ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ ಗೌರವ ತಂದುಕೊಡಲು ಪ್ರಯತ್ನಿಸಿದ್ದರಲ್ಲದೇ, ದೇಶದಲ್ಲಿ ಸಮಾಜಿಕ ನ್ಯಾಯ ಸಿಗದವರ ಪರವಾಗಿ ಹೋರಾಟ ಮಾಡಿದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಸಂವಿಧಾನ ಶಿಲ್ಪಿ, ಭಾರತ ರತ್ನ, ಮಹಾ ಮಾನವತಾವಾದಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ 69ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್ ಜಾರಕಿಹೊಳಿ
ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶದ ಸಂವಿಧಾನ ಶಿಲ್ಪಿ. ಅವರು ದೇಶಕ್ಕೆ ಎಂಥ ಸಂವಿಧಾನದ ಅಗತ್ಯವಿದೆ ಎಂದು ಚಿಂತಿಸಿ, ಇತರೆ ದೇಶಗಳ ಸಂವಿಧಾನವನ್ನು ಅಭ್ಯಾಸ ಮಾಡಿ ದೇಶಕ್ಕೆ ಅಗತ್ಯವಿರುವ ಸಂವಿಧಾನವನ್ನು ಕೊಟ್ಟಿದ್ದಾರೆ. ನಮ್ಮ ಸಾಮಾಜಿಕ ವ್ಯವಸ್ಥೆಯ ಬದಲಾವಣೆಯಾಗಬೇಕು, ಎಲ್ಲರಿಗೂ ಸಮಾನ ಅವಕಾಶಗಳು ದೊರಕಬೇಕು ಹಾಗೂ ಸಾಮಾಜಿಕ ನ್ಯಾಯ ಸ್ಥಾಪನೆಯಾಗಬೇಕು ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ. ನಮ್ಮ ಸರ್ಕಾರ ಶಾಲಾ ಕಾಲೇಜು ಮಕ್ಕಳಿಗೆ ಇದರ ಅರಿವು ಮೂಡಿಸಲು ಸಂವಿಧಾನ ಪೀಠಿಕೆಯನ್ನು ಬೋಧಿಸಲಾಗುತ್ತಿದೆ. ಸಂವಿಧಾನ ಪ್ರತಿಯೊಬ್ಬರಿಗೂ ಹಕ್ಕು ಮತ್ತು ಬಾಧ್ಯತೆಗಳನ್ನು ನೀಡಿದೆ. ಸಂವಿಧಾನದ ಧ್ಯೇಯೋದ್ದೇಶಗಳು ಎಲ್ಲರಿಗೂ ಅರ್ಥವಾಗಬೇಕು ಎಂಬ ಕಾರಣದಿಂದ ಸರ್ಕಾರ ಇದನ್ನು ಜಾರಿ ಮಾಡಿದೆ ಎಂದರು.
ಪರಿನಿರ್ವಾಣ ದಿನದಂದು ನಾವು ಅಂಬೇಡ್ಕರ್ ಅವರನ್ನು ಸ್ಮರಿಸುವ ಕೆಲಸವನ್ನು ಮಾಡಿದ್ದೇವೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಅವರ ಕೊನೆಯ ದಿನಗಳಲ್ಲಿ ಬೌದ್ಧ ಧರ್ಮವನ್ನು ಸ್ವೀಕರಿಸಿದರು. ಹುಟ್ಟುವಾಗ ಹಿಂದೂವಾಗಿದ್ದೆ, ಸಾಯುವಾಗ ಹಿಂದೂವಾಗಿ ಸಾಯಲಾರೆ. ಹಿಂದೂ ಧರ್ಮದ ಸುಧಾರಣೆಗೆ ಪ್ರಯತ್ನಪಟ್ಟು, ಅದು ಸಾಧ್ಯವಾಗದ ಹಿನ್ನೆಲೆಯಲ್ಲಿ ಬೌದ್ಧ ಧರ್ಮ ಸ್ವೀಕರಿಸಿದ್ದೇನೆ ಎಂದು ಹೇಳಿದ್ದರು ಎಂದರು. ಹಿಂದೂ ಧರ್ಮದಲ್ಲಿರುವ ಸಾಮಾಜಿಕ ವ್ಯವಸ್ಥೆಗೆ ರೋಸಿಹೋಗಿ ಹೀಗೆ ಮಾಡಿದರು ಎಂದರು.
ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯವರು ಭಗವದ್ಗೀತೆಯನ್ನು ಪಠ್ಯಕ್ಕೆ ಸೇರಿಸಬೇಕೆಂದು ಕೇಂದ್ರ ಶಿಕ್ಷಣ ಸಚಿವರಿಗೆ ಪತ್ರ ಬರೆದಿರುವ ಬಗ್ಗೆ ಪತ್ರ ಬರೆದಿರುವ ಬಗ್ಗೆ ಮಾತನಾಡಿ ಕುಮಾರಸ್ವಾಮಿ ಅವರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ನಂತರ ಮನುವಾದಿಗಳಾಗಿದ್ದಾರೆ ಎಂದರು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…