ರಾಜ್ಯ

ಮತಗಳ್ಳತನ ಆರೋಪ | ನ್ಯಾಯಾಂಗ ಆಯೋಗ ರಚನೆಗೆ ಸರ್ಕಾರದ ಚಿಂತನೆ

ಬೆಂಗಳೂರು : ಚುನಾವಣಾ ಅಕ್ರಮಗಳ ಬಗ್ಗೆ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್‍ಗಾಂಧಿ ಅವರ ಗಂಭೀರ ಆರೋಪ ಕುರಿತಂತೆ ತನಿಖೆ ನಡೆಸಲು ಎಸ್‍ಐಟಿ ಅಥವಾ ನ್ಯಾಯಾಂಗ ಆಯೋಗ ರಚನೆಯ ಬಗ್ಗೆ ರಾಜ್ಯಸರ್ಕಾರ ಚಿಂತನೆ ನಡೆಸಿದೆ.

ಶುಕ್ರವಾರ ಫ್ರೀಡಂಪಾರ್ಕ್‍ನಲ್ಲಿ ಕಾಂಗ್ರೆಸ್ ವತಿಯಿಂದ ನಡೆದ ಬೃಹತ್ ಪ್ರತಿಭಟನೆಯಲ್ಲಿ ರಾಹುಲ್‍ಗಾಂಧಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರವ್ಯಾಪ್ತಿಯ ಮಹದೇವಪುರ ವಿಧಾನಸಭಾ ಚುನಾವಣಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ಆಗಿರುವ ಲೋಪಗಳ ಕುರಿತು ತನಿಖೆ ನಡೆಸುವಂತೆ ರಾಜ್ಯಸರ್ಕಾರಕ್ಕೆ ಸಲಹೆ ನೀಡಿದ್ದರು.

ವಿಧಾನಸಭೆ ಚುನಾವಣೆಗೂ ಮುನ್ನ ಚಿಲುಮೆ ಟ್ರಸ್ಟ್ ವತಿಯಿಂದ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿನ ಲೋಪಗಳ ಬಗ್ಗೆ ಒಂದು ಸುತ್ತಿನ ತನಿಖೆಯಾಗಿವೆ. ಅನಂತರವೂ ಮಹದೇವಪುರ ವಿಧಾನಸಭಾ ಕ್ಷೇತದಲ್ಲಿ ಲೋಕಸಭೆ ಚುನಾವಣಾ ವೇಳೆಗೆ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಲೋಪಗಳಾಗಿವೆ ಎಂಬುದು ರಾಹುಲ್ ಗಾಂಧಿ ಅವರ ಹೇಳಿಕೆಯಿಂದ ಸ್ಪಷ್ಟವಾಗುತ್ತಿದೆ.

2023ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರ ಹಿಡಿದಿದೆ. ಕೇಂದ್ರ ಚುನಾವಣಾ ಆಯೋಗದ ಮಾರ್ಗ ದರ್ಶನದಲ್ಲಿ ಮತದಾರರರ ಪಟ್ಟಿ ಪರಿಷ್ಕರಣೆಯಾಗಿದ್ದರೂ ರಾಜ್ಯ ಸರ್ಕಾರದ ಅಧೀನದಲ್ಲಿರುವ ಬಿಬಿಎಂಪಿ ಅಧಿಕಾರಿಗಳು ಪರಿಷ್ಕರಣೆ ಮಾಡಿದ್ದಾರೆ. ರಾಜ್ಯ ಕಂದಾಯ ಇಲಾಖೆ ಅಧಿಕಾರಿಗಳು ಸಹಕಾರ ನೀಡಿದ್ದಾರೆ.

ರಾಹುಲ್‍ಗಾಂಧಿ ಅವರ ಹೇಳಿಕೆ ಪ್ರಕಾರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಾಗಿರುವ ಲೋಪಗಳಿಗೆ ರಾಜ್ಯ ಸರ್ಕಾರವೂ ಹೊಣೆಯಾಗಬೇಕಿದೆ. ಕೇಂದ್ರ ಚುನಾವಣಾ ಆಯೋಗದ ನಿರ್ದೇನದ ಮೇರೆಗೆ ಪಟ್ಟಿ ಪರಿಷ್ಕರಣೆಯಾದರೂ ಆ ಜವಾಬ್ದಾರಿಯನ್ನು ನಿಭಾಯಿಸುವವರು ಮಾತ್ರ ರಾಜ್ಯಸರ್ಕಾರದ ಅಧಿಕಾರಿಗಳೇ ಆಗಿರುತ್ತಾರೆ. ರಾಹುಲ್‍ಗಾಂಧಿ ಹುಮ್ಮಸ್ಸಿನಲ್ಲಿ ತನಿಖೆ ನಡೆಸುವಂತೆ ಫಾರ್ಮಾನು ಹೊರಡಿಸಿದ್ದಾರೆ. ತನಿಖೆ ನಡೆಸಿದ್ದೇ ಆದರೆ ಅದರ ಮೂಲ ತಲುಪುವುದು ರಾಜ್ಯ ಸರ್ಕಾರದ ಬುಡಕ್ಕೆ ಅಗಿದೆ. ಮೇಲಾಗಿ ಕೇಂದ್ರ ಚುನಾವಣಾ ಆಯೋಗದ ವ್ಯಾಪ್ತಿಯನ್ನು ಮೀರಿ ರಾಜ್ಯ ಸರ್ಕಾರ ತನಿಖೆ ನಡೆಸಲು ಸಾಧ್ಯವೇ ಎಂಬ ಪ್ರಶ್ನೆಗಳು ಉದ್ಭವಿಸಿವೆ.

ರಾಹುಲ್ ಗಾಂಧಿ ಸೂಚನೆ ನೀಡಿರುವುದರಿಂದ ತನಿಖೆ ನಡೆಸಲೇ ಬೇಕಾದ ಇಕ್ಕಟ್ಟಿನ ಪರಿಸ್ಥಿತಿ ರಾಜ್ಯ ಸರ್ಕಾರಕ್ಕೆ ಎದುರಾಗಿದೆ. ಹೀಗಾಗಿ ಯಾವುದಾದರೂ ಒಂದು ಸ್ವರೂಪದ ತನಿಖೆಯಾಗಬೇಕು. ಇಲ್ಲವಾದರೆ ಕಾಂಗ್ರೆಸ್ ಸರ್ಕಾರವೇ ರಾಹುಲ್ ಗಾಂಧಿ ಅವರ ಮಾತಿಗೆ ಮಾನ್ಯತೆ ನೀಡಲ್ಲ. ಆರೋಪದಲ್ಲಿ ಹುರುಳಿಲ್ಲ ಎಂಬ ಅಪಹಾಸ್ಯಗಳು ಕೇಳಿಬರುತ್ತವೆ.

ರಾಹುಲ್‍ಗಾಂಧಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿ, ಟೀಕೆ ಮಾಡಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಆದರೆ ಆ ದೂರು ನಿಗದಿತ ಪ್ರಮಾಣ ಪತ್ರದ ಮಾದರಿಯಲಿಲ್ಲ ಎಂದು ಚುನಾವಣಾ ಆಯೋಗ ಹೇಳಿಕೆ ನೀಡಿದೆ. ಆಯೋಗದ ಧೋರಣೆಯನ್ನು ಗಮನಿಸಿದರೆ, ರಾಹುಲ್‍ಗಾಂಧಿ ಅವರ ಆರೋಪಗಳು ತನಿಖೆಯಾಗುವ ಸಾಧ್ಯತೆ ಕಡಿಮೆ ಇದೆ. ರಾಹುಲ್ ಗಾಂಧಿ ಟೀಕೆ ಮಾಡುವುದಕ್ಕಷ್ಟೇ ನಿಲ್ಲದೇ, ರಾಜ್ಯ ಸರ್ಕಾರದಿಂದ ತನಿಖೆಯಾಗಬೇಕೆಂಬ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಚುನಾವಣಾ ಆಯೋಗ ಸಾಂವಿಧಾನಿಕ ಸ್ಥಾನಮಾನ ಹೊಂದಿರುವುದರಿಂದ ರಾಜ್ಯ ಸರ್ಕಾರದ ಅಧಿಕಾರಿಗಳು ತನಿಖೆ ನಡೆಸಲು ಕಷ್ಟ ಸಾಧ್ಯವಾಗಲಿದೆ. ಹೀಗಾಗಿ ನ್ಯಾಯಾಂಗ ತನಿಖೆ ಸೂಕ್ತ ಎಂಬ ಚರ್ಚೆಗಳು ನಡೆಯುತ್ತಿವೆ. ಹೈಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ಆಯೋಗ ರಚನೆ ಮಾಡಿ ಅದಕ್ಕೆ ಎಸ್‍ಐಟಿ ಮಾದರಿಯಲ್ಲಿ ಹಿರಿಯ ಅಧಿಕಾರಿಗಳನ್ನು ನಿಯೋಜಿಸುವ ಮೂಲಕ ತನಿಖೆ ನಡೆಸಬಹುದು ಎಂಬ ಸಲಹೆಗಳಿವೆ.

ಈ ನಿಟ್ಟಿನಲ್ಲಿ ಸಾಧಕ-ಭಾದಕಗಳ ಬಗ್ಗೆ ವರದಿ ನೀಡುವಂತೆ ಹಿರಿಯ ಅಧಿಕಾರಿಗಳು ಕಾನೂನು ತಜ್ಞರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಆಂದೋಲನ ಡೆಸ್ಕ್

Recent Posts

ಬಾಪೂ ಆದರ್ಶ ಮಡದಿ ಕಸ್ತೂರ ಬಾ ಗಾಂಧಿ

ಡಾ.ಎಂ.ಡಿ.ಉಮೇಶ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪತ್ನಿ ಕಸ್ತೂರ ಬಾ ಅವರು ಏ. ೧೧, ೧೮೬೯ರಂದು ಗುಜರಾತ್‌ನ ಪೋರಬಂದರ್‌ನಲ್ಲಿ ಗೋಕುಲ್‌ದಾಸ್ ಕಪಾಡಿಯಾ…

13 mins ago

ದಳಪತಿ ವಿಜಯ್‌ಗೆ ಮತ್ತೆ ಸಂಕಷ್ಟ : ಬಿಡುಗಡೆಗೂ ಮೊದಲೆ ʻಜನ ನಾಯಗನ್‌ʼ ಸೋರಿಕೆ.

ಚೆನ್ನೈ : ನಟ ಹಾಗೂ ರಾಜಕಾರಣಿ ದಳಪತಿ ವಿಜಯ್‌ ಅವರ ವೃತ್ತಿ ಜೀವನದ ಕೊನೆಯ ಹಾಗೂ ಬಹುನಿರೀಕ್ಷಿತ ʻಜನ ನಾಯಗನ್‌ʻ…

2 hours ago

ಆಂದೋಲನ ವರದಿ ಫಲಶ್ರುತಿ ; ಫುಟ್‌ಪಾತ್‌ನಲ್ಲಿದ್ದ ದ್ವಿಚಕ್ರ ವಾಹನಗಳ ತೆರವು

ಮೈಸೂರು : ಕುವೆಂಪುನಗರದ ನ್ಯೂ ಕಾಂತರಾಜ ಅರಸು ರಸ್ತೆಯಲ್ಲಿರುವ ಜನನಿಬಿಡ ಪ್ರದೇಶಗಳಾದ ಬಂದಂತಮ್ಮ ಕಾಳಮ್ಮ ದೇವಸ್ಥಾನ, ಐಗಿರಿ ಕೆಫೆ, ಸುಜ್ಹುಕಿ…

2 hours ago

ಗಾರೆ ಕೆಲಸ ಮಾಡುವವರ ಪುತ್ರಿಗೆ ಸಾಧಿಸುವ ಛಲ

ಮೈಸೂರು : ಎಲ್ಲ ಅನುಕೂಲತೆಗಳಿದ್ದರೂ ವಿದ್ಯೆ ತಲೆಗೆ ಹತ್ತುತ್ತಿಲ್ಲ ಎನ್ನುವ ವಿದ್ಯಾರ್ಥಿಗಳ ನಡುವೆ, ಗಾರೆ ಕೆಲಸ ಮಾಡುವವರ ಪುತ್ರಿಯೊಬ್ಬರು ದ್ವಿತೀಯ…

3 hours ago

ಪಿಯುಸಿ : ಕೋಟೆ ಟಾಪರ್‌ಗಳೆಲ್ಲರೂ ವಿದ್ಯಾರ್ಥಿನಿಯರೇ

ಮಂಜು ಕೋಟೆ ಎಚ್. ಡಿ. ಕೋಟೆ : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ತಾಲ್ಲೂಕಿನ ತುಂಬಸೋಗೆಯ ಎಂಎಂಕೆ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏ.11 ಶನಿವಾರ

4 hours ago