ಬೆಂಗಳೂರು: ಧರ್ಮಸ್ಥಳ ಅಷ್ಟೇ ಅಲ್ಲ, ರಾಜ್ಯದ ಎಲ್ಲಾ ದೇವಸ್ಥಾನಗಳು ಸುರಕ್ಷಿತವಾಗಿವೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ಪ್ರಕರಣದಲ್ಲಿ ಎಸ್ಐಟಿ ತನಿಖೆ ಮಾಡುತ್ತಿದ್ದು, ಸರಿಯಾದ ದಾರಿಯಲ್ಲೇ ಹೋಗುತ್ತಿದೆ. ಬಿಜೆಪಿಯವರು ಎನ್ಐಎ ತನಿಖೆಗೆ ವಹಿಸಿ ಎಂದು ಒತ್ತಾಯಿಸುತ್ತಿದ್ದಾರೆ. ಈ ಹಿಂದೆ ಸೌಜನ್ಯ ಪ್ರಕರಣದಲ್ಲಿ ಸಿಬಿಐ ತನಿಖೆ ಮಾಡಿತ್ತು. ಆಗ ಸೌಜನ್ಯಗೆ ಯಾಕೆ ನ್ಯಾಯ ಸಿಗಲಿಲ್ಲ? ಎಂದು ಪ್ರಶ್ನಿಸಿದರು.
ಬುರುಡೆ ಪ್ರಕರಣ ತಾರ್ಕಿಕ ಅಂತ್ಯಕ್ಕೆ ಬರಲಿದೆ ಎಂದ ಅವರು, ಅರಮನೆ ಮೈದಾನದಲ್ಲಿ ನಡೆಯಲಿರುವ ಈದ್ಮಿಲಾದ್ ಕಾರ್ಯಕ್ರಮ ವಿಚಾರದ ಬಗ್ಗೆ ನನಗೆ ಹೆಚ್ಚು ಮಾಹಿತಿ ಇಲ್ಲ. ಮೌಲ್ವಿಗಳು, ಪಾದ್ರಿಗಳು ಮಾಡುತ್ತಾರೆ. ಜನರಿಗೆ ಸನ್ಮಾರ್ಗದಲ್ಲಿ ಹೋಗಿ, ಜನರನ್ನು ಸರಿದಾರಿಗೆ ತನ್ನಿ ಎಂದು ಹೇಳುತ್ತಾರೆ. ಅವರು ಎಲ್ಲೂ ಬೇರೆಯದನ್ನು ಹೇಳಲ್ಲ. ಇದರಲ್ಲಿ ತಪ್ಪೇನಿದೆ? ಎಂದರು.
ಇದನ್ನು ಓದಿ:ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್ಗೆ ಕಾನೂನು ಸಂಕಷ್ಟ
ಕೇಂದ್ರದ ಸರ್ಕಾರದ ಜಿಎಸ್ಟಿ ಪರಿಷ್ಕರಣೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೇಂದ್ರ ಸರ್ಕಾರ ಜಿಎಸ್ಟಿ ಜಾರಿಗೆ ತಂದು ಜನರಿಗೆ ಸಾಕಷ್ಟು ಹೊರೆ ಹಾಕಿತ್ತು. ಬಡವರು, ಮಧ್ಯಮವರ್ಗದವರಿಗೆ ಹೊರೆಯಾಗಿತ್ತು. ನಮ್ಮ ರಾಜ್ಯದಿಂದ 4.5 ಲಕ್ಷ ಕೋಟಿ ರೂ. ತೆರಿಗೆ ಹೋಗುತ್ತಿತ್ತು. ಆದರೂ ಅವರು ನಮಗೆ ಕೊಡುವುದು ಕಡಿಮೆ. ಜಿಎಸ್ಟಿ ಇಳಿಕೆಯಿಂದ ನಮಗೆ 15 ಸಾವಿರ ಕೋಟಿ ರೂ. ಕೊರತೆಯಾಗುತ್ತದೆ. ಇದನ್ನು ಕೇಂದ್ರ ಸರ್ಕಾರ ಕೊಡಬೇಕು ಎಂದು ಅವರು ಆಗ್ರಹಿಸಿದರು.
ನಮಗಷ್ಟೇ ಅಲ್ಲ. ಎಲ್ಲ ರಾಜ್ಯಗಳಿಗೂ ಕೊಡಬೇಕು. ಈಗ 1 ರೂ.ನಲ್ಲಿ 13 ಪೈಸೆ ಮಾತ್ರ ಕೊಡುತ್ತಿದೆ. ಅವರು ಹೆಚ್ಚು ತೆಗೆದುಕೊಳ್ಳುವ ತೆರಿಗೆಯಲ್ಲಿ ನಮಗೂ ಪಾಲು ಕೊಡಬೇಕು. ಜಿಎಸ್ಟಿ ಪರಿಷ್ಕರಣೆಯಿಂದ ಜನರಿಗೆ ಅನುಕೂಲ ಆಗುತ್ತದೆ. ಆದರೆ, ರಾಜ್ಯ ಸರ್ಕಾರಕ್ಕೆ ನಷ್ಟವಾಗುತ್ತದೆ. ನಮ್ಮಿಂದ ಹೆಚ್ಚುವರಿ ಸಂಗ್ರಹ ಮಾಡುತ್ತಿದ್ದರೂ ನಮಗೆ ಕೊಡುವುದು ಅತ್ಯಲ್ಪ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…
ಹನೂರು : ಪ್ರತಿಯೊಬ್ಬ ವಿದ್ಯಾರ್ಥಿಗೂ ದ್ವಿತೀಯ ಪಿಯುಸಿ ಒಂದು ಪ್ರಮುಖ ಘಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಒಂದು ಗುರಿ…
ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್ರಾಜ್ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್ಗಳನ್ನು…
ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ…
ಮೈಸೂರು: ಪ್ರಸಾದ್ ಯೋಜನೆಯಡಿ ಚಾಮುಂಡಿ ಬೆಟ್ಟದ ಪಾರಂಪರಿಕತೆಗೆ ಯಾವುದೇ ಧಕ್ಕೆ ಆಗದಂತೆ ಅಭಿವೃದ್ಧಿ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ…
ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್, ಕಮೆಂಟ್ ಮಾಡಿ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಸಿಸಿಬಿ ಪೊಲೀಸರು…