ರಾಜ್ಯ

ಕ್ರಾಂತಿ ಎಲ್ಲಾ ʻಮಾಧ್ಯಮ ಸೃಷ್ಟಿʼ : ಸಿ.ಎಂ ಸಿಡಿಮಿಡಿ

ಬೆಂಗಳೂರು : ನವೆಂಬರ್ ಕ್ರಾಂತಿಯ ವರದಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದು ಕೇವಲ ಮಾಧ್ಯಮ ಸೃಷ್ಟಿ ಎಂದು ಗುರುವಾರ ಹೇಳಿದ್ದಾರೆ.

ನನ್ನ ಸ್ಥಾನ ಮೊದಲಿನಿಂದಲೂ ಗಟ್ಟಿಯಾಗಿದೆ. ಈಗಲೂ ಗಟ್ಟಿಯಾಗಿದೆ ಮತ್ತು ಭವಿಷ್ಯದಲ್ಲಿಯೂ ಹಾಗೆಯೇ ಮುಂದುವರಿಯುತ್ತದೆ ಎಂದು ಸಿ.ಎಂ ಸಿದ್ದರಾಮಯ್ಯ ಒತ್ತಿ ಹೇಳಿದರು.

ನಾಯಕತ್ವ ಬದಲಾವಣೆ ಕುರಿತ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಎರಡೂವರೆ ವರ್ಷ ಆದಮೇಲೆ ಸಂಪುಟ ಪುನಾರಚನೆ ಮಾಡೋಣ ಅಂದಿದ್ದೆ, ಆ ವಿಚಾರದ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಅದಕ್ಕೆ ಎಲ್ಲರೂ ಕ್ರಾಂತಿ ಅಂತ ತಿಳಿದುಕೊಂಡಿದ್ದರು. ಆದರೆ ಯಾವ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ. ಮತ್ತೆ ರಾಜ್ಯದಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ, ಎಲ್ಲಿಯತನಕ ಜನರ ಆಶೀರ್ವಾದ ಇರುತ್ತೆ, ಅಲ್ಲಿ ತನಕ ನಾನೇ ಸಿಎಂ ಆಗಿರುತ್ತೇನೆ ಎಂದರು.

ಇದನ್ನೂ ಓದಿ:-ಕ್ರಾಂತಿ ಎಲ್ಲಾ ʻಮಾಧ್ಯಮ ಸೃಷ್ಟಿʼ : ಸಿ.ಎಂ ಸಿಡಿಮಿಡಿ

2028ರ ಚುನಾವಣೆಯಲ್ಲಿ ಯಾರ ನೇತೃತ್ವದಲ್ಲಿ ಚುನಾವಣೆ ಎದುರಿಸಬೇಕು ಎಂಬ ವಿಚಾರವನ್ನು ಮುಂದಿನ ದಿನಗಳಲ್ಲಿ ತೀರ್ಮಾನ ಮಾಡೋಣ ಎಂದು ಸಿಎಂ ತಿಳಿಸಿದರು.

ಐದು ವರ್ಷಗಳ ಕಾಲ ನೀವೇ ಸಿಎಂ ಆಗಿ ಇರುತ್ತೀರಾ? ಎಂಬ ಪ್ರಶ್ನೆಗೆ ಸಿಡಿಮಿಡಿಗೊಂಡ ಸಿಎಂ, “ಇದರ ಅರ್ಥವೇನು? ಇವು ಅನಗತ್ಯ ಚರ್ಚೆಗಳು. ಎರಡೂವರೆ ವರ್ಷದ ನಂತರ ಸಂಪುಟ ಪುನರ್ರಚನೆ ಮಾಡೋಣ ಅಂತ ನಾನು ಪಕ್ಷದ ಹೈಕಮಾಂಡ್‌ಗೆ ಹೇಳಿದ್ದೆ. ಅದರ ನಂತರವೇ ಅಧಿಕಾರ ಹಂಚಿಕೆಯ ಕುರಿತು ಈ ಚರ್ಚೆಗಳು ಪ್ರಾರಂಭವಾದವು” ಎಂದರು.

ಇದೇ ವೇಳೆ ಸಂಪುಟ ಪುನರ್ರಚನೆಯ ದಿನಾಂಕವನ್ನು ನಿಗದಿಪಡಿಸಲಾಗಿದೆಯೇ ಎಂದು ಕೇಳಿದಾಗ, ಈ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಹುಲ್ ಗಾಂಧಿ ಅವರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

6 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

6 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

7 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

7 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

8 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

8 hours ago