ರಾಜ್ಯ

ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಬೆದರಿಕೆ ಆರೋಪದಡಿ ಉದ್ಯಮಿ ವಿಜಯ್‌ ಟಾಟಾ ದೂರು

ಬೆಂಗಳೂರು: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ವಾಣಿಜೋದ್ಯಮಿ ವಿಜಯ್‌ ಟಾಟಾ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಎಚ್‌.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್‌ ಮುಖಂಡ ರಮೇಶ್‌ ಗೌಡ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್‌ ಠಾಣೆಯಲ್ಲಿ 50 ಕೋಟಿ ರೂ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ವಿಜಯ್‌ ಟಾಟಾ ಆರೋಪ ಮಾಡಿದ್ದಾರೆ.

ಜೆಡಿಎಸ್‌ ಮುಖಂಡ ರಮೇಶ್‌ ಗೌಡ ನನ್ನ ಮನೆಗೆ ಬಂದಿದ್ದರು. ಬಳಿಕ ನಿಖಿಲ್‌ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ ಎಂದು ತಿಳಿಸಿದರು. ಅದೇ ಸಂದರ್ಭದಲ್ಲಿ ಎಚ್‌.ಡಿ.ಕುಮಾರಸ್ವಾಮಿ ಅವರು ದೂರವಾಣಿ ಮೂಲಕ ಸಂಪರ್ಕಿಸಿ ಚುನಾವಣೆಗಾಗಿ 50 ಕೋಟಿ ರೂ. ಹಣ ನೀಡುವಂತೆ ನನ್ನನ್ನು ಕೇಳಿದ್ದರು. ಆದರೆ ನಾನು ಹಣ ಕೊಡಲಾಗದು ಎಂದಿದ್ದಕ್ಕೆ ಕುಮಾರಸ್ವಾಮಿ ಕೋಪಿಸಿಕೊಂಡಿದ್ದರು. ನಂತರ ನಿಮ್ಮ ಯೋಜನೆಯನ್ನು ಸಂಪೂರ್ಣವಾಗಲು ಬಿಡುವುದಿಲ್ಲ ಎಂಬಂತೆ ಬೆದರಿಕೆ ಹಾಕಿದ್ದಾರೆ. ಈಗಾಗಲೇ 2019ರ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರ ಕುಟುಂಬಕ್ಕಾಗಿ ಅನೇಕ ಹಣ ಖರ್ಚು ಮಾಡಿದ್ದೇವೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಜೆಡಿಎಸ್‌ ಮುಖಂಡ ರಮೇಶ್‌ ಗೌಡ ದೇವಸ್ಥಾನ ಕಟ್ಟಲು 5 ಕೋಟಿ ರೂ. ಹಣ ಕೇಳಿದ್ದರು. ಆದರೆ ಆ ವೇಳೆ ನಾನು ನನಗೆ ತುಂಬಾ ಕಷ್ಟವಿದೆ. ಯಾವುದೇ ಕಾರಣಕ್ಕೂ ಈ ಸಂದರ್ಭದಲ್ಲಿ ಹಣ ನೀಡಲು ಆಗುವುದಿಲ್ಲ ಎಂದು ಹೇಳಿದ್ದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ 1 ವಾರದಿಂದ ರಮೇಶ್‌ ಗೌಡ ಫೋನ್‌ ಕಾಲ್‌ ಮತ್ತು ಸಂದೇಶಗಳನ್ನು ಮಾಡುತ್ತಿದ್ದರು ಎಂದು ದೂರಿನಲ್ಲಿ ವಿಜಯ್‌ ಟಾಟಾ ಉಲ್ಲೇಖಿಸಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

5 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

7 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

8 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

10 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

16 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

22 hours ago