ಬೆಂಗಳೂರು : ಸ್ಥಳೀಯ ಆಡಳಿತ ನ್ಯಾಯಾಲಯದ ನಿರ್ದೇಶನದಂತೆ ಅನುಮತಿ ನೀಡಿದರೆ ನ.2ರಂದು ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನಡೆಸಲು ಉದ್ದೇಶಿಸಿರುವ ಆರ್ಎಸ್ಎಸ್ ಪಥಸಂಚಲನಕ್ಕೆ ಭಾರೀ ಪ್ರಮಾಣದ ಕಾರ್ಯಕರ್ತರನ್ನು ಸೇರಿಸಿ ಶಕ್ತಿ ಪ್ರದರ್ಶಿಸಲು ಸಜ್ಜಾಗಿದೆ.
ರಾಜ್ಯ ರಾಜಕಾರಣದಲ್ಲಿ ಆರ್ಎಸ್ಎಸ್ ವರ್ಸಸ್ ಸರ್ಕಾರ ಎಂಬಂತಾಗಿರುವ ಆರ್ಎಸ್ಎಸ್ ಪಥಸಂಚಲನವನ್ನು ಯಶಸ್ವಿಯಾಗಿ ನಡೆಸಲು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನವನ್ನು ಆರಂಭಿಸಲಾಗಿದೆ.
ಇದನ್ನು ಓದಿ: ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪಥಸಂಚಲನ ನಡೆಸಲು ಅನುಮತಿ: ಸಚಿವ ಪ್ರಿಯಾಂಕ್ ಖರ್ಗೆ ರಿಯಾಕ್ಷನ್
ಆಲ್ ಐಸ್ ಆನ್ ಚಿತ್ತಾಪುರ್(ಎಲ್ಲರ ಕಣ್ಣು ಚಿತ್ತಪುರದತ್ತ) ಎಂಬ ಹಾಶ್ಟ್ಯಾಗ್ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿಯ ಸಾವಿರಾರು ಕಾರ್ಯಕರ್ತರು ಇದನ್ನು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿನಿಧಿಸುವ ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ ನ.2ರಂದು ಆರ್ಎಸ್ಎಸ್ ಪಥಸಂಚಲನ ನಡೆಸಲು ಈಗಾಗಲೇ ಸ್ಥಳೀಯ ಪುರಸಭೆ ಅಽಕಾರಿಗಳು ಹಾಗೂ ಜಿಲ್ಲಾಽಕಾರಿಗಳಿಗೆ ಮನವಿಪತ್ರ ಸಲ್ಲಿಸಿದೆ.
ಇದೇ 24ರೊಳಗೆ ವರದಿ ಸಲ್ಲಿಸಬೇಕೆಂದು ಕಲಬುರಗಿ ಸಂಚಾರಿ ಪೀಠದ ನ್ಯಾಯಾಲಯ ಸೂಚನೆ ನೀಡಿದೆ. ಒಂದು ವೇಳೆ ಕಾನೂನು ಚೌಕಟ್ಟಿನಡಿ ಪಥಸಂಚಲನ ನಡೆಸಲು ಅನುಮತಿ ಸಿಕ್ಕರೆ ಸುಮಾರು 25 ಸಾವಿರ ಸ್ವಯಂ ಸೇವಕರನ್ನು ಸೇರಿಸಿ ಶಕ್ತಿ ಪ್ರದರ್ಶನ ನಡೆಸಲು ಸಂಘಪರಿವಾರದ ನಾಯಕರು ತೀರ್ಮಾನಿಸಿದ್ದಾರೆ.
ಭಾನುವಾರ ಪಥಸಂಚಲನದ ವೇಳೆ ಕನಿಷ್ಠ 2 ಸಾವಿರ ಆರ್ಎಸ್ಎಸ್ನ ಗಣವೇಶಧಾರಿಗಳು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಥಸಂಚಲನ ನಡೆಸಲು ಮುಂದಾಗಿದ್ದರು. ಆದರೆ ಕಾನೂನು ಸುವ್ಯವಸ್ಥೆ ಮುಂದಿಟ್ಟು ಚಿತ್ತಾಪುರ ತಹಸಿಲ್ದಾರ್ ನಿಷೇಧ ಹೇರಿದ್ದರು.
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…