ರಾಜ್ಯ

ರಾಜ್ಯದ ಎಲ್ಲಾ ದೇವಾಲಯಗಳು ಸುರಕ್ಷಿತವಾಗಿದೆ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಧರ್ಮಸ್ಥಳ ಅಷ್ಟೇ ಅಲ್ಲ, ರಾಜ್ಯದ ಎಲ್ಲಾ ದೇವಸ್ಥಾನಗಳು ಸುರಕ್ಷಿತವಾಗಿವೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ಪ್ರಕರಣದಲ್ಲಿ ಎಸ್‍ಐಟಿ ತನಿಖೆ ಮಾಡುತ್ತಿದ್ದು, ಸರಿಯಾದ ದಾರಿಯಲ್ಲೇ ಹೋಗುತ್ತಿದೆ. ಬಿಜೆಪಿಯವರು ಎನ್‍ಐಎ ತನಿಖೆಗೆ ವಹಿಸಿ ಎಂದು ಒತ್ತಾಯಿಸುತ್ತಿದ್ದಾರೆ. ಈ ಹಿಂದೆ ಸೌಜನ್ಯ ಪ್ರಕರಣದಲ್ಲಿ ಸಿಬಿಐ ತನಿಖೆ ಮಾಡಿತ್ತು. ಆಗ ಸೌಜನ್ಯಗೆ ಯಾಕೆ ನ್ಯಾಯ ಸಿಗಲಿಲ್ಲ? ಎಂದು ಪ್ರಶ್ನಿಸಿದರು.

ಬುರುಡೆ ಪ್ರಕರಣ ತಾರ್ಕಿಕ ಅಂತ್ಯಕ್ಕೆ ಬರಲಿದೆ ಎಂದ ಅವರು, ಅರಮನೆ ಮೈದಾನದಲ್ಲಿ ನಡೆಯಲಿರುವ ಈದ್‍ಮಿಲಾದ್ ಕಾರ್ಯಕ್ರಮ ವಿಚಾರದ ಬಗ್ಗೆ ನನಗೆ ಹೆಚ್ಚು ಮಾಹಿತಿ ಇಲ್ಲ. ಮೌಲ್ವಿಗಳು, ಪಾದ್ರಿಗಳು ಮಾಡುತ್ತಾರೆ. ಜನರಿಗೆ ಸನ್ಮಾರ್ಗದಲ್ಲಿ ಹೋಗಿ, ಜನರನ್ನು ಸರಿದಾರಿಗೆ ತನ್ನಿ ಎಂದು ಹೇಳುತ್ತಾರೆ. ಅವರು ಎಲ್ಲೂ ಬೇರೆಯದನ್ನು ಹೇಳಲ್ಲ. ಇದರಲ್ಲಿ ತಪ್ಪೇನಿದೆ? ಎಂದರು.

ಇದನ್ನು ಓದಿ:ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್‌ಗೆ ಕಾನೂನು ಸಂಕಷ್ಟ

ಕೇಂದ್ರದ ಸರ್ಕಾರದ ಜಿಎಸ್‍ಟಿ ಪರಿಷ್ಕರಣೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೇಂದ್ರ ಸರ್ಕಾರ ಜಿಎಸ್‍ಟಿ ಜಾರಿಗೆ ತಂದು ಜನರಿಗೆ ಸಾಕಷ್ಟು ಹೊರೆ ಹಾಕಿತ್ತು. ಬಡವರು, ಮಧ್ಯಮವರ್ಗದವರಿಗೆ ಹೊರೆಯಾಗಿತ್ತು. ನಮ್ಮ ರಾಜ್ಯದಿಂದ 4.5 ಲಕ್ಷ ಕೋಟಿ ರೂ. ತೆರಿಗೆ ಹೋಗುತ್ತಿತ್ತು. ಆದರೂ ಅವರು ನಮಗೆ ಕೊಡುವುದು ಕಡಿಮೆ. ಜಿಎಸ್‍ಟಿ ಇಳಿಕೆಯಿಂದ ನಮಗೆ 15 ಸಾವಿರ ಕೋಟಿ ರೂ. ಕೊರತೆಯಾಗುತ್ತದೆ. ಇದನ್ನು ಕೇಂದ್ರ ಸರ್ಕಾರ ಕೊಡಬೇಕು ಎಂದು ಅವರು ಆಗ್ರಹಿಸಿದರು.

ನಮಗಷ್ಟೇ ಅಲ್ಲ. ಎಲ್ಲ ರಾಜ್ಯಗಳಿಗೂ ಕೊಡಬೇಕು. ಈಗ 1 ರೂ.ನಲ್ಲಿ 13 ಪೈಸೆ ಮಾತ್ರ ಕೊಡುತ್ತಿದೆ. ಅವರು ಹೆಚ್ಚು ತೆಗೆದುಕೊಳ್ಳುವ ತೆರಿಗೆಯಲ್ಲಿ ನಮಗೂ ಪಾಲು ಕೊಡಬೇಕು. ಜಿಎಸ್‍ಟಿ ಪರಿಷ್ಕರಣೆಯಿಂದ ಜನರಿಗೆ ಅನುಕೂಲ ಆಗುತ್ತದೆ. ಆದರೆ, ರಾಜ್ಯ ಸರ್ಕಾರಕ್ಕೆ ನಷ್ಟವಾಗುತ್ತದೆ. ನಮ್ಮಿಂದ ಹೆಚ್ಚುವರಿ ಸಂಗ್ರಹ ಮಾಡುತ್ತಿದ್ದರೂ ನಮಗೆ ಕೊಡುವುದು ಅತ್ಯಲ್ಪ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ; ವಾರದಲ್ಲಿ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…

10 hours ago

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

11 hours ago

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ…

13 hours ago

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

14 hours ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

16 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

17 hours ago