ರಾಜ್ಯ

ರಾಜ್ಯದ ಎಲ್ಲಾ ದೇವಾಲಯಗಳು ಸುರಕ್ಷಿತವಾಗಿದೆ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಧರ್ಮಸ್ಥಳ ಅಷ್ಟೇ ಅಲ್ಲ, ರಾಜ್ಯದ ಎಲ್ಲಾ ದೇವಸ್ಥಾನಗಳು ಸುರಕ್ಷಿತವಾಗಿವೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ಪ್ರಕರಣದಲ್ಲಿ ಎಸ್‍ಐಟಿ ತನಿಖೆ ಮಾಡುತ್ತಿದ್ದು, ಸರಿಯಾದ ದಾರಿಯಲ್ಲೇ ಹೋಗುತ್ತಿದೆ. ಬಿಜೆಪಿಯವರು ಎನ್‍ಐಎ ತನಿಖೆಗೆ ವಹಿಸಿ ಎಂದು ಒತ್ತಾಯಿಸುತ್ತಿದ್ದಾರೆ. ಈ ಹಿಂದೆ ಸೌಜನ್ಯ ಪ್ರಕರಣದಲ್ಲಿ ಸಿಬಿಐ ತನಿಖೆ ಮಾಡಿತ್ತು. ಆಗ ಸೌಜನ್ಯಗೆ ಯಾಕೆ ನ್ಯಾಯ ಸಿಗಲಿಲ್ಲ? ಎಂದು ಪ್ರಶ್ನಿಸಿದರು.

ಬುರುಡೆ ಪ್ರಕರಣ ತಾರ್ಕಿಕ ಅಂತ್ಯಕ್ಕೆ ಬರಲಿದೆ ಎಂದ ಅವರು, ಅರಮನೆ ಮೈದಾನದಲ್ಲಿ ನಡೆಯಲಿರುವ ಈದ್‍ಮಿಲಾದ್ ಕಾರ್ಯಕ್ರಮ ವಿಚಾರದ ಬಗ್ಗೆ ನನಗೆ ಹೆಚ್ಚು ಮಾಹಿತಿ ಇಲ್ಲ. ಮೌಲ್ವಿಗಳು, ಪಾದ್ರಿಗಳು ಮಾಡುತ್ತಾರೆ. ಜನರಿಗೆ ಸನ್ಮಾರ್ಗದಲ್ಲಿ ಹೋಗಿ, ಜನರನ್ನು ಸರಿದಾರಿಗೆ ತನ್ನಿ ಎಂದು ಹೇಳುತ್ತಾರೆ. ಅವರು ಎಲ್ಲೂ ಬೇರೆಯದನ್ನು ಹೇಳಲ್ಲ. ಇದರಲ್ಲಿ ತಪ್ಪೇನಿದೆ? ಎಂದರು.

ಇದನ್ನು ಓದಿ:ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್‌ಗೆ ಕಾನೂನು ಸಂಕಷ್ಟ

ಕೇಂದ್ರದ ಸರ್ಕಾರದ ಜಿಎಸ್‍ಟಿ ಪರಿಷ್ಕರಣೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೇಂದ್ರ ಸರ್ಕಾರ ಜಿಎಸ್‍ಟಿ ಜಾರಿಗೆ ತಂದು ಜನರಿಗೆ ಸಾಕಷ್ಟು ಹೊರೆ ಹಾಕಿತ್ತು. ಬಡವರು, ಮಧ್ಯಮವರ್ಗದವರಿಗೆ ಹೊರೆಯಾಗಿತ್ತು. ನಮ್ಮ ರಾಜ್ಯದಿಂದ 4.5 ಲಕ್ಷ ಕೋಟಿ ರೂ. ತೆರಿಗೆ ಹೋಗುತ್ತಿತ್ತು. ಆದರೂ ಅವರು ನಮಗೆ ಕೊಡುವುದು ಕಡಿಮೆ. ಜಿಎಸ್‍ಟಿ ಇಳಿಕೆಯಿಂದ ನಮಗೆ 15 ಸಾವಿರ ಕೋಟಿ ರೂ. ಕೊರತೆಯಾಗುತ್ತದೆ. ಇದನ್ನು ಕೇಂದ್ರ ಸರ್ಕಾರ ಕೊಡಬೇಕು ಎಂದು ಅವರು ಆಗ್ರಹಿಸಿದರು.

ನಮಗಷ್ಟೇ ಅಲ್ಲ. ಎಲ್ಲ ರಾಜ್ಯಗಳಿಗೂ ಕೊಡಬೇಕು. ಈಗ 1 ರೂ.ನಲ್ಲಿ 13 ಪೈಸೆ ಮಾತ್ರ ಕೊಡುತ್ತಿದೆ. ಅವರು ಹೆಚ್ಚು ತೆಗೆದುಕೊಳ್ಳುವ ತೆರಿಗೆಯಲ್ಲಿ ನಮಗೂ ಪಾಲು ಕೊಡಬೇಕು. ಜಿಎಸ್‍ಟಿ ಪರಿಷ್ಕರಣೆಯಿಂದ ಜನರಿಗೆ ಅನುಕೂಲ ಆಗುತ್ತದೆ. ಆದರೆ, ರಾಜ್ಯ ಸರ್ಕಾರಕ್ಕೆ ನಷ್ಟವಾಗುತ್ತದೆ. ನಮ್ಮಿಂದ ಹೆಚ್ಚುವರಿ ಸಂಗ್ರಹ ಮಾಡುತ್ತಿದ್ದರೂ ನಮಗೆ ಕೊಡುವುದು ಅತ್ಯಲ್ಪ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

33 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

4 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

4 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

5 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago