ರಾಜ್ಯ

ರಾಜ್ಯದ ಎಲ್ಲಾ ದೇವಾಲಯಗಳು ಸುರಕ್ಷಿತವಾಗಿದೆ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಧರ್ಮಸ್ಥಳ ಅಷ್ಟೇ ಅಲ್ಲ, ರಾಜ್ಯದ ಎಲ್ಲಾ ದೇವಸ್ಥಾನಗಳು ಸುರಕ್ಷಿತವಾಗಿವೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ಪ್ರಕರಣದಲ್ಲಿ ಎಸ್‍ಐಟಿ ತನಿಖೆ ಮಾಡುತ್ತಿದ್ದು, ಸರಿಯಾದ ದಾರಿಯಲ್ಲೇ ಹೋಗುತ್ತಿದೆ. ಬಿಜೆಪಿಯವರು ಎನ್‍ಐಎ ತನಿಖೆಗೆ ವಹಿಸಿ ಎಂದು ಒತ್ತಾಯಿಸುತ್ತಿದ್ದಾರೆ. ಈ ಹಿಂದೆ ಸೌಜನ್ಯ ಪ್ರಕರಣದಲ್ಲಿ ಸಿಬಿಐ ತನಿಖೆ ಮಾಡಿತ್ತು. ಆಗ ಸೌಜನ್ಯಗೆ ಯಾಕೆ ನ್ಯಾಯ ಸಿಗಲಿಲ್ಲ? ಎಂದು ಪ್ರಶ್ನಿಸಿದರು.

ಬುರುಡೆ ಪ್ರಕರಣ ತಾರ್ಕಿಕ ಅಂತ್ಯಕ್ಕೆ ಬರಲಿದೆ ಎಂದ ಅವರು, ಅರಮನೆ ಮೈದಾನದಲ್ಲಿ ನಡೆಯಲಿರುವ ಈದ್‍ಮಿಲಾದ್ ಕಾರ್ಯಕ್ರಮ ವಿಚಾರದ ಬಗ್ಗೆ ನನಗೆ ಹೆಚ್ಚು ಮಾಹಿತಿ ಇಲ್ಲ. ಮೌಲ್ವಿಗಳು, ಪಾದ್ರಿಗಳು ಮಾಡುತ್ತಾರೆ. ಜನರಿಗೆ ಸನ್ಮಾರ್ಗದಲ್ಲಿ ಹೋಗಿ, ಜನರನ್ನು ಸರಿದಾರಿಗೆ ತನ್ನಿ ಎಂದು ಹೇಳುತ್ತಾರೆ. ಅವರು ಎಲ್ಲೂ ಬೇರೆಯದನ್ನು ಹೇಳಲ್ಲ. ಇದರಲ್ಲಿ ತಪ್ಪೇನಿದೆ? ಎಂದರು.

ಇದನ್ನು ಓದಿ:ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್‌ಗೆ ಕಾನೂನು ಸಂಕಷ್ಟ

ಕೇಂದ್ರದ ಸರ್ಕಾರದ ಜಿಎಸ್‍ಟಿ ಪರಿಷ್ಕರಣೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೇಂದ್ರ ಸರ್ಕಾರ ಜಿಎಸ್‍ಟಿ ಜಾರಿಗೆ ತಂದು ಜನರಿಗೆ ಸಾಕಷ್ಟು ಹೊರೆ ಹಾಕಿತ್ತು. ಬಡವರು, ಮಧ್ಯಮವರ್ಗದವರಿಗೆ ಹೊರೆಯಾಗಿತ್ತು. ನಮ್ಮ ರಾಜ್ಯದಿಂದ 4.5 ಲಕ್ಷ ಕೋಟಿ ರೂ. ತೆರಿಗೆ ಹೋಗುತ್ತಿತ್ತು. ಆದರೂ ಅವರು ನಮಗೆ ಕೊಡುವುದು ಕಡಿಮೆ. ಜಿಎಸ್‍ಟಿ ಇಳಿಕೆಯಿಂದ ನಮಗೆ 15 ಸಾವಿರ ಕೋಟಿ ರೂ. ಕೊರತೆಯಾಗುತ್ತದೆ. ಇದನ್ನು ಕೇಂದ್ರ ಸರ್ಕಾರ ಕೊಡಬೇಕು ಎಂದು ಅವರು ಆಗ್ರಹಿಸಿದರು.

ನಮಗಷ್ಟೇ ಅಲ್ಲ. ಎಲ್ಲ ರಾಜ್ಯಗಳಿಗೂ ಕೊಡಬೇಕು. ಈಗ 1 ರೂ.ನಲ್ಲಿ 13 ಪೈಸೆ ಮಾತ್ರ ಕೊಡುತ್ತಿದೆ. ಅವರು ಹೆಚ್ಚು ತೆಗೆದುಕೊಳ್ಳುವ ತೆರಿಗೆಯಲ್ಲಿ ನಮಗೂ ಪಾಲು ಕೊಡಬೇಕು. ಜಿಎಸ್‍ಟಿ ಪರಿಷ್ಕರಣೆಯಿಂದ ಜನರಿಗೆ ಅನುಕೂಲ ಆಗುತ್ತದೆ. ಆದರೆ, ರಾಜ್ಯ ಸರ್ಕಾರಕ್ಕೆ ನಷ್ಟವಾಗುತ್ತದೆ. ನಮ್ಮಿಂದ ಹೆಚ್ಚುವರಿ ಸಂಗ್ರಹ ಮಾಡುತ್ತಿದ್ದರೂ ನಮಗೆ ಕೊಡುವುದು ಅತ್ಯಲ್ಪ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

3 mins ago

ಟಿ.20 ವಿಶ್ವಕಪ್‌ | ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ; 82.1 ಕೋಟಿ ಮಂದಿ ವೀಕ್ಷಣೆ

ಅಹ್ಮದಾಬಾದ್ : ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ-20 ವಿಶ್ವಕಪ್ ಫೈನಲ್ ಪಂದ್ಯ…

10 mins ago

17ಬಾರಿ ಬಜೆಟ್‌ ಮಂಡಿಸಿ ಮೈಸೂರಿಗೆ ಏನು ಮಾಡಿದ್ದೀರಿ? ; ಸಿಎಂಗೆ ಪ್ರತಾಪ್‌ ಸಿಂಹ ಪ್ರಶ್ನೆ

ಮೈಸೂರು : 17 ಬಾರಿ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿಗೆ ಏನು ಮಾಡಿದ್ದಾರೆ ಎಂದು ಮಾಜಿ ಸಂಸದ…

19 mins ago

ವಿದ್ಯಾರ್ಥಿಗಳೇ ಮಾದಕ ವಸ್ತುಗಳಿಂದ ದೂರವಿರಿ : ಕಮಿಷನರ್‌ ಸೀಮಾ ಲಾಟ್ಕರ್‌

ಮೈಸೂರು : ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದು, ಶಿಕ್ಷಣಕ್ಕೆ ಹೆಚ್ಚು ಮಹತ್ವ ಕೊಟ್ಟು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದು ನಗರ…

42 mins ago

ಜಾಗತಿಕ ಇಂಧನ ಬಿಕ್ಕಟು ಸೃಷ್ಟಿ : ಯುದ್ಧ ಕೊನೆಗೊಳಿಸಲು ಅಮೆರಿಕಾ ಮೇಲೆ ಒತ್ತಡ

ಟೆಹ್ರಾನ್‌ : ಅಮೆರಿಕ-ಇಸ್ರೇಲ್-ಇರಾನ್ ನಡುವಿನ ಘರ್ಷಣೆ 11ನೇ ದಿನಕ್ಕೆ ಕಾಲಿಟ್ಟಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಪಡೆಗಳು…

1 hour ago

ಇನ್ನೂ ಯುದ್ಧ ಮುಗಿದಿಲ್ಲ ; ಇಸ್ರೇಲ್

ಜೆರುಸಲೆಮ್ : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಇರಾನ್ ವಿರುದ್ಧದ ತಮ್ಮ ದೇಶದ ಸೈನಿಕ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ…

2 hours ago