ರಾಜ್ಯ

ಜನವರಿ ಅಂತ್ಯದೊಳಗೆ ಮೈತ್ರಿ ಸೀಟು ಹಂಚಿಕೆ ಫೈನಲ್‌ : ಹೆಚ್‌ಡಿಕೆ

ನವದೆಹಲಿ : ಜನವರಿ ಅಂತ್ಯದೊಳಗೆ ಲೋಕಸಭಾ ಚುನಾವಣೆಗೆ ಜೆಡಿಎಸ್-ಬಿಜೆಪಿ ನಡುವೆ ಸೀಟು ಹಂಚಿಕೆ ಫೈನಲ್ ಆಗಲಿದೆ. ಆ ಬಗ್ಗೆ ಮಾತುಕತೆ ನಡೆಯಲಿದೆ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಗುರುವಾರದಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಭೇಟಿ ಸಂಸತ್‌ ಭವನದ ಪ್ರಧಾನಿಗಳ ಕಾರ್ಯಾಲಯದಲ್ಲಿ ನಡೆಯಿತು.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಿಳಿಸಿರುವಂತೆ; ರಾಜ್ಯ ರಾಜಕೀಯ ಪರಿಸ್ಥಿತಿಯ ಜತೆಗೆ ಕೊಬರಿ ಖರೀದಿ, ಕಾಡುಗೊಲ್ಲ ಜಾತಿಗೆ ಮೀಸಲಾತಿ ಸೌಲಭ್ಯ‌ ಹಾಗೂ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಮಾಜಿ ಪ್ರಧಾನಿಗಳು ಮೋದಿ ಅವರ ಜತೆ ಚರ್ಚೆ ನಡೆಸಿದರು.

ಈ ವೇಳೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದಂತ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಜೆಡಿಎಸ್‌ ಮತ್ತು ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ವಿಚಾರದಲ್ಲಿ ಯಾವುದೇ ಸಮಸ್ಯೆ, ಗೊಂದಲ ಇಲ್ಲ.

ಯಾವ ಯಾವ ಕ್ಷೇತ್ರದಲ್ಲಿ ಯಾರು ಯಾರು ಸ್ಪರ್ಧೆ ಮಾಡುತ್ತಾರೆ ಎನ್ನುವುದನ್ನು ನಾವೇ ಪರಸ್ಪರ ಕೂತು ಅಂತಿಮಗೊಳಿಸುತ್ತೇವೆ. ಆ ಬಗ್ಗೆ ಯಾವುದೇ ಸಮಸ್ಯೆ ಇಲ್ಲ.

ಒಂದು ಕ್ಷೇತ್ರ ಹೆಚ್ಚೂ ಕಡಿಮೆ ಆಗಬಹುದು ಅಷ್ಟೇ. ಅದರಲ್ಲಿ ಯಾವುದೇ ಸಮಸ್ಯೆ ಆಗುವುದಿಲ್ಲ. ಮುಖ್ಯವಾಗಿ ಪರಸ್ಪರ ವಿಶ್ವಾಸ ಬೇಕು ಅಷ್ಟೇ, ಅದನ್ನು ನಾವು ಉಳಿಸಿಕೊಳ್ಳಬೇಕು. ಅದಕ್ಕೆ ಏನೆಲ್ಲಾ ಮಾಡಬೇಕೋ ಅದನ್ನು ಮಾಡುತ್ತೇನೆ. ಜನವರಿ ಅಂತ್ಯದ ಒಳಗೆ ನಾವು ಎಲ್ಲಾ ನಿರ್ಧಾರ ಮಾಡುತ್ತೇವೆ ಎಂದರು.

ನೀವು ಎಷ್ಟು ಕ್ಷೇತ್ರ ಕೇಳುತ್ತಿದ್ದೀರಿ? ಎನ್ನುವ ಪ್ರಶ್ನೆಗೂ ಉತ್ತರ ಕೊಟ್ಟ ಕುಮಾರಸ್ವಾಮಿ ಅವರು; ನಾವು ಎಷ್ಟು ಗೆಲ್ಲುತ್ತೇವೆ ಎನ್ನುವ ಕಡೆಯಷ್ಟೇ ನಾವು ಕೇಳುತ್ತೇವೆ. ನಾವು ಎಲ್ಲೆಲ್ಲಿ ಗೆಲ್ಲುತ್ತೇವೆ ಅಂತ ನಮ್ಮ ಬಳಿ ರಿಪೋರ್ಟ್ ಇದೆ. ಆ ರಿಪೋರ್ಟ್ ಪ್ರಕಾರ ನಾವು ಕೆಲಸ ಮಾಡುತ್ತೇವೆ.

ಇಲ್ಲಿ ಸೀಟ್ ಹಂಚಿಕೆ ಒಂದೇ ಪ್ರಮುಖ ಅಲ್ಲಾ. ನಾವು ಪರಸ್ಪರ ವಿಶ್ವಾಸ, ನಂಬಿಕೆಯಿಂದ ಕೆಲಸ ಮಾಡುತ್ತೇವೆ. ಮೂರನೇ ಅವಧಿಗೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಲು ನಾವೆಲ್ಲಾ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದರು.

 

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

6 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

6 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

6 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

6 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

7 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

7 hours ago