ಮೈಸೂರು : ಕರ್ನಾಟಕದ ಅಭಿವೃದ್ಧಿಯು ಉತ್ತಮವಾಗಿದ್ದು, 4000 ಕೋಟಿಯ ಕಾಮಗಾರಿ ನಡೆಯುತ್ತಿದ್ದು, 2024 ರ ಅಂತ್ಯಕ್ಕೆ ಎಲ್ಲಾ ಕಾಮಗಾರಿಗಳು ಪೂರ್ಣಗೊಳ್ಳುತ್ತವೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ನಿತಿನ್ ಗಡ್ಕರಿ ಅವರು ಹೇಳಿದರು.
ಇಂದು (ಮಾ.೧೦) ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ರೂ.4000 ಕೋಟಿಗೂ ಅಧಿಕ ವೆಚ್ಚದ 266 ಕಿ.ಮೀ ಉದ್ದದ 22 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆಯ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ರಾಜ್ಯ ಸರ್ಕಾರದಿಂದ ಇತರೆ ರಸ್ತೆ ಕಾಮಗಾರಿಗಳ ಪ್ರಸ್ತಾವನೆ ನೀಡಿದ್ದು, ಇನ್ನಾವುದೇ ಪ್ರಸ್ತಾವನೆಗಳಿದ್ದಲಿ ಅವುಗಳನ್ನು ನೀಡಿದರೆ ಎಲ್ಲವನ್ನು ಪರಿಶೀಲಿಸಿ ಡಿ ಪಿ ಆರ್ ಮಾಡಲು ಒಪ್ಪಿಗೆ ನೀಡಲಾಗುವುದು ಎಂದರು.
ಕರ್ನಾಟಕ ಸಾಂಸ್ಕೃತಿಕ ನೆಲೆ ಬೀಡಾಗಿದ್ದು, ಇಲ್ಲಿನ ಸಾಹಿತ್ಯ,ಸಂಸ್ಕೃತಿ ಕರ್ನಾಟಕದ ಇತಿಹಾಸವನ್ನು ಬಿಂಬಿಸುತ್ತವೆ. ಇದೇ ಡಿಸೆಂಬರ್ ವೇಳೆಗೆ ಬೆಂಗಳೂರು ರಿಂಗ್ ರೋಡ್ ಕಾಮಗಾರಿ ಪೂರ್ಣಗೊಳ್ಳಲಿದ್ದು, ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಪರಿಹಾರ ಆಗಲಿದೆ. 2024 ರ ಅಂತ್ಯಕ್ಕೆ ಕರ್ನಾಟಕ ರಸ್ತೆಗಳ ಚಿತ್ರಣ ಬದಲಾಗಲಿದ್ದು, ಅಮೆರಿಕಾದ ರಸ್ತೆಗಳಿಗೆ ಸಮನಾಗಿ ಇರಲಿವೆ ಎಂದರು.
ಮುಂದಿನ ವರ್ಷದ ಜನವರಿ ಆರಂಭದಲ್ಲಿ ಬೆಂಗಳೂರು – ಚೆನೈ ಎಕ್ಸ್ಪ್ರೆಸ್ ಹೈವೇ ಕಾಮಗಾರಿ ಆರಂಭವಾಗಲಿದ್ದು, ಮೈಸೂರು – ಹಾಸನಕ್ಕೆ ರಿಂಗ್ ರಸ್ತೆ, ಕುಶಾಲನಗರ – ಮಾಣಿ ರಸ್ತೆಗೆ ಡಿ ಪಿ ಆರ್, ಮೈಸೂರು – ನಂಜನಗೂಡು ಆರು ಪಥದ ರಸ್ತೆ ನಿರ್ಮಾಣ, ಮಂಗಳೂರಿನ ವಿಕಾಸನಕ್ಕೆ ಗ್ರೀನ್ ಎಕ್ಸ್ಪ್ರೆಸ್ ನಿರ್ಮಾಣ ಮಾಡುವುದಾಗಿ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಸಂಸದರಾದ ಪ್ರತಾಪ್ ಸಿಂಹ, ಸುಮಲತಾ ಅಂಬರೀಶ್, ಮುನಿಸ್ವಾಮಿ, ಶಾಸಕರಾದ ಎಚ್.ಡಿ. ರೇವಣ್ಣ, ಎಚ್. ವಿಶ್ವನಾಥ್, ಸಿ.ಎನ್. ಮಂಜೇಗೌಡ, ಶ್ರೀವತ್ಸ, ಜಿ.ಡಿ. ಹರೀಶ್ ಗೌಡ ಉಪಸ್ಥಿತರಿದ್ದರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…