ರಾಜ್ಯ

ಸೌಹಾರ್ಧತೆಗೆ ಧಕ್ಕೆಯಾಗುವ ಬ್ಯಾನರ್ ಅಳವಡಿಕೆ ಆರೋಪ: ಪಿಡಿಓ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ : ಧರ್ಮಸಂರಕ್ಷಣಾ ಯಾತ್ರೆಯ ಸಲುವಾಗಿ ಹಾಕಿದ ಬ್ಯಾನರ್ ಗಳ ಸಮೀಪ ಪ್ರಾದೇಶಿಕ ಗುಂಪುಗಳ ನಡುವಣ ಸೌಹಾರ್ಧಕ್ಕೆ ಬಾಧಕವಾಗುವಂತಹ ಬರವಣಿಗೆ ಇರುವ ಬ್ಯಾನರ್ ಅಳವಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ನಿವಾಸಿ ಸಂದೀಪ್ ರೈ ನೀಡಿರುವ ದೂರಿನ ಮೇರೆಗೆ ಉಜಿರೆಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿ ಮತ್ತು ಮಹೇಶ್ ಶೆಟ್ಟಿ ತಿಮರೋಡಿ, ಅನಿಲ್ ಕುಮಾರ್ ಅಂತರ, ಕಿರಣ್ ಗೌಡ, ಪ್ರಜ್ವಲ್ ಕೆ.ವಿ ಗೌಡ, ಮನೋಹರ್ ಮನ್ನಡ್ಕ, ಮನೋಜ್ ಸಾಲ್ಯಾನ್ ಕುಂಜರ್ಪ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.

ಅ.29 ರಂದು ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಧರ್ಮಸಂರಕ್ಷಣಾ ಯಾತ್ರೆಯ ಸಲುವಾಗಿ, ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆದು ಯಾತ್ರೆಗೆ ಬೆಂಬಲ ಸೂಚಿಸಿ ಅಳವಡಿಸಲಾಗಿದ್ದ ಬ್ಯಾನರ್ ಗಳ ಸಮೀಪದಲ್ಲೇ, ಸದ್ರಿ ಪಾದಯಾತ್ರೆಯನ್ನು ನಿಲ್ಲಿಸುವ ಒಳಸಂಚಿನಿಂದ ಪ್ರಾದೇಶಿಕ ಗುಂಪುಗಳ ನಡುವಣ ಸೌಹಾರ್ಧತೆಕ್ಕೆ ಬಾಧಕವಾಗುವಂತಹ ಬರವಣೆಗೆಗಳನ್ನು ಹೊಂದಿರುವ ಬ್ಯಾನರ್ ಗಳನ್ನು ಅಳವಡಿಸಿ, ಪ್ರಾದೇಶಿಕ ಗುಂಪುಗಳ ನಡುವೆ ವೈರತ್ವ, ದ್ವೇಷ,ವೈಮನಸ್ಸು ಭಾವನೆಗಳನ್ನು ಬಿತ್ತಿಸಿ ಅಸೌಹಾರ್ಧತೆಯನ್ನು ಸೃಷ್ಟಿಸಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿ, ಅನಿಲ್ ಕುಮಾರ್ ಅಂತರ, ಕಿರಣ್ ಗೌಡ, ಪ್ರಜ್ವಲ್ ಕೆ ವಿ ಗೌಡ, ಮನೋಹರ್ ಮನ್ನಡ್ಕ,ಮನೋಜ್ ಸಾಲ್ಯಾನ್ ಕುಂಜರ್ಪ, ಮತ್ತು ಇತರರ ವಿರುದ್ಧ ಹಾಗೂ ಸಮಾಜದ ಸ್ವಾಸ್ಥ್ಯವನ್ನು ಕದಡುವಂತಹ ಕೆಟ್ಟದಾಗಿ ಶಬ್ದಗಳನ್ನು ಬರೆದ ಬ್ಯಾನರ್ ಅಳವಡಿಸುವುದಕ್ಕೆ ಅನುಮತಿ ನೀಡಿದ ಉಜಿರೆಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ 106 /2023 ಕಲಂ; 120(B)153(A) 153(B) ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

andolanait

Recent Posts

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

42 mins ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

3 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

4 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

5 hours ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

9 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

9 hours ago