ರಾಜ್ಯ

ಆಲ್‌ ಐಸ್‌ ಆನ್‌ ಚಿತ್ತಾಪುರ್‌ : ನ.2ಕ್ಕೆ RSS ಶಕ್ತಿ ಪ್ರದರ್ಶನ

ಬೆಂಗಳೂರು : ಸ್ಥಳೀಯ ಆಡಳಿತ ನ್ಯಾಯಾಲಯದ ನಿರ್ದೇಶನದಂತೆ ಅನುಮತಿ ನೀಡಿದರೆ ನ.2ರಂದು ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನಡೆಸಲು ಉದ್ದೇಶಿಸಿರುವ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಭಾರೀ ಪ್ರಮಾಣದ ಕಾರ್ಯಕರ್ತರನ್ನು ಸೇರಿಸಿ ಶಕ್ತಿ ಪ್ರದರ್ಶಿಸಲು ಸಜ್ಜಾಗಿದೆ.

ರಾಜ್ಯ ರಾಜಕಾರಣದಲ್ಲಿ ಆರ್‌ಎಸ್‌ಎಸ್ ವರ್ಸಸ್ ಸರ್ಕಾರ ಎಂಬಂತಾಗಿರುವ ಆರ್‌ಎಸ್‌ಎಸ್ ಪಥಸಂಚಲನವನ್ನು ಯಶಸ್ವಿಯಾಗಿ ನಡೆಸಲು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನವನ್ನು ಆರಂಭಿಸಲಾಗಿದೆ.

ಇದನ್ನು ಓದಿ: ಚಿತ್ತಾಪುರದಲ್ಲಿ ಆರ್ ಎಸ್‍ಎಸ್ ಪಥಸಂಚಲನ ನಡೆಸಲು ಅನುಮತಿ: ಸಚಿವ ಪ್ರಿಯಾಂಕ್‌ ಖರ್ಗೆ ರಿಯಾಕ್ಷನ್‌

ಆಲ್ ಐಸ್ ಆನ್ ಚಿತ್ತಾಪುರ್(ಎಲ್ಲರ ಕಣ್ಣು ಚಿತ್ತಪುರದತ್ತ) ಎಂಬ ಹಾಶ್‌ಟ್ಯಾಗ್ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಆರ್‌ಎಸ್‌ಎಸ್ ಹಾಗೂ ಬಿಜೆಪಿಯ ಸಾವಿರಾರು ಕಾರ್ಯಕರ್ತರು ಇದನ್ನು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿನಿಧಿಸುವ ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ ನ.2ರಂದು ಆರ್‌ಎಸ್‌ಎಸ್ ಪಥಸಂಚಲನ ನಡೆಸಲು ಈಗಾಗಲೇ ಸ್ಥಳೀಯ ಪುರಸಭೆ ಅಽಕಾರಿಗಳು ಹಾಗೂ ಜಿಲ್ಲಾಽಕಾರಿಗಳಿಗೆ ಮನವಿಪತ್ರ ಸಲ್ಲಿಸಿದೆ.

ಇದೇ 24ರೊಳಗೆ ವರದಿ ಸಲ್ಲಿಸಬೇಕೆಂದು ಕಲಬುರಗಿ ಸಂಚಾರಿ ಪೀಠದ ನ್ಯಾಯಾಲಯ ಸೂಚನೆ ನೀಡಿದೆ. ಒಂದು ವೇಳೆ ಕಾನೂನು ಚೌಕಟ್ಟಿನಡಿ ಪಥಸಂಚಲನ ನಡೆಸಲು ಅನುಮತಿ ಸಿಕ್ಕರೆ ಸುಮಾರು 25 ಸಾವಿರ ಸ್ವಯಂ ಸೇವಕರನ್ನು ಸೇರಿಸಿ ಶಕ್ತಿ ಪ್ರದರ್ಶನ ನಡೆಸಲು ಸಂಘಪರಿವಾರದ ನಾಯಕರು ತೀರ್ಮಾನಿಸಿದ್ದಾರೆ.

ಭಾನುವಾರ ಪಥಸಂಚಲನದ ವೇಳೆ ಕನಿಷ್ಠ 2 ಸಾವಿರ ಆರ್‌ಎಸ್‌ಎಸ್‌ನ ಗಣವೇಶಧಾರಿಗಳು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಥಸಂಚಲನ ನಡೆಸಲು ಮುಂದಾಗಿದ್ದರು. ಆದರೆ ಕಾನೂನು ಸುವ್ಯವಸ್ಥೆ ಮುಂದಿಟ್ಟು ಚಿತ್ತಾಪುರ ತಹಸಿಲ್ದಾರ್ ನಿಷೇಧ ಹೇರಿದ್ದರು.

ಆಂದೋಲನ ಡೆಸ್ಕ್

Recent Posts

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

39 mins ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

3 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

3 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

4 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

7 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

7 hours ago