ರಾಜ್ಯ

ಇಲ್ಲಿ ನೆಲೆಸಿರುವ ಎಲ್ಲರೂ ಕನ್ನಡಿಗರೇ. ಮನೆ ಭಾಷೆ ಯಾವುದೇ ಇದ್ದರೂ ವ್ಯಾವಹಾರಿಕ ಭಾಷೆ ಕನ್ನಡವಾಗಲಿ: ಸಿಎಂ ಕರೆ

ಡಾ.ರಾಜ್ ಕುಮಾರ್ ಅವರು ಕನ್ನಡ ಚಳವಳಿಗೆ ದುಮುಕಿದಾಗ ಗೋಕಾಕ್ ಚಳವಳಿಗೆ ವೇಗ ಹೆಚ್ಚಾಯ್ತು: ಸಿಎಂ

ರಾಯಚೂರು: ಕರ್ನಾಟಕ ಸಂಪೂರ್ಣ ಕನ್ನಡಮಯವಾಗಲಿ. ಕನ್ನಡ ನೆಲ, ಜಲ, ಸಂಸ್ಕೃತಿ, ಭಾಷೆ, ಭೂಮಿ ಎಲ್ಲವೂ ಕನ್ನಡಮಯವಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ “ಕನ್ನಡ ಸಂಭ್ರಮ 50ರ ಅಂಗವಾಗಿ ಆಯೋಜಿಸಿದ್ದ ಗೋಕಾಕ್ ಚಳವಳಿ: ಹಿನ್ನೋಟ-ಮುನ್ನೋಟ” ಬೃಹತ್ ಸಮಾವೇಷವನ್ನು ಉದ್ಘಾಟಿಸಿ ಮಾತನಾಡಿದರು.

ಇಲ್ಲಿ ನೆಲೆಸಿರುವ ಎಲ್ಲರೂ ಕನ್ನಡಿಗರೇ. ಮನೆ ಭಾಷೆ ಯಾವುದೇ ಇದ್ದರೂ ವ್ಯಾವಹಾರಿಕ ಭಾಷೆ ಕನ್ನಡವಾಗಲಿ. ಕನ್ನಡ ಅಗ್ರ ಭಾಷೆಯಾಗಲಿ, ಕನ್ನಡ ಮೊದಲ ಭಾಷೆಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಗೋಕಾಕ್ ಚಳವಳಿಯ ಪರಿಣಾಮ ರಾಜ್ಯದಲ್ಲಿ ಕನ್ನಡದ ವಾತಾವರಣ ವಿಸ್ತರಿಸಲು ಕನ್ನಡ ಕಾವಲು ಸಮಿತಿಯನ್ನು ರಚಿಸಲಾಯಿತು. ಬಳಿಕ ಇದೇ ಸಮಿತಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಯಿತು ಎಂದರು.

ಪ್ರತಿಯೊಂದು ಭಾಷೆಯನ್ನೂ ಕಲಿಯಿರಿ, ಆದರೆ ಆಡಳಿತ ಭಾಷೆ ಕನ್ನಡ ಆಗಿರಲಿ ಎಂದರು.

ಕನ್ನಡ ನೆಲದಲ್ಲಿ ನಡೆದ ಕನ್ನಡ ಭಾಷಾ ಚಳವಳಿ ಅತ್ಯಂತ ಚರಿತ್ರಿಕವಾದದ್ದು. ನಾನು ಕಾವಲು ಸಮಿತಿ ಅಧ್ಯಕ್ಷನಾಗಿದ್ದಾಗ ಇಂಗ್ಲಿಷ್ ಟೈಮ್ ರೈಟರ್ ಗಳನ್ನು ಕಿತ್ತುಕೊಂಡು ಕನ್ನಡ ಟೈಪ್ ರೈಟರ್ ಗಳನ್ನು ಕೊಡ್ತಿದ್ದೆ ಎಂದು ತಮ್ಮ ಅವಧಿಯ ಕನ್ನಡ ಕಟ್ಟುವ ಕೆಲಸವನ್ನು ಸ್ಮರಿಸಿದರು.

ಎಲ್ಲಾ ಭಾಷೆಗಳ ಬಗ್ಗೆ ಗೌರವ ಇರಲಿ, ಎಷ್ಟು ಭಾಷೆಗಳನ್ನಾದರೂ ಕಲಿಯಿರಿ ಆದರೆ ಈ ನೆಲದ ಭಾಷೆ ಕನ್ನಡವನ್ನು ಬಿಟ್ಟು ಕೊಡುವಷ್ಟು ದಾರಾಳತನ ಬೇಡ ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಹಿರಿಯ ಕನ್ನಡ ಚಳವಳಿಗಾರರನ್ನು, ಗೋಕಾಕ್ ಹೋರಾಟಗಾರರನ್ನು ಮುಖ್ಯಮಂತ್ರಿಗಳು ಸನ್ಮಾನಿಸಿದರು.

ಸಚಿವರಾದ ಶಿವರಾಜ್ ತಂಗಡಗಿ, ಹೆಚ್.ಸಿ.ಮಹದೇವಪ್ಪ, ಶರಣ ಪ್ರಕಾಶ್ ಪಾಟೀಲ್, ಬೋಸರಾಜು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ ಸೇರಿ ಜಿಲ್ಲೆಯ ಶಾಸಕರುಗಳು, ಮಾಜಿ ಶಾಸಕರು, ಕನ್ನಡ ಚಳವಳಿಗಾರರು, ಹೋರಾಟಗಾರರು, ಕನ್ನಡದ ಕಾರ್ಯಕರ್ತರು ಉಪಸ್ಥಿತರಿದ್ದರು.‌

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

3 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

3 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

3 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

3 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

4 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

4 hours ago