ಬೆಂಗಳೂರು: ಲೋಕಸಭೆ ಚುನಾವಣೆ ಗೆಲ್ಲಲು ರಣತಂತ್ರ ರೂಪಿಸಲು ರಾಜ್ಯ ರಾಜಾಧಾನಿಗೆ ಬಂದಿಳಿದಿರುವ ಕೇಂದ್ರ ಗೃಹಮಂತ್ರಿ ಅಮಿತ್ ಶಾ, ಇಂದು (ಏ.2) ಖಾಸಗಿ ಹೋಟೆಲ್ನಲ್ಲಿ ಬಿಜೆಪಿ-ಜೆಡಿಎಸ್ ನಾಯಕರ ಜತೆ ಸಭೆ ನಡೆಸಿದರು.
ರಾಜ್ಯ ಬಿಜೆಪಿ-ಜೆಡಿಎಸ್ ನಾಯಕರಿಗೆ ಅಮಿತ್ ಶಾ ಒಂದಷ್ಟು ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಬಂಡಾಯ ಇರುವ ಕ್ಷೇತ್ರ ನಾಯಕರ ಜೊತೆಗೆ ಸಭೆ ಮಾಡಿದ್ದು, ಎಲ್ಲರೂ ಒಟ್ಟಾಗಿ ಚುನಾವಣೆಯಲ್ಲಿ ಕೆಲಸ ಮಾಡಬೇಕೆಂದು ಬಂಡಾಯ ನಾಯಕರಿಗೆ ಖಡಕ್ ಸೂಚನೆ ನೀಡಿದ್ದಾರೆ.
ಅದರಲ್ಲೂ ಮುಖ್ಯವಾಗಿ ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ ಕ್ಷೇತ್ರಗಳಲ್ಲಿ ಇದ್ದ ಬಂಡಾಯವನ್ನು ಅಮಿತ್ ಶಾ ಶಮನಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೇ ಈ ನಾಲ್ಕು ಕ್ಷೇತ್ರಗಳಲ್ಲಿ 2 ಲಕ್ಷ ಮತಗಳ ಅಂತರದಲ್ಲಿ ಗೇಲ್ಲಬೇಕು ಎಂದು ನಾಯಕರುಗಳಿಗೆ ಅಮಿತ್ ಶಾ ಗೆಲುವಿನ ಗುರಿ ನೀಡಿದ್ದಾರೆ.
ಮತದಾನ ದಿನದಂದು ಜೆಡಿಎಸ್ನವರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮತ ಹಾಕಿಸಿ. ಸಣ್ಣ ವಿಷಯಗಳನ್ನು ದೊಡ್ಡದು ಮಾಡಬೇಡಿ ಎಂದಿದ್ದಾರೆ. ಈ ಸೂಚನೆಯಂತೆ ಬಂಡಾಯ ನಾಯಕರು ಸಹ ಮೋದಿ ಮತ್ತು ದೇಶಕ್ಕಾಗಿ ಈ ಚುನಾವಣೆಯಲ್ಲಿ ಪಕ್ಷದ ಪರ ಕೆಲಸ ಮಾಡುವುದಾಗಿ ಒಪ್ಪಿಕೊಂಡಿದ್ದಾರೆ.
ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…
ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳ ಮೇಲಿನ ಜಾಹೀರಾತುಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ…
ಬೆಂಗಳೂರು : ಮೆಟ್ರೋ ದರ ಏರಿಕೆಗೆ ಬಿಎಂಆರ್ಸಿಎಲ್ ಬ್ರೇಕ್ ಹಾಕಿದೆ. ಸೋಮವಾರದಿಂದ ಶೇ.5ರಷ್ಟು ದರ ಏರಿಕೆಗೆ ಬಿಎಂಆರ್ಸಿಎಲ್ ಮುಂದಾಗಿತ್ತು. ಆದರೆ…
ಮೈಸೂರು : ಸಜಾ ಬಂಧಿಗಳು ಕಾರಾಗೃಹದಿಂದ ಬಿಡುಗಡೆಯಾಗುವುದರೊಳಗೆ ಉತ್ತಮ ನಡತೆಯನ್ನು ಹೊಂದಿ ಹೊರಗೆ ಹೋದ ಬಳಿಕ ಸಮಾಜಮುಖಿ ಜೀವನ ಆರಂಭಿಸಬೇಕು…
ಹುಣಸೂರು : 2028ರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಜಿ.ಡಿ.ಹರೀಶ್ಗೌಡ…