ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್ ಹೈಕಮಾಂಡ್ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದನ್ನು ಪತ್ರಿಕೆಯಲ್ಲಿ ನೋಡಿದ್ದೇನೆ. ನನಗೂ ಇನ್ನೂ ಪತ್ರ ತಲುಪಿಲ್ಲ. ಎಲ್ಲಾ ಶಾಸಕರಿಗೂ ಮಂತ್ರಿ ಆಗಬೇಕು ಎನ್ನುವ ಆಸೆ ಇರುತ್ತದೆ. ಹೊಸ ಪೀಳಿಗೆ ಬೆಳೆಯಬೇಕು ಅಲ್ಲವೇ? ಶಾಸಕರು ಕೇಳ್ತಾರೆ ಅವರು ಕೇಳೋದ್ರಲ್ಲಿ ತಪ್ಪೇನು? ಎಂದು ಪ್ರಶ್ನೆ ಮಾಡಿದರು.





