lakhmi hebbalkar
ಉಡುಪಿ: ಸರ್ಕಾರ ಧರ್ಮಸ್ಥಳದ ಜೊತೆಗೆ ಇರುತ್ತದೆ. ಅನಾಮಿಕ ನೂರಾರು ಕಲ್ಪನೆಯ ಕಥೆ ಹೇಳುತ್ತಿದ್ದಾನೆ. ಸರ್ಕಾರದ ದಿಕ್ಕು ತಪ್ಪಿಸಿದವರನ್ನು ನಾವು ಬಿಡುವುದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಈ ಕುರಿತು ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಬಹಳ ಪವಿತ್ರವಾದದ್ದು. ಅಲ್ಲಿಗೆ ಮಸಿ ಬಳಿಯುವ ಯತ್ನ ನಡೆಯುತ್ತಿದೆ. ಗುಂಡಿ ಮೇಲೆ ಗುಂಡಿ ತೋಡಿದರೂ, ಬೆಟ್ಟ ಅಗೆದರು ಇಲಿಯೂ ಸಿಗಲಿಲ್ಲ. ಸರ್ಕಾರ ಧರ್ಮಸ್ಥಳದ ಜೊತೆಗೆ ಯಾವತ್ತೂ ಇರುತ್ತದೆ ಎಂದರು.
ಧರ್ಮಸ್ಥಳದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳಿನ ಮಹಲ್ ಕಟ್ಟಿದರು. ಆಗ ಆರೋಪ ಮಾಡಿದ್ದು ಇದೇ ಬಿಜೆಪಿ. ಈಗ ಗೋಸುಂಬೆ ಕಣ್ಣೀರು ಹಾಕುತ್ತಿರುವುದೇ ಇದೇ ಬಿಜೆಪಿಯೇ. ರಾಜ್ಯ, ದೇಶ, ವಿದೇಶದಲ್ಲೂ ಈ ವಿಚಾರ ಚರ್ಚೆಯಾಯಿತು. ಧರ್ಮಸ್ಥಳಕ್ಕೆ ಕಪ್ಪು ಮಸಿ ಬಳಿದವರಿಗೆ ಶಿಕ್ಷೆಯಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಬಿಜೆಪಿ ಸಾವಿರ ಮಾತನಾಡಬಹುದು. ಆದರೆ ಮುಸುಕುಧಾರಿಯ ಹಿಂದೆ ಇದೆ. ಎಲ್ಲರ ನಾಟಕ, ದೊಂಬರಾಟ ಮುಗಿಯಲಿ ಎಂದು ಎಸ್ಐಟಿ ರಚನೆ ಮಾಡಲಾಗಿದೆ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…