Mysore
24
haze

Social Media

ಶುಕ್ರವಾರ, 12 ಡಿಸೆಂಬರ್ 2025
Light
Dark

ರಾಜ್ಯಾಧ್ಯಕ್ಷ ಹುದ್ದೆಯ ಮೇಲೆ ಪಕ್ಷದ ಎಲ್ಲ ಶಾಸಕರಿಗೂ ಆಸೆ ಇದೆ: ಮುರುಗೇಶ್‌ ನಿರಾಣಿ

ಬೆಂಗಳೂರು: ರಾಜ್ಯಧ್ಯಾಕ್ಷ ಹುದ್ದೆ ಅಲಂಕರಿಸಬೇಕೆಂದು ಪಕ್ಷದ ಎಲ್ಲ ಶಾಸಕರಿಗೂ ಆಸೆ ಇದ್ದೆ ಇರುತ್ತದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಹುದ್ದೆಯಲ್ಲಿ ಮುಂದುವರಿಸುವುದೋ ಅಥವಾ ಬೇಡವೋ ಎನ್ನುವುದು ವರಿಷ್ಠರಿಗೆ ಬಿಟ್ಟಿದ್ದು. ನಮ್ಮ ಪಕ್ಷದಲ್ಲಿ ಮೂರು ವರ್ಷಗಳಿಗೊಮ್ಮೆ ಜಿಲ್ಲಾ, ರಾಜ್ಯ, ರಾಷ್ಟ್ರೀಯ ಅಧ್ಯಕ್ಷರ ಚುನಾವಣೆ ನಡೆಯುತ್ತದೆ ಎಂದರು.

ರಾಜ್ಯಾಧ್ಯಕ್ಷ ಹುದ್ದೆಯ ಬಗ್ಗೆ ನಿಮಗೂ ಆಸೆ ಇದೆಯೇ ಎಂಬ ಪ್ರಶ್ನೆಗೆ, ಈಗ ನಮ್ಮ ಬಿಜೆಪಿ ಪಕ್ಷದಲ್ಲಿ 60ಕ್ಕೂ ಹೆಚ್ಚು ಶಾಸಕರಿದ್ದಾರೆ. ಎಲ್ಲರಿಗೂ ರಾಜ್ಯಾಧ್ಯಕ್ಷ ಹುದ್ದೆ ಆಲಂಕರಿಸಬೇಕು ಎನ್ನುವ ಆಸೆ ಇದೆ. ಆದರೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ, ಅಮಿತ್‌ ಶಾ ಮತ್ತು ನರೇಂದ್ರ ಮೋದಿ ಅವರ ನಿರ್ಧಾರವೇ ಅಂತಿಮ ಎಂದು ಉತ್ತರಿಸಿದರು.

ಪಕ್ಷದ ಅಸಮಾಧಾನದ ಬಗ್ಗೆ ಮಾತನಾಡಿ, ವರಿಷ್ಠರು ಈ ವಿಚಾರವಾಗಿ ಅಸಮಾಧಾನಗೊಂಡಿರುವ ನಾಯಕರ ಜೊತೆ ಫೋನ್‌ ಕರೆಯಲ್ಲಿ ಮಾತನಾಡಿದ್ದಾರೆ. ಇನ್ನು 8-10 ದಿನಗಳಲ್ಲಿ ಎಲ್ಲವೂ ಸರಿಯಾಗಲಿದೆ. ರಾಜ್ಯ ಕಾಂಗ್ರೆಸ್‌ ಸರ್ಕಾರದ ದುರಾಡಳಿತದ ವಿರುದ್ಧ ಎಲ್ಲರೂ ಒಟ್ಟಾಗಿ ಹೋರಾಟ ನಡೆಸಲಿದ್ದೇವೆ ಎಂದರು.

 

Tags:
error: Content is protected !!