ಮೈಸೂರು : ಕರ್ನಾಟಕದ ಅಭಿವೃದ್ಧಿಯು ಉತ್ತಮವಾಗಿದ್ದು, 4000 ಕೋಟಿಯ ಕಾಮಗಾರಿ ನಡೆಯುತ್ತಿದ್ದು, 2024 ರ ಅಂತ್ಯಕ್ಕೆ ಎಲ್ಲಾ ಕಾಮಗಾರಿಗಳು ಪೂರ್ಣಗೊಳ್ಳುತ್ತವೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ನಿತಿನ್ ಗಡ್ಕರಿ ಅವರು ಹೇಳಿದರು.
ಇಂದು (ಮಾ.೧೦) ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ರೂ.4000 ಕೋಟಿಗೂ ಅಧಿಕ ವೆಚ್ಚದ 266 ಕಿ.ಮೀ ಉದ್ದದ 22 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆಯ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ರಾಜ್ಯ ಸರ್ಕಾರದಿಂದ ಇತರೆ ರಸ್ತೆ ಕಾಮಗಾರಿಗಳ ಪ್ರಸ್ತಾವನೆ ನೀಡಿದ್ದು, ಇನ್ನಾವುದೇ ಪ್ರಸ್ತಾವನೆಗಳಿದ್ದಲಿ ಅವುಗಳನ್ನು ನೀಡಿದರೆ ಎಲ್ಲವನ್ನು ಪರಿಶೀಲಿಸಿ ಡಿ ಪಿ ಆರ್ ಮಾಡಲು ಒಪ್ಪಿಗೆ ನೀಡಲಾಗುವುದು ಎಂದರು.
ಕರ್ನಾಟಕ ಸಾಂಸ್ಕೃತಿಕ ನೆಲೆ ಬೀಡಾಗಿದ್ದು, ಇಲ್ಲಿನ ಸಾಹಿತ್ಯ,ಸಂಸ್ಕೃತಿ ಕರ್ನಾಟಕದ ಇತಿಹಾಸವನ್ನು ಬಿಂಬಿಸುತ್ತವೆ. ಇದೇ ಡಿಸೆಂಬರ್ ವೇಳೆಗೆ ಬೆಂಗಳೂರು ರಿಂಗ್ ರೋಡ್ ಕಾಮಗಾರಿ ಪೂರ್ಣಗೊಳ್ಳಲಿದ್ದು, ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಪರಿಹಾರ ಆಗಲಿದೆ. 2024 ರ ಅಂತ್ಯಕ್ಕೆ ಕರ್ನಾಟಕ ರಸ್ತೆಗಳ ಚಿತ್ರಣ ಬದಲಾಗಲಿದ್ದು, ಅಮೆರಿಕಾದ ರಸ್ತೆಗಳಿಗೆ ಸಮನಾಗಿ ಇರಲಿವೆ ಎಂದರು.
ಮುಂದಿನ ವರ್ಷದ ಜನವರಿ ಆರಂಭದಲ್ಲಿ ಬೆಂಗಳೂರು – ಚೆನೈ ಎಕ್ಸ್ಪ್ರೆಸ್ ಹೈವೇ ಕಾಮಗಾರಿ ಆರಂಭವಾಗಲಿದ್ದು, ಮೈಸೂರು – ಹಾಸನಕ್ಕೆ ರಿಂಗ್ ರಸ್ತೆ, ಕುಶಾಲನಗರ – ಮಾಣಿ ರಸ್ತೆಗೆ ಡಿ ಪಿ ಆರ್, ಮೈಸೂರು – ನಂಜನಗೂಡು ಆರು ಪಥದ ರಸ್ತೆ ನಿರ್ಮಾಣ, ಮಂಗಳೂರಿನ ವಿಕಾಸನಕ್ಕೆ ಗ್ರೀನ್ ಎಕ್ಸ್ಪ್ರೆಸ್ ನಿರ್ಮಾಣ ಮಾಡುವುದಾಗಿ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಸಂಸದರಾದ ಪ್ರತಾಪ್ ಸಿಂಹ, ಸುಮಲತಾ ಅಂಬರೀಶ್, ಮುನಿಸ್ವಾಮಿ, ಶಾಸಕರಾದ ಎಚ್.ಡಿ. ರೇವಣ್ಣ, ಎಚ್. ವಿಶ್ವನಾಥ್, ಸಿ.ಎನ್. ಮಂಜೇಗೌಡ, ಶ್ರೀವತ್ಸ, ಜಿ.ಡಿ. ಹರೀಶ್ ಗೌಡ ಉಪಸ್ಥಿತರಿದ್ದರು.
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…
ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…
ಬೆಂಗಳೂರು: ನಟ ದರ್ಶನ್ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…