ಮೈಸೂರು : ಕೇಂದ್ರ ಸಚಿವ ಅಮಿತ್ ಶಾ ಇಂದು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಸುತ್ತೂರು ಶ್ರೀಕ್ಷೇತ್ರದಲ್ಲಿ ನಡೆಯುತ್ತಿರುವ ಸುತ್ತೂರು ಜಾತ್ರೆಯಲ್ಲಿ ಭಾಗಿಯಗುವ ನಿಮಿತ್ತ ಮೈಸೂರಿಗೆ ಆಗಮಿಸಿದ್ದ ಅವರು, ಮುಂಜಾನೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಮೈಸೂರಿಗೆ ಹಿದಿರುಗುವ ವೇಳೆ ನಾಡ ದೇವತೆ ಚಾಮುಂಡೇಶ್ವರಿ ದೇವಾಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಈ ವೇಳೆ ಕೇಂದ್ರ ಸಚಿವ ಪ್ರಹಲ್ಲಾದ್ ಜೋಶಿ, ಸಂಸದ ಪ್ರತಾಪ್ ಸಿಂಹ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬಿಜೆಪಿ ಮೈಸೂರು ಜಿಲ್ಲಾಧ್ಯಕ್ಷ ನಾಗೇಂದ್ರ ಉಪಸ್ಥಿತರಿದ್ದರು.





