ಬೆಂಗಳೂರು: ರಾಜ್ಯಧ್ಯಾಕ್ಷ ಹುದ್ದೆ ಅಲಂಕರಿಸಬೇಕೆಂದು ಪಕ್ಷದ ಎಲ್ಲ ಶಾಸಕರಿಗೂ ಆಸೆ ಇದ್ದೆ ಇರುತ್ತದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಹುದ್ದೆಯಲ್ಲಿ ಮುಂದುವರಿಸುವುದೋ ಅಥವಾ ಬೇಡವೋ ಎನ್ನುವುದು ವರಿಷ್ಠರಿಗೆ ಬಿಟ್ಟಿದ್ದು. ನಮ್ಮ ಪಕ್ಷದಲ್ಲಿ ಮೂರು ವರ್ಷಗಳಿಗೊಮ್ಮೆ ಜಿಲ್ಲಾ, ರಾಜ್ಯ, ರಾಷ್ಟ್ರೀಯ ಅಧ್ಯಕ್ಷರ ಚುನಾವಣೆ ನಡೆಯುತ್ತದೆ ಎಂದರು.
ರಾಜ್ಯಾಧ್ಯಕ್ಷ ಹುದ್ದೆಯ ಬಗ್ಗೆ ನಿಮಗೂ ಆಸೆ ಇದೆಯೇ ಎಂಬ ಪ್ರಶ್ನೆಗೆ, ಈಗ ನಮ್ಮ ಬಿಜೆಪಿ ಪಕ್ಷದಲ್ಲಿ 60ಕ್ಕೂ ಹೆಚ್ಚು ಶಾಸಕರಿದ್ದಾರೆ. ಎಲ್ಲರಿಗೂ ರಾಜ್ಯಾಧ್ಯಕ್ಷ ಹುದ್ದೆ ಆಲಂಕರಿಸಬೇಕು ಎನ್ನುವ ಆಸೆ ಇದೆ. ಆದರೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ, ಅಮಿತ್ ಶಾ ಮತ್ತು ನರೇಂದ್ರ ಮೋದಿ ಅವರ ನಿರ್ಧಾರವೇ ಅಂತಿಮ ಎಂದು ಉತ್ತರಿಸಿದರು.
ಪಕ್ಷದ ಅಸಮಾಧಾನದ ಬಗ್ಗೆ ಮಾತನಾಡಿ, ವರಿಷ್ಠರು ಈ ವಿಚಾರವಾಗಿ ಅಸಮಾಧಾನಗೊಂಡಿರುವ ನಾಯಕರ ಜೊತೆ ಫೋನ್ ಕರೆಯಲ್ಲಿ ಮಾತನಾಡಿದ್ದಾರೆ. ಇನ್ನು 8-10 ದಿನಗಳಲ್ಲಿ ಎಲ್ಲವೂ ಸರಿಯಾಗಲಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಎಲ್ಲರೂ ಒಟ್ಟಾಗಿ ಹೋರಾಟ ನಡೆಸಲಿದ್ದೇವೆ ಎಂದರು.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…