ರಾಜ್ಯ

ಬಿಹಾರ ಚುನಾವಣೆ ಫಲಿತಾಂಶ ಬಂದ ಬಳಿಕ ಮತಗಳ್ಳತನದ ಆರೋಪ ಮಾಡ್ತಾರೆ: ಆರ್‌.ಅಶೋಕ

ಬೆಂಗಳೂರು: ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಗೆಲ್ಲಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಆದ್ದರಿಂದ ಫಲಿತಾಂಶ ಬಂದ ಬಳಿಕ ರಾಹುಲ್‌ ಗಾಂಧಿ ಮತಗಳ್ಳತನ ಆರೋಪ ಮಾಡುವುದು ಖಂಡಿತ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಹೇಳಿದರು.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರದ ಚುನಾವಣೆ ಪ್ರತಿಷ್ಠಿತ ಚುನಾವಣೆಯಾಗಿದೆ. ಬಿಹಾರದಲ್ಲಿ ನಕ್ಸಲ್‌ ಚಟುವಟಿಕೆ ಹೆಚ್ಚಿದ್ದರೂ ಈ ಬಾರಿ ಉತ್ತಮವಾಗಿ ಮತದಾನ ನಡೆದಿದೆ. ಅಮಿತ್‌ ಶಾ ಗೃಹ ಸಚಿವರಾದ ಬಳಿಕ ನಕ್ಸಲ್‌ ಚಟುವಟಿಕೆಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. 12ಕ್ಕೂ ಹೆಚ್ಚು ಸಂಸ್ಥೆಗಳು ಸಮೀಕ್ಷೆ ಮಾಡಿದ್ದು, ಎನ್‌ಡಿಎ ಅಧಿಕಾರಕ್ಕೆ ಬರಲಿದೆ ಎಂದು ಅಂದಾಜಿಸಲಾಗಿದೆ. ಕಾಂಗ್ರೆಸ್‌ನ ಮಹಾಘಟಬಂಧನಕ್ಕೆ ಬೆಂಬಲ ಇಲ್ಲ ಎಂದು ಹೇಳಲಾಗಿದೆ ಎಂದರು.

ಇದನ್ನು ಓದಿ: ನಿನ್ನೆ ನಡೆದ ಬಿಹಾರ ಚುನಾವಣೆಯಲ್ಲೂ ಮತಗಳ್ಳತನ ; ಚುನಾವಣಾ ಆಯೋಗವೇ ಪ್ರಜಾಪ್ರಭುತ್ವದ ಕಗ್ಗೊಲೆ : ರಾಗಾ

ಬಿಹಾರ ಚುನಾವಣೆಯ ಫಲಿತಾಂಶ ಬಂದ ಬಳಿಕ ರಾಹುಲ್‌ ಗಾಂಧಿ ಮತಗಳ್ಳತನದ ಆರೋಪ ಮಾಡುತ್ತಾರೆ. ರಾಹುಲ್‌ ಗಾಂಧಿ ನಾಯಕತ್ವದಲ್ಲಿ ಕಾಂಗ್ರೆಸ್‌ ಸರಣಿಯಾಗಿ ಸೋಲುತ್ತಿದೆ. ಲೋಕಸಭೆ, ವಿಧಾನಸಭಾ ಚುನಾವಣೆಗಳಲ್ಲಿ ರಾಹುಲ್‌ ಗಾಂಧಿ ಐರನ್‌ ಲೆಗ್‌ ಎಂದು ಪ್ರಸಿದ್ಧಿ ಪಡೆದಿದ್ದಾರೆ. ಬಿಹಾರ ಚುನಾವಣೆಯ ಫಲಿತಾಂಶ ಬಂದ ನಂತರ ಅವರು ವಿದೇಶ ಪ್ರವಾಸಕ್ಕೆ ತೆರಳುತ್ತಾರೆ. ಒಂದು ಕಡೆ ಲೋಕಸಭೆಯಲ್ಲೂ ಅವರು ಕೆಲಸ ಮಾಡುತ್ತಿಲ್ಲ, ಮತ್ತೊಂದು ಕಡೆ ಪಕ್ಷಕ್ಕಾಗಿಯೂ ಕೆಲಸ ಮಾಡುತ್ತಿಲ್ಲ ಎಂದರು.

ದೆಹಲಿಯಲ್ಲಾದ ಬಾಂಬ್‌ ಸ್ಪೋಟಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಪರಪ್ಪನ ಅಗ್ರಹಾರದಲ್ಲಿ ಉಗ್ರರಿಗೆ ಮೊಬೈಲ್‌ ಕೊಟ್ಟಿದ್ದು ಯಾರು ಎಂದು ತನಿಖೆ ಮಾಡಬೇಕಿದೆ ಅಥವಾ ಮೊಬೈಲ್‌ ಬಳಸಿ ಏನು ಮಾಡಿದ್ದಾರೆ ಎಂದು ತನಿಖೆ ಮಾಡಬೇಕಿತ್ತು. ಆದರೆ ಈ ವೀಡಿಯೋ ಹೊರಗೆ ಬಂದಿದ್ದು ಹೇಗೆ ಎಂದು ತನಿಖೆ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರದಂತೆಯೇ ರಾಜ್ಯ ಸರ್ಕಾರ ಕೂಡ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮುಸ್ಲಿಮರ ಪರವಾದ ಮೃದುವಾದ ಧೋರಣೆ ಒಳ್ಳೆಯದಲ್ಲ ಎಂದರು.

ಆಂದೋಲನ ಡೆಸ್ಕ್

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

15 mins ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

40 mins ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

51 mins ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

2 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

5 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

6 hours ago