ಬೆಂಗಳೂರು: ಕಾಂಗ್ರೆಸ್ ಸರ್ಕಾರ ತಮ್ಮ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ರಾಜ್ಯದಲ್ಲಿ ಅಗತ್ಯ ವಸ್ತುಗಳ ಮೇಲೆ ದರ ಏರಿಕೆ ಹಾಗೂ ಕೆಲವು ಟೆಂಡರ್ಗಳಲ್ಲಿ ಅಕ್ರಮ ಮಾಡುತ್ತಿದ್ದಾರೆ ಎಂದು ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಏಪ್ರಿಲ್.6 ) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ಸರ್ಕಾರ ಸ್ಮಾರ್ಟ್ ಮೀಟರ್ಗಳನ್ನೇ ಬಿಟ್ಟಿಲ್ಲ. ಕಸವನ್ನೂ ಬಿಡುತ್ತಾರಾ? ಅಲ್ಲದೇ ರಾಜ್ಯದಲ್ಲಿ ಜನನ ಮತ್ತು ಮರಣ ಪ್ರಮಾಣ ಪತ್ರಗಳ ನೋಂದಣಿ ಶುಲ್ಕವನ್ನು ಹೆಚ್ಚಳ ಮಾಡಿದ್ದಾರೆ. ಇನ್ನೂ ಪೋಸ್ಟ್ ಮಾರ್ಟಂಗೂ ದರ ಏರಿಕೆ ಮಾಡಬೇಕು ಅಷ್ಟೇ. ಒಂದು ವೇಳೆ ಸರ್ಕಾರ ಹಾಗೇನಾದರೂ ಮಾಡಿದರೆ ರಾಜ್ಯದ ಜನತೆ ಸಾಯೋದಕ್ಕೂ ಹಿಂಜರಿಯುತ್ತಾರೆ ಎಂದು ಲೇವಡಿ ಮಾಡಿದ್ದಾರೆ.
ಇದೇ ಸಂದರ್ಭದಲ್ಲಿ ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣದ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಒಬ್ಬರನ್ನು ಹತ್ಯೆ ಮಾಡಿ ರಾಜಕಾರಣ ಮಾಡುತ್ತದೆ. ಈ ಹಿಂದೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಹಾಗೂ ರೋಹಿತ್ ವೇಮುಲ ವಿಚಾರದಲ್ಲಿ ಮಾಡಿದ ನಿಮ್ಮ ರಾಜಕಾರಣ, ಅಪಪ್ರಚಾರ ಯಾವ ಸೀಮೆಯದು? ಈಗಲೂ ಅದೇ ರೀತಿ ವಿನಯ್ ಸಾವಿನಲ್ಲೂ ಅಪಪ್ರಚಾರ ಮಾಡುತ್ತಿದ್ದೀರಿ. ಹಾಗಾದರೇ ವಿನಯ್ ಸೋಮಯ್ಯ ಡೆತ್ ನೋಟ್ ಬರೆದಿದ್ದು ಸುಳ್ಳಾ? ಕಾಂಗ್ರೆಸ್ ಸುಳ್ಳು ಆರೋಪ ಮಾಡುವ ಮೂಲಕ ರಾಜಕಾರಣ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…