ರಾಜ್ಯ

ಧರ್ಮಸ್ಥಳಕ್ಕೆ ಮಸಿ ಬಳಿಯುವ ಯತ್ನ ನಡೆಯುತ್ತಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಉಡುಪಿ: ಸರ್ಕಾರ ಧರ್ಮಸ್ಥಳದ ಜೊತೆಗೆ ಇರುತ್ತದೆ. ಅನಾಮಿಕ ನೂರಾರು ಕಲ್ಪನೆಯ ಕಥೆ ಹೇಳುತ್ತಿದ್ದಾನೆ. ಸರ್ಕಾರದ ದಿಕ್ಕು ತಪ್ಪಿಸಿದವರನ್ನು ನಾವು ಬಿಡುವುದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.

ಈ ಕುರಿತು ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಬಹಳ ಪವಿತ್ರವಾದದ್ದು. ಅಲ್ಲಿಗೆ ಮಸಿ ಬಳಿಯುವ ಯತ್ನ ನಡೆಯುತ್ತಿದೆ. ಗುಂಡಿ ಮೇಲೆ ಗುಂಡಿ ತೋಡಿದರೂ, ಬೆಟ್ಟ ಅಗೆದರು ಇಲಿಯೂ ಸಿಗಲಿಲ್ಲ. ಸರ್ಕಾರ ಧರ್ಮಸ್ಥಳದ ಜೊತೆಗೆ ಯಾವತ್ತೂ ಇರುತ್ತದೆ ಎಂದರು.

ಧರ್ಮಸ್ಥಳದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳಿನ ಮಹಲ್‌ ಕಟ್ಟಿದರು. ಆಗ ಆರೋಪ ಮಾಡಿದ್ದು ಇದೇ ಬಿಜೆಪಿ. ಈಗ ಗೋಸುಂಬೆ ಕಣ್ಣೀರು ಹಾಕುತ್ತಿರುವುದೇ ಇದೇ ಬಿಜೆಪಿಯೇ. ರಾಜ್ಯ, ದೇಶ, ವಿದೇಶದಲ್ಲೂ ಈ ವಿಚಾರ ಚರ್ಚೆಯಾಯಿತು. ಧರ್ಮಸ್ಥಳಕ್ಕೆ ಕಪ್ಪು ಮಸಿ ಬಳಿದವರಿಗೆ ಶಿಕ್ಷೆಯಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಬಿಜೆಪಿ ಸಾವಿರ ಮಾತನಾಡಬಹುದು. ಆದರೆ ಮುಸುಕುಧಾರಿಯ ಹಿಂದೆ ಇದೆ. ಎಲ್ಲರ ನಾಟಕ, ದೊಂಬರಾಟ ಮುಗಿಯಲಿ ಎಂದು ಎಸ್‌ಐಟಿ ರಚನೆ ಮಾಡಲಾಗಿದೆ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

2 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

3 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

3 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

3 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

4 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

13 hours ago