆ-ಮನೆ ಸಮೀಕ್ಷೆ ಅವಧಿ ಸೆಪ್ಟೆಂಬರ್‌ 30ರವರೆಗೆ ವಿಸ್ತರಣೆ

ಬೆಂಗಳೂರು : ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಸಮೀಕ್ಷೆಯ ಅವಧಿಯನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್‌ 30ರವರೆಗೆ ವಿಸ್ತರಿಸಿದೆ. 2023ರ…

1 hour ago

ಮೈಸೂರು ದಸರಾ | ಸೆ.28 ರಿಂದ ಅ.5ರವರೆಗೆ ಯುವ ಸಂಭ್ರಮ

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮಕ್ಕೂ ಮುನ್ನ ಸ್ಥಳೀಯ ಕಾಲೇಜು ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಡಲು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ…

2 hours ago

ಕಾವೇರಿ ಜಲವಿವಾದ: ಸೆ.15ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಸೆಪ್ಟೆಂಬರ್‌ 15ಕ್ಕೆ ಮುಂದೂಡಿದೆ. ಬಾಕಿ ಇರುವ 17 ಟಿಎಂಸಿ ನೀರನ್ನು…

7 hours ago

ನೇಪಾಳದಲ್ಲಿ ಭೀಕರ ಪ್ರವಾಹ; ಮೃತರ ಸಂಖ್ಯೆ 903ಕ್ಕೆ ಏರಿಕೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಸಾವಿನ ಸಂಖ್ಯೆ 903ಕ್ಕೆ ಏರಿಕೆಯಾಗಿದೆ. ಪ್ರವಾಹದ ರಭಸಕ್ಕೆ…

8 hours ago

ಎಚ್.ಡಿ.ಕೋಟೆ: ಸಾರ್ವಜನಿಕರಿಗೆ ಆತಂಕ ಮೂಡಿಸಿದ್ದ ಹುಲಿ ಸೆರೆ

ಎಚ್.ಡಿ. ಕೋಟೆ: ತಾಲೂಕಿನ ಹೊಸ ಹುಳಲು ಗ್ರಾಮದಲ್ಲಿ ರೈತರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ.…

8 hours ago