ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಎನ್ನಲಾದ ಅಶ್ಲೀಲ ವಿಡೀಯೋ ಕುರಿತು ಪೆನ್ಡ್ರೈವ್ ಹಂಚಿಕೆ ಹಿಂದೆ ಮಹಾನಾಯಕನ ಕೈವಾಡವಿದೆ ಎಂದು ಆರೋಪಿಸಿರುವ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಡಿಸಿಎಂ ಡಿ.ಕೆ ಶಿವಕುಮಾರ್, ನಾನು ಅಂತಾ ಚೀಪ್ ಕೆಲಸಕ್ಕೆ ಇಳಿಯಲ್ಲ. ನಾನೇನು ನನ್ನ ಬಳಿ ಪೆನ್ಡ್ರೈವ್ ಇದೆ ಎಂದು ಹೆದರಿಸಿದ್ದನಾ, ಇಂತಹ ಕೆಲಸ ನಮಗೆ ಅನವಶ್ಯಕ. ಚುನಾವಣೆಯನ್ನು ಎದುರಿಸುತ್ತೇವೆ, ನೇರವಾಗಿ ಅಸಂಬ್ಲಿಯಲ್ಲಿ ಚರ್ಚೆ ಮಾಡುತ್ತೇನೆ. ಇವರ ಚಟಕ್ಕೆ ವಿಡಿಯೋ ಮಾಡಿಕೊಳ್ಳುತ್ತಾರೆ. ಇಂಥವರನ್ನು ಭಗವಂತನೂ ಕ್ಷಮಿಸಲ್ಲ ಎಂದು ವಾಗ್ದಾಳಿ ನಡೆಸಿದರು.
ಇಂದಿನಿಂದಲ್ಲ, ಬಹಳ ವರ್ಷಗಳಿಂದಲೂ ಎಚ್.ಡಿ ಕುಮಾರಸ್ವಾಮಿ ಮತ್ತು ಕುಟುಂಬದವರಿಗೆ ನನ್ನನ್ನು ನೆನಪಿಸಿಕೊಂಡಿಲ್ಲ ಅಂದ್ರೆ ನಿದ್ದೆ ಬರಲ್ಲ. ಪ್ರಜ್ವಲ್ ಪ್ರಕರಣದಲ್ಲಿ ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ. ಪೆನ್ ಡ್ರೈವ್ ಪ್ರಕರಣವನ್ನು ಎಸ್ಐಟಿ ತನಿಖೆ ನಡೆಸುತ್ತಿದೆ. ಕಾನೂನು ಪ್ರಕಾರ ಎಲ್ಲವೂ ನಡೆಯಲಿದೆ ಎಂದರು.
ಪ್ರಜ್ವಲ್ ವಿದೇಶಕ್ಕೆ ಹೋಗುವಾಗ ಜೊತೆ ಇದ್ದವರು ಯಾರು? ಯಾರು ಯಾರಿಗೆ ಕರೆ ಮಾಡಿದ್ರು ಕೇಳಿ ಅವರಿಗೆ ಎಂದು ಎಚ್.ಡಿ ಕುಮಾರಸ್ವಾಮಿಗೆ, ಡಿಸಿಎಂ ಟಾಂಗ್ ಕೊಟ್ಟರು.
ಇದು ಕಳೆದ ಒಂದು ವರ್ಷದಿಂದೀಚಿನ ಬೆಳವಣಿಗೆ. ಬೇರೆ ರಾಜ್ಯಗಳಲ್ಲಿ ಇದು ನಡೆದಿತ್ತೋ ಏನೋ ಮಾಹಿತಿ ಇಲ್ಲ. ಆದರೆ ಕೇರಳದಲ್ಲಿ ಈ…
ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು…
ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…
ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…
ಬೀಗ ಹಾಕಿದ್ದ ಮನೆಗಳೇ ಕಳ್ಳರ ಟಾರ್ಗೆಟ್, ಲಾಕರ್ಗಳನ್ನು ಒಡೆದು ನಗ,ನಾಣ್ಯ ದೋಚಿದ ದುಷ್ಕರ್ಮಿಗಳು ಮೇಲುಕೋಟೆ: ಇಲ್ಲಿನ ಒಕ್ಕಲಿಗರ ಬೀದಿಯ ಸುತ್ತಮುತ್ತಲ…
ದಾ. ರಾ. ಮಹೇಶ್ ವೀರನಹೊಸಹಳ್ಳಿ: ಮೂರು ದಿನಗಳಿಂದ ತೋಟಗಳಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡನ್ನು ಓಡಿಸಲು ಹೋದ ಜನರ ಗುಂಪನ್ನೇ ಆನೆಗಳು…