ಬೆಂಗಳೂರು: ಕಂದಾಯ ಇಲಾಖೆಯ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದ್ದು, ಆ ಅಧಿಕಾರಿಗಳನ್ನು ರಕ್ಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಚಿವ ಬೈರೇಗೌಡರ ವಿರುದ್ಧ ರಾಜ್ಯಪಾಲರಿಗೆ ಸಾಮಾಜಿಕ ಕಾರ್ಯಕರ್ತರೊಬ್ಬರು ದೂರು ನೀಡಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ಆರೋಪದಡಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎಂಬುವವರು ರಾಜ್ಯಪಾಲರಿಗೆ ದೂರು ನೀಡಿದ್ದು, ಕಂದಾಯ ಇಲಾಖೆಯಲ್ಲಿನ ಭ್ರಷ್ಟಾಚಾರಗಳಿಗೆ ಕಡಿವಾಣ ಹಾಕುತ್ತಿಲ್ಲ. ಸಚಿವರೇ ಭ್ರಷ್ಟ ಅಧಿಕಾರಿಗಳನ್ನು ರಕ್ಷಣೆ ಮಾಡುತ್ತಿದ್ದಾರೆ. ಹೀಗಾಗಿ ಸಚಿವರ ವಿರುದ್ಧ ಕ್ರಮವಹಿಸಿ ಅವರ ಸೂಕ್ತ ಕ್ರಮ ಕೈಗೊಳ್ಳಬೇಕು. ಅಲ್ಲದೇ ಕಂದಾಯ ಇಲಾಖೆಯಲ್ಲಿನ ಹಗರಣಗಳ ಬಗ್ಗೆ ತನಿಖೆ ನಡೆಸಿ, ಸೂಕ್ತ ಕ್ರಮಕ್ಕೆ ಸರ್ಕಾರ ಸೂಚನೆ ನೀಡಬೇಕು ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ಇನ್ನೂ ದೊಡ್ಡಬಳ್ಳಾಪುರ ಹುಲಿಕುಂಟೆ ಗ್ರಾಮದ ಜಮೀನು ವ್ಯವಹಾರಕ್ಕೆ ಸಂಬಂಧಿಸಿದಂತೆ ಸರ್ವೇ ನಂಬರ್ 150ರಲ್ಲಿರುವ ಜಮೀನನ್ನು ಪೋಡಿ ಮಾಡದೇ ಹಾಗೂ ನಕ್ಷೆ ತಯಾರಿಸದೇ ಸಾಗುವಳಿದಾರರು ಕಾನೂನು ಬಾಹಿರವಾಗಿ ಮಾರಾಟ ಮಾಡಿದ್ದಾರೆ. ಅಲ್ಲದೇ ಪಲ್ಟಿತ್ ಡೆವಲಪರ್ಸ್ ಎಲ್ಎಲ್ಪಿ ಕಂಪೆನಿಗೆ ಮಾರಾಟ ಮಾಡಿದ್ದು, ತಹಶೀಲ್ದಾರ ಮತ್ತು ಉಪ ವಿಭಾಗಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.
ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…