ರಾಜ್ಯ

ಇಲ್ಲಿ ನೆಲೆಸಿರುವ ಎಲ್ಲರೂ ಕನ್ನಡಿಗರೇ. ಮನೆ ಭಾಷೆ ಯಾವುದೇ ಇದ್ದರೂ ವ್ಯಾವಹಾರಿಕ ಭಾಷೆ ಕನ್ನಡವಾಗಲಿ: ಸಿಎಂ ಕರೆ

ಡಾ.ರಾಜ್ ಕುಮಾರ್ ಅವರು ಕನ್ನಡ ಚಳವಳಿಗೆ ದುಮುಕಿದಾಗ ಗೋಕಾಕ್ ಚಳವಳಿಗೆ ವೇಗ ಹೆಚ್ಚಾಯ್ತು: ಸಿಎಂ

ರಾಯಚೂರು: ಕರ್ನಾಟಕ ಸಂಪೂರ್ಣ ಕನ್ನಡಮಯವಾಗಲಿ. ಕನ್ನಡ ನೆಲ, ಜಲ, ಸಂಸ್ಕೃತಿ, ಭಾಷೆ, ಭೂಮಿ ಎಲ್ಲವೂ ಕನ್ನಡಮಯವಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ “ಕನ್ನಡ ಸಂಭ್ರಮ 50ರ ಅಂಗವಾಗಿ ಆಯೋಜಿಸಿದ್ದ ಗೋಕಾಕ್ ಚಳವಳಿ: ಹಿನ್ನೋಟ-ಮುನ್ನೋಟ” ಬೃಹತ್ ಸಮಾವೇಷವನ್ನು ಉದ್ಘಾಟಿಸಿ ಮಾತನಾಡಿದರು.

ಇಲ್ಲಿ ನೆಲೆಸಿರುವ ಎಲ್ಲರೂ ಕನ್ನಡಿಗರೇ. ಮನೆ ಭಾಷೆ ಯಾವುದೇ ಇದ್ದರೂ ವ್ಯಾವಹಾರಿಕ ಭಾಷೆ ಕನ್ನಡವಾಗಲಿ. ಕನ್ನಡ ಅಗ್ರ ಭಾಷೆಯಾಗಲಿ, ಕನ್ನಡ ಮೊದಲ ಭಾಷೆಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಗೋಕಾಕ್ ಚಳವಳಿಯ ಪರಿಣಾಮ ರಾಜ್ಯದಲ್ಲಿ ಕನ್ನಡದ ವಾತಾವರಣ ವಿಸ್ತರಿಸಲು ಕನ್ನಡ ಕಾವಲು ಸಮಿತಿಯನ್ನು ರಚಿಸಲಾಯಿತು. ಬಳಿಕ ಇದೇ ಸಮಿತಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಯಿತು ಎಂದರು.

ಪ್ರತಿಯೊಂದು ಭಾಷೆಯನ್ನೂ ಕಲಿಯಿರಿ, ಆದರೆ ಆಡಳಿತ ಭಾಷೆ ಕನ್ನಡ ಆಗಿರಲಿ ಎಂದರು.

ಕನ್ನಡ ನೆಲದಲ್ಲಿ ನಡೆದ ಕನ್ನಡ ಭಾಷಾ ಚಳವಳಿ ಅತ್ಯಂತ ಚರಿತ್ರಿಕವಾದದ್ದು. ನಾನು ಕಾವಲು ಸಮಿತಿ ಅಧ್ಯಕ್ಷನಾಗಿದ್ದಾಗ ಇಂಗ್ಲಿಷ್ ಟೈಮ್ ರೈಟರ್ ಗಳನ್ನು ಕಿತ್ತುಕೊಂಡು ಕನ್ನಡ ಟೈಪ್ ರೈಟರ್ ಗಳನ್ನು ಕೊಡ್ತಿದ್ದೆ ಎಂದು ತಮ್ಮ ಅವಧಿಯ ಕನ್ನಡ ಕಟ್ಟುವ ಕೆಲಸವನ್ನು ಸ್ಮರಿಸಿದರು.

ಎಲ್ಲಾ ಭಾಷೆಗಳ ಬಗ್ಗೆ ಗೌರವ ಇರಲಿ, ಎಷ್ಟು ಭಾಷೆಗಳನ್ನಾದರೂ ಕಲಿಯಿರಿ ಆದರೆ ಈ ನೆಲದ ಭಾಷೆ ಕನ್ನಡವನ್ನು ಬಿಟ್ಟು ಕೊಡುವಷ್ಟು ದಾರಾಳತನ ಬೇಡ ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಹಿರಿಯ ಕನ್ನಡ ಚಳವಳಿಗಾರರನ್ನು, ಗೋಕಾಕ್ ಹೋರಾಟಗಾರರನ್ನು ಮುಖ್ಯಮಂತ್ರಿಗಳು ಸನ್ಮಾನಿಸಿದರು.

ಸಚಿವರಾದ ಶಿವರಾಜ್ ತಂಗಡಗಿ, ಹೆಚ್.ಸಿ.ಮಹದೇವಪ್ಪ, ಶರಣ ಪ್ರಕಾಶ್ ಪಾಟೀಲ್, ಬೋಸರಾಜು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ ಸೇರಿ ಜಿಲ್ಲೆಯ ಶಾಸಕರುಗಳು, ಮಾಜಿ ಶಾಸಕರು, ಕನ್ನಡ ಚಳವಳಿಗಾರರು, ಹೋರಾಟಗಾರರು, ಕನ್ನಡದ ಕಾರ್ಯಕರ್ತರು ಉಪಸ್ಥಿತರಿದ್ದರು.‌

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

46 mins ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

2 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

4 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

4 hours ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

5 hours ago

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…

5 hours ago