ರಾಜ್ಯ

ಬಿಹಾರ ಚುನಾವಣೆ ಫಲಿತಾಂಶ ಬಂದ ಬಳಿಕ ಮತಗಳ್ಳತನದ ಆರೋಪ ಮಾಡ್ತಾರೆ: ಆರ್‌.ಅಶೋಕ

ಬೆಂಗಳೂರು: ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಗೆಲ್ಲಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಆದ್ದರಿಂದ ಫಲಿತಾಂಶ ಬಂದ ಬಳಿಕ ರಾಹುಲ್‌ ಗಾಂಧಿ ಮತಗಳ್ಳತನ ಆರೋಪ ಮಾಡುವುದು ಖಂಡಿತ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಹೇಳಿದರು.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರದ ಚುನಾವಣೆ ಪ್ರತಿಷ್ಠಿತ ಚುನಾವಣೆಯಾಗಿದೆ. ಬಿಹಾರದಲ್ಲಿ ನಕ್ಸಲ್‌ ಚಟುವಟಿಕೆ ಹೆಚ್ಚಿದ್ದರೂ ಈ ಬಾರಿ ಉತ್ತಮವಾಗಿ ಮತದಾನ ನಡೆದಿದೆ. ಅಮಿತ್‌ ಶಾ ಗೃಹ ಸಚಿವರಾದ ಬಳಿಕ ನಕ್ಸಲ್‌ ಚಟುವಟಿಕೆಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. 12ಕ್ಕೂ ಹೆಚ್ಚು ಸಂಸ್ಥೆಗಳು ಸಮೀಕ್ಷೆ ಮಾಡಿದ್ದು, ಎನ್‌ಡಿಎ ಅಧಿಕಾರಕ್ಕೆ ಬರಲಿದೆ ಎಂದು ಅಂದಾಜಿಸಲಾಗಿದೆ. ಕಾಂಗ್ರೆಸ್‌ನ ಮಹಾಘಟಬಂಧನಕ್ಕೆ ಬೆಂಬಲ ಇಲ್ಲ ಎಂದು ಹೇಳಲಾಗಿದೆ ಎಂದರು.

ಇದನ್ನು ಓದಿ: ನಿನ್ನೆ ನಡೆದ ಬಿಹಾರ ಚುನಾವಣೆಯಲ್ಲೂ ಮತಗಳ್ಳತನ ; ಚುನಾವಣಾ ಆಯೋಗವೇ ಪ್ರಜಾಪ್ರಭುತ್ವದ ಕಗ್ಗೊಲೆ : ರಾಗಾ

ಬಿಹಾರ ಚುನಾವಣೆಯ ಫಲಿತಾಂಶ ಬಂದ ಬಳಿಕ ರಾಹುಲ್‌ ಗಾಂಧಿ ಮತಗಳ್ಳತನದ ಆರೋಪ ಮಾಡುತ್ತಾರೆ. ರಾಹುಲ್‌ ಗಾಂಧಿ ನಾಯಕತ್ವದಲ್ಲಿ ಕಾಂಗ್ರೆಸ್‌ ಸರಣಿಯಾಗಿ ಸೋಲುತ್ತಿದೆ. ಲೋಕಸಭೆ, ವಿಧಾನಸಭಾ ಚುನಾವಣೆಗಳಲ್ಲಿ ರಾಹುಲ್‌ ಗಾಂಧಿ ಐರನ್‌ ಲೆಗ್‌ ಎಂದು ಪ್ರಸಿದ್ಧಿ ಪಡೆದಿದ್ದಾರೆ. ಬಿಹಾರ ಚುನಾವಣೆಯ ಫಲಿತಾಂಶ ಬಂದ ನಂತರ ಅವರು ವಿದೇಶ ಪ್ರವಾಸಕ್ಕೆ ತೆರಳುತ್ತಾರೆ. ಒಂದು ಕಡೆ ಲೋಕಸಭೆಯಲ್ಲೂ ಅವರು ಕೆಲಸ ಮಾಡುತ್ತಿಲ್ಲ, ಮತ್ತೊಂದು ಕಡೆ ಪಕ್ಷಕ್ಕಾಗಿಯೂ ಕೆಲಸ ಮಾಡುತ್ತಿಲ್ಲ ಎಂದರು.

ದೆಹಲಿಯಲ್ಲಾದ ಬಾಂಬ್‌ ಸ್ಪೋಟಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಪರಪ್ಪನ ಅಗ್ರಹಾರದಲ್ಲಿ ಉಗ್ರರಿಗೆ ಮೊಬೈಲ್‌ ಕೊಟ್ಟಿದ್ದು ಯಾರು ಎಂದು ತನಿಖೆ ಮಾಡಬೇಕಿದೆ ಅಥವಾ ಮೊಬೈಲ್‌ ಬಳಸಿ ಏನು ಮಾಡಿದ್ದಾರೆ ಎಂದು ತನಿಖೆ ಮಾಡಬೇಕಿತ್ತು. ಆದರೆ ಈ ವೀಡಿಯೋ ಹೊರಗೆ ಬಂದಿದ್ದು ಹೇಗೆ ಎಂದು ತನಿಖೆ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರದಂತೆಯೇ ರಾಜ್ಯ ಸರ್ಕಾರ ಕೂಡ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮುಸ್ಲಿಮರ ಪರವಾದ ಮೃದುವಾದ ಧೋರಣೆ ಒಳ್ಳೆಯದಲ್ಲ ಎಂದರು.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

1 hour ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

3 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

4 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

6 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

12 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

18 hours ago