ರಾಜ್ಯ

ಕ್ರೀಡಾಪಟುಗಳಿಗೆ ಅಗತ್ಯ ಸವಲತ್ತು-ನೆರವು ನೀಡಲು ಸದಾ ಸಿದ್ದ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು:ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ ಸವಲತ್ತು-ನೆರವು ನೀಡಲು ಸದಾ ಸಿದ್ದ. ರಾಜ್ಯ ಬಜೆಟ್ ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ನಿರಂತರ ಅನುದಾನ ನೀಡಿದೆ. ರಾಜ್ಯದಿಂದ ಯಾರಾದರೂ ಒಲಂಪಿಕ್ಸ್ ನಲ್ಲಿ ದೇಶಕ್ಕೆ ಒಂದು ಚಿನ್ನ ತನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಕರ್ನಾಟಕ ಒಲಂಪಿಕ್ ಸಂಸ್ಥೆ ಯವನಿಕಾದಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, ಕ್ರೀಡಾಪಟುಗಳಿಗೆ ಪ್ರಶಸ್ತಿಗಳನ್ನು ವಿತರಿಸಿ ಅವರು ಮಾತನಾಡಿದರು.

ಚಿನ್ನದ ಪದಕ ಪಡೆದವರಿಗೆ 6 ಕೋಟಿ ಹಣ ಮೀಸಲಿಟ್ಟಿದ್ದೀವಿ. ಬೆಳ್ಳಿ ಪದಕ ಪಡೆದವರಿಗೆ 4 ಕೋಟಿ ಹಣ ಇಟ್ಟಿದ್ದೇವೆ. ಆದರೆ ಯಾರೂ ಪದಕ ತರ್ತಾನೇ ಇಲ್ಲ. ದೇಶಕ್ಕೆ ಯಾರಾದರೂ ಚಿನ್ನ ತನ್ನಿ ಎಂದು ಕರೆ ನೀಡಿದರು.

ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಬೇಕು ಎನ್ನುವ ಪ್ರೋತ್ಸಾಹದಾಯಕ ಉದ್ದೇಶದಿಂದ ಕರ್ನಾಟಕ ಒಲಂಪಿಕ್ ಸಂಸ್ಥೆ 22 ವರ್ಷಗಳಿಂದ ಈ ಪ್ರಶಸ್ತಿಗಳನ್ನು ನೀಡುತ್ತಿದೆ.

ಗೋವಿಂದರಾಜು ಅವರು ಒಲಂಪಿಕ್ ಸಂಸ್ಥೆ ಅಧ್ಯಕ್ಷರಾಗಿ ಕ್ರೀಡಾ ಕ್ಷೇತ್ರದ ಬೆಳವಣಿಗೆಗೆ ನಿರಂತರ ಶ್ರಮಿಸುತ್ತಿದ್ದಾರೆ. ನಾನು ಬಜೆಟ್ ರೂಪಿಸುವಾಗ ಚರ್ಚೆಯಲ್ಲಿ ಕುಳಿತು ಕ್ರೀಡಾಕ್ಷೇತ್ರಕ್ಕೆ ಅಗತ್ಯವಾದ ಎಲ್ಲವನ್ನೂ ಸೇರಿಸುತ್ತಾರೆ. ನಾನು ಕ್ರೀಡಾಪಟು ಅಲ್ಲದಿದ್ದರೂ ಕ್ರೀಡಾಪ್ರೇಮಿ. ನಾನು ಶಾಲಾ, ಕಾಲೇಜಿನಲ್ಲಿ ಎಲ್ಲಾ ಕ್ರೀಡೆಗಳಲ್ಲೂ ಭಾಗವಹಿಸುತ್ತಿದ್ದೆ. ಒಂದೂ ಪ್ರಶಸ್ತಿ ಬರಲಿಲ್ಲ. ಆದರೆ ಶಾಸಕರ ಕ್ರೀಡಾಕೂಟದಲ್ಲಿ ಸಿಕ್ಕಾಪಟ್ಟೆ ಪ್ರಶಸ್ತಿ ಬಂತು ಎಂದು ಸ್ಮರಿಸಿದರು.

ಕ್ರೀಡೆಯಲ್ಲಿ ಸಣ್ಣ ಪುಟ್ಟ ದೇಶಗಳೆಲ್ಲಾ ಬಹಳ‌ ಮುಂದಿವೆ. ಆದರೆ, ಭಾರತದಂತಹ ದೊಡ್ಡ ದೇಶಕ್ಕೆ ಒಲಂಪಿಕ್ ನಲ್ಲಿ ಒಂದೂ ಚಿನ್ನ ಬರಲಿಲ್ಲ ಎನ್ನುವುದು ಬೇಸರದ ಸಂಗತಿ ಎಂದರು.

ಹೀಗಾಗಿ ನಾನು ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ ಇರುವ ಎಲ್ಲಾ ಅನುಕೂಲ ಕಲ್ಪಿಸಿಕೊಡಲು ನಾನು ಸಿದ್ಧ. ರಾಜ್ಯದ ಪಟುಗಳು ದೇಶಕ್ಕೆ ಒಲಂಪಿಕ್ಸ್ ನಲ್ಲಿ ಚಿನ್ನ ತರಲಿ ಎಂದು ಆಶಿಸಿದರು.

ಗೃಹ ಸಚಿವ ಜಿ.ಪರಮೇಶ್ವರ್, ಕರ್ನಾಟಕ ಒಲಂಪಿಕ್ ಸಂಸ್ಥೆಯ ಅಧ್ಯಕ್ಷರೂ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಸೇರಿ‌ ಇಲಾಖೆಯ ಅಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.

 

25% ಹಾಜರಾತಿ-10 ಗ್ರೇಸ್ ಮಾರ್ಕ್ ಬಗ್ಗೆ ಪರಿಶೀಲನೆ: ಸಿಎಂ ಭರವಸೆ

ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಒಲಂಪಿಕ್ ಸಂಸ್ಥೆ ಅಧ್ಯಕ್ಷರಾದ ಗೋವಿಂದರಾಜು ಅವರು ಶಾಲಾ ಮಕ್ಕಳು ಕ್ರೀಡೆಯಲ್ಲಿ ಹೆಚ್ಚೆಚ್ಚು ಪರಿಣಾಮಕಾರಿಯಾಗಿ ತೊಡಗಿಸಿಕೊಳ್ಳಲು ಅನುಕೂಲವಾಗುವಂತೆ ಕ್ರೀಡಾ ಮಕ್ಕಳಿಗೆ ಶೇ25 ರಷ್ಡು ಹಾಜರಾತಿ ಮತ್ತು 10 ಗ್ರೇಸ್ ಮಾರ್ಕ್ ನೀಡುವಂತೆ ನಿಯಮ ರೂಪಿಸಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ಈ ಬಗ್ಗೆ ಪ್ರಸ್ತಾಪಿಸಿದ ಸಿಎಂ, ಈ ಬೇಡಿಕೆಗಳು ನ್ಯಾಯೋಚಿತವಾಗಿವೆ. ಈ ಬಗ್ಗೆ ಗಂಭೀರವಾಗಿ ಪರಿಶೀಲನೆ ನಡೆಸಲಾಗುವುದು ಎಂದು ಭರವಸೆ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

6 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

10 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

10 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

10 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

10 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

10 hours ago