ರಾಜ್ಯ

ಎಲ್ಲರನ್ನು ಒಂದುಗೂಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ: ಸಂಸದ ಬಸವರಾಜ ಬೊಮ್ಮಾಯಿ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯಿಂದ ವಿಜಯೇಂದ್ರ ಅವರನ್ನು ಕೆಳಗಿಳಿಸಲು ಯತ್ನಾಳ್‌ ತಂಡದ ಜೊತೆ ಪ್ರತ್ಯೇಕ ಸಭೆ ನಡೆಸಿರುವ ವಿಚಾರವನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನಿರಾಕರಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದರೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ಗುಂಪುಗಾರಿಕೆಯಲ್ಲಿ ನಂಬಿಕೆ ಇಟ್ಟವನಲ್ಲ. ಆದ್ದರಿಂದ ನಾನು ಯಾವುದೇ ಒಂದು ಗುಂಪಿನ ಸಭೆಯನ್ನು ಕರೆಯುವ ಪ್ರಶ್ನೆಯೇ ಬರುವುದಿಲ್ಲ. ಎಲ್ಲರನ್ನೂ ಒಂದು ಗೂಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುವ ಹಲವಾರು ಮುಖಂಡರಲ್ಲಿ ನಾನೂ ಒಬ್ಬ ಎಂದು ಸ್ಪಷ್ಟಪಡಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಪಕ್ಷದಲ್ಲಿನ ಭಿನ್ನಮತವನ್ನು ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಇತರ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಒಟ್ಟಿಗೆ ಕುಳಿತು ಮಾತುಕತೆಯ ಮೂಲಕ ಬಗೆಹರಿಸಬೇಕು. ವರಿಷ್ಠರು ಕೂಡಲೇ ಕರ್ನಾಟಕದ ಪಕ್ಷದ ಬೆಳವಣಿಗೆಯ ಬಗ್ಗೆ ಗಮನವನ್ನು ಹರಿಸಿ, ಎಲ್ಲಾ ಪ್ರಮುಖರ ಜೊತೆಗೆ ಚರ್ಚೆ ಮಾಡಿ ಸೂಕ್ತ ನಿರ್ಣಯವನ್ನು ತೆಗೆದುಕೊಳ್ಳುತ್ತಾರೆ. ಆದರೆ ಪಕ್ಷದಲ್ಲಿ ಆಂತರಿಕವಾಗಿ ಭಿನ್ನಾಭಿಪ್ರಾಯದ ಮಾತಿನ ಸಮರ ನಡೀತಿರೋದು ಅತ್ಯಂತ ದುರದೃಷ್ಟಕರ ಎಂದು ಅಭಿಪ್ರಾಯಪಟ್ಟರು.

ಇನ್ನು ಕೂಡಲೇ ಪಕ್ಷದ ವರಿಷ್ಠರು ಕರ್ನಾಟಕದ ಬೆಳವಣಿಗೆಯ ಬಗ್ಗೆ ಗಮನ ಹರಿಸಿ ಎಲ್ಲಾ ಪ್ರಮುಖರ ಜೊತೆಗೆ ಚರ್ಚೆ ಮಾಡಿ ಸೂಕ್ತ ನಿರ್ಣಯವನ್ನು ತೆಗೆದುಕೊಳ್ಳುತ್ತಾರೆ ಎನ್ನುವ ನಂಬಿಕೆ ನನಗಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

2 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

2 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

2 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

2 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

2 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

2 hours ago