ರಾಜ್ಯ

ಸೌಹಾರ್ಧತೆಗೆ ಧಕ್ಕೆಯಾಗುವ ಬ್ಯಾನರ್ ಅಳವಡಿಕೆ ಆರೋಪ: ಪಿಡಿಓ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ : ಧರ್ಮಸಂರಕ್ಷಣಾ ಯಾತ್ರೆಯ ಸಲುವಾಗಿ ಹಾಕಿದ ಬ್ಯಾನರ್ ಗಳ ಸಮೀಪ ಪ್ರಾದೇಶಿಕ ಗುಂಪುಗಳ ನಡುವಣ ಸೌಹಾರ್ಧಕ್ಕೆ ಬಾಧಕವಾಗುವಂತಹ ಬರವಣಿಗೆ ಇರುವ ಬ್ಯಾನರ್ ಅಳವಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ನಿವಾಸಿ ಸಂದೀಪ್ ರೈ ನೀಡಿರುವ ದೂರಿನ ಮೇರೆಗೆ ಉಜಿರೆಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿ ಮತ್ತು ಮಹೇಶ್ ಶೆಟ್ಟಿ ತಿಮರೋಡಿ, ಅನಿಲ್ ಕುಮಾರ್ ಅಂತರ, ಕಿರಣ್ ಗೌಡ, ಪ್ರಜ್ವಲ್ ಕೆ.ವಿ ಗೌಡ, ಮನೋಹರ್ ಮನ್ನಡ್ಕ, ಮನೋಜ್ ಸಾಲ್ಯಾನ್ ಕುಂಜರ್ಪ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.

ಅ.29 ರಂದು ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಧರ್ಮಸಂರಕ್ಷಣಾ ಯಾತ್ರೆಯ ಸಲುವಾಗಿ, ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆದು ಯಾತ್ರೆಗೆ ಬೆಂಬಲ ಸೂಚಿಸಿ ಅಳವಡಿಸಲಾಗಿದ್ದ ಬ್ಯಾನರ್ ಗಳ ಸಮೀಪದಲ್ಲೇ, ಸದ್ರಿ ಪಾದಯಾತ್ರೆಯನ್ನು ನಿಲ್ಲಿಸುವ ಒಳಸಂಚಿನಿಂದ ಪ್ರಾದೇಶಿಕ ಗುಂಪುಗಳ ನಡುವಣ ಸೌಹಾರ್ಧತೆಕ್ಕೆ ಬಾಧಕವಾಗುವಂತಹ ಬರವಣೆಗೆಗಳನ್ನು ಹೊಂದಿರುವ ಬ್ಯಾನರ್ ಗಳನ್ನು ಅಳವಡಿಸಿ, ಪ್ರಾದೇಶಿಕ ಗುಂಪುಗಳ ನಡುವೆ ವೈರತ್ವ, ದ್ವೇಷ,ವೈಮನಸ್ಸು ಭಾವನೆಗಳನ್ನು ಬಿತ್ತಿಸಿ ಅಸೌಹಾರ್ಧತೆಯನ್ನು ಸೃಷ್ಟಿಸಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿ, ಅನಿಲ್ ಕುಮಾರ್ ಅಂತರ, ಕಿರಣ್ ಗೌಡ, ಪ್ರಜ್ವಲ್ ಕೆ ವಿ ಗೌಡ, ಮನೋಹರ್ ಮನ್ನಡ್ಕ,ಮನೋಜ್ ಸಾಲ್ಯಾನ್ ಕುಂಜರ್ಪ, ಮತ್ತು ಇತರರ ವಿರುದ್ಧ ಹಾಗೂ ಸಮಾಜದ ಸ್ವಾಸ್ಥ್ಯವನ್ನು ಕದಡುವಂತಹ ಕೆಟ್ಟದಾಗಿ ಶಬ್ದಗಳನ್ನು ಬರೆದ ಬ್ಯಾನರ್ ಅಳವಡಿಸುವುದಕ್ಕೆ ಅನುಮತಿ ನೀಡಿದ ಉಜಿರೆಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ 106 /2023 ಕಲಂ; 120(B)153(A) 153(B) ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

andolanait

Recent Posts

ಬಿಹಾರದ ಮೊದಲ ಬಿಜೆಪಿ ಸಿಎಂ ಆಗಿ ಸಾಮ್ರಾಟ್‌ ಚೌಧರಿ ಪ್ರಮಾಣವಚನ ಸ್ವೀಕಾರ

ಪಾಟ್ನಾ: ಬಿಹಾರದ ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್‌ ಚೌಧರಿ ಪ್ರಮಾಣವಚನ ಸ್ವೀಕರಿಸಿದರು. ಪಾಟ್ನಾದ ಲೋಕಭವನದಲ್ಲಿ ರಾಜ್ಯಪಾಲ ಸೈಯದ್‌…

14 mins ago

ಶ್ರೀರಂಗಪಟ್ಟಣದ ಮುತ್ತು ಮಾರಮ್ಮ ದೇವಿ ಕರಗ: ಕೊಂಡದಲ್ಲಿ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

50 mins ago

ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…

2 hours ago

ಅಂಡಮಾನ್‌ ಸಮುದ್ರದಲ್ಲಿ ಮುಳುಗಿದ ವಲಸಿಗರಿದ್ದ ದೋಣಿ: 250 ಜನ ಕಣ್ಮರೆ

ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್‌ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…

2 hours ago

ಹನೂರು| ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ: ರೈತ ಮುಖಂಡರ ಆಕ್ರೋಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…

2 hours ago

ಹನೂರು| ಕುಡಿಯುವ ನೀರಿಗೆ ಹಾಹಾಕಾರ: ಖಾಲಿ ಬಿಂದಿಗೆ ಹಿಡಿದು ಮಹಿಳೆಯರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…

2 hours ago