ರಾಜ್ಯ

ನನಗೆ ಇರುವುದು ಬಿಡದಿ ಬಳಿ ಜಮೀನು ಮಾತ್ರ : ಡಿಕೆಶಿ ಯಾವ ಕಷ್ಟಪಟ್ಟು ಇಷ್ಟು ಆಸ್ತಿ ಸಂಪಾದಿಸಿದ್ದಾರೆ? :ಹೆಚ್‌ಡಿಕೆ

ಬೆಂಗಳೂರು : ನಗರದ ಸುತ್ತಮುತ್ತ 1000 ಎಕರೆ ಕುಮಾರಸ್ವಾಮಿಗೆ ಜಮೀನು ಇದೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಹೌದು.. ನನ್ನದು ಬಿಡದಿಯ ಬಳಿ 45-48 ಎಕರೆ ಭೂಮಿ ಇದೆ. ಸಿನಿಮಾದಲ್ಲಿ ದುಡಿದ ದುಡ್ಡಿನಲ್ಲಿ ಅದನ್ನು ಖರೀದಿ ಮಾಡಿದ್ದು. ರಾಜಕೀಯಕ್ಕೆ ಬರುವುದಕ್ಕೆ ಮೊದಲೇ ಈ ಜಾಮೀನು ಖರೀದಿ ಮಾಡಿದ್ದೇನೆ. ನಾನು ತೋಟದಲ್ಲಿ ರೆಸಾರ್ಟ್ ಮಾಡಿಲ್ಲ. ಬಂದು ನೋಡಪ್ಪ. ಕಲ್ಲಂಗಡಿ, ಬಾಳೆ, ಕೊಬ್ಬರಿ ಬೆಳೆದಿದ್ದೇನೆ. ಎಲ್ಲಾ ವಿಡಿಯೋ ಇದೆಯಪ್ಪ. ದೇವೇಗೌಡರು ವಿರೋಧ ಪಕ್ಷದಲ್ಲಿ ಇದ್ದಾಗಲೂ ನಿಕ್ಕರ್ ಹಾಕಿಕೊಂಡು ಶನಿವಾರ, ಭಾನುವಾರ ತೋಟದ ಕೆಲಸ ಮಾಡುತ್ತಿದ್ದರು ಎಂದರು.

ಡಿ.ಕೆ.ಶಿವಕುಮಾರ್ ಯಾವ ಕಷ್ಟಪಟ್ಟು ಆಸ್ತಿ ಸಂಪಾದನೆ ಮಾಡಿದ್ದಾರೆ? ಕಲ್ಲು ಬಂಡೆ ಕದ್ದು ವಿದೇಶಕ್ಕೆ ಸಾಗಿಸಿರೋದೇ ಅವರ ಕೆಲಸ. ಹೇಳಿದರೆ ಆ ವ್ಯಕ್ತಿಯ ಬಗ್ಗೆ ಕಂತೆ ಕಂತೆ ಹೇಳಬಹುದು. ಅವರಿಗೆ ನನ್ನದೇ ಆಪತ್ತು. ಅದಕ್ಕೆ ನನ್ನ ವಿರುದ್ದ ಮಾತಾಡ್ತಿದ್ದಾರೆ. 8 ಒಕ್ಕಲಿಗರಿಗೆ ಸೀಟು ಕೊಟ್ಟಿದ್ದೀನಿ ಅಂತಾರೆ. ಕೊಟ್ಟು ಏನ್ ಆಯ್ತು. ಸಿಎಂ ಆಗೋ ಅವಕಾಶ ಇದೆ, ಆಶೀರ್ವಾದ ಮಾಡಿ ಅಂದರು. ಈಗ ಒಂದು ಸಾರಿ ಪೇಪರು ಪೆನ್ನು ಕೊಟ್ಟು ತಮಿಳುನಾಡಿಗೆ ನೀರು ಹೋಗ್ತಿಲ್ಲವಾ? ಈಗ ಮತ್ತೆ ಪೆನ್ನು ಪೇಪರ್ ಕೊಡಬೇಕಾ? ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.

ಮಹಿಳಾ ಆಯೋಗ ದೂರು ದಾಖಲು ಮಾಡಿಕೊಂಡಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ; ಮಹಿಳಾ ಆಯೋಗ ನೊಟೀಸ್ ಕೊಡಲಿ ಉತ್ತರ ಕೊಡ್ತೀನಿ ಎಂದು ಉತ್ತರಿಸಿದರು.

ಬೆಂಗಳೂರು ನಗರ ಜೆಡಿಎಸ್ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಸೇರಿ ಪಕ್ಷದ ಅನೇಕ ಮಹಿಳಾ ಮುಖಂಡರು ಉಪಸ್ಥಿತರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

9 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

10 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

10 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

12 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

15 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

16 hours ago