ರಾಜ್ಯ

ಅನನ್ಯ ಭಟ್‌ ನಾಪತ್ತೆ ಪ್ರಕರಣ ಎಸ್‌ಐಟಿಗೆ ಹಸ್ತಾಂತರ

ಬೆಂಗಳೂರು : ಇಪ್ಪತ್ತೆರಡು ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣ ವಿಶೇಷ ತನಿಖಾ ದಳ ( ಎಸ್ ಐಟಿ) ಗೆ ಹಸ್ತಾಂತರ ಮಾಡಲಾಗಿದೆ.

ರಾಜ್ಯ ಪೊಲೀಸ್ ಮಹಾನಿದೇರ್ಶಕ ಸಲೀಂ ಅವರು ಪ್ರಕರಣವನ್ನು ಎಸ್ ಐಟಿಗೆ ಹಸ್ತಾಂತರಿಸಿ
ಆದೇಶ ಹೊರಡಿಸಿದ್ದಾರೆ.

ಅನನ್ಯ ಭಟ್ ತಾಯಿ ಸುಜಾತ ಭಟ್ ಅವರು ತಮ್ಮ ವಕೀಲರೊಂದಿಗೆ ಎಸ್ಪಿ ಅವರನ್ನು ಭೇಟಿಯಾಗಿ, ಮಗಳ ನಾಪತ್ತೆ ಪ್ರಕರಣದ ಬಗ್ಗೆ ದೂರು ನೀಡಿ, ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದರು.

ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯ ಭಟ್ ಅವರು 2003ರಲ್ಲಿ ಧರ್ಮಸ್ಥಳ ದೇವಸ್ಥಾನಕ್ಕೆ ಬಂದವರು ನಿಗೂಢವಾಗಿ ನಾಪತ್ತೆಯಾಗಿದ್ದರು.

ಧರ್ಮಸ್ಥಳದಲ್ಲಿ ಒತ್ತಡದಿಂದ ನೂರಾರು ಶವಗಳನ್ನು ಹೂತು ಹಾಕಿರುವುದಾಗಿ ವ್ಯಕ್ತಿಯೊಬ್ಬ ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದಿದ್ದ. ಪತ್ರ ಬರೆದ ಬರೆದ ಕೆಲವೇ ದಿನಗಳ ಬಳಿಕ ಅದೇ ವ್ಯಕ್ತಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿ ನ್ಯಾಯಾಧೀಶರ ಮುಂದೆ ಹೇಳಿಕೆಯನ್ನೂ ನೀಡಿದ್ದ. ಬರುವಾಗ ತನ್ನ ಜೊತೆ ಅಸ್ತಿಪಂಜರವೊಂದನ್ನು ತಂದಿದ್ದು, ಅದನ್ನು ಪೊಲೀಸರು ವಿಧಿ ವಿಜ್ಞಾನ ತನಿಖೆಗೆ ಒಳಪಡಿಸಿದ್ದಾರೆ. ಧರ್ಮಸ್ಥಳದ ಸುತ್ತಮುತ್ತ ಬಹಳಷ್ಟು ಕಡೆಗಳಲ್ಲಿ ತಾನು ಶವಗಳನ್ನು ಹೂತು ಹಾಕಿರುವುದಾಗಿಯು, ಪೊಲೀಸರು ತನಿಖೆ ನಡೆಸುವುದಾದರೆ ಆ ಸ್ಥಳಗಳನ್ನು ತೋರಿಸುವುದಾಗಿ ಆ ವ್ಯಕ್ತಿ ತಿಳಿಸಿದ್ದ. ಈಗ ಆ ವ್ಯಕ್ತಿಯನ್ನು ಪ್ರತಿನಿಧಿಸುವ ಇಬ್ಬರು ನ್ಯಾಯವಾದಿಗಳು ಎಸ್ ಐ ಟಿ ರಚನೆ ಬಗ್ಗೆ ಬೇಡಿಕೆ ಮುಂದಿಟ್ಟಿದ್ದರು.

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆಗಳು ಹಾಗು ಅವುಗಳನ್ನು ಒತ್ತಡದಿಂದಾಗಿ ತಾನೇ ಹೂತು ಹಾಕಿದ್ದೇನೆ ಎಂದು ವ್ಯಕ್ತಿಯೊಬ್ಬ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿರುವುದು
ರಾಜ್ಯ, ರಾಷ್ಟ್ರ ಮಟ್ಟದಲ್ಲಿ ದೊಡ್ಡ ಸಂಚಲನ ಮೂಡಿಸಿತ್ತು.

ಧರ್ಮಸ್ಥಳದಲ್ಲಿ ಅನನ್ಯಾ ಭಟ್ ನಾಪತ್ತೆ ಆರೋಪ​ ಪ್ರಕರಣ ಸಂಬಂಧ ಎಸ್​​ಐಟಿ ಸಿಪಿಐ ಮಂಜುನಾಥ್ ಗೌಡ ನೇತೃತ್ವದ ತಂಡ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್​ಪೇಟೆಗೆ ತೆರಳಿ ಮಾಹಿತಿ ಕಲೆ ಹಾಕಿದೆ.

ಸುಜಾತಾ ಭಟ್ 1999ರಿಂದ 2007ರವರೆಗೆ ರಿಪ್ಪನ್​ಪೇಟೆಯಲ್ಲಿ ವಾಸವಾಗಿದ್ದಾರೆ ಎನ್ನಲಾಗಿದೆ. ಧರ್ಮಸ್ಥಳ ಪ್ರಕರಣದಲ್ಲಿ ಸುಜಾತಾ ಭಟ್ ಪಾತ್ರವೇನು? ನಿಜವಾಗಿಯೂ ಅವರಿಗೆ ಮಗಳಿದ್ದರೇ? ಅನನ್ಯಾ ಭಟ್ ಹಿನ್ನೆಲೆ ಏನು ಎಂಬ ಬಗ್ಗೆ ಎಸ್​ಐಟಿ ಮಾಹಿತಿ ಕಲೆ ಹಾಕಿದೆ.

ಆಂದೋಲನ ಡೆಸ್ಕ್

Recent Posts

ಬೆಳ್ಳಿ ಬರೋಬ್ಬರಿ 20 ಸಾವಿರ ರೂ.ಇಳಿಕೆ : ಚಿನ್ನದ ದರದಲ್ಲೂ ದಿಢೀರ್ 4 ಸಾವಿರ ರೂ ಕುಸಿತ

ಹೈದರಾಬಾದ್ : ಕಳೆದ ಕೆಲವು ದಿನಗಳಿಂದ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಇದ್ದಕ್ಕಿದ್ದಂತೆ…

8 mins ago

ಟಿವಿಕೆ ವಿಜಯ್ ಪಕ್ಷಕ್ಕೆ ಸೀಟಿ ಗುರುತು ನೀಡಿದ ಆಯೋಗ

ಚೆನ್ನೈ : ನಟ, ರಾಜಕಾರಣಿ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಚುನಾವಣಾ ಆಯೋಗವು ಗುರುವಾರ ಚಿಹ್ನೆ…

48 mins ago

ಮ.ಬೆಟ್ಟ | ಡ್ರೋನ್‌ ಕ್ಯಾಮೆರಾದಲ್ಲಿ ಸೆರೆಯಾದ ಚಿರತೆ ದೃಶ್ಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

59 mins ago

MGNREGA ಕಾಯ್ದೆಯನ್ನು ಮರುಸ್ಥಾಪಿಸುವವರೆಗೆ ನಮ್ಮ ಹೋರಾಟ ಇರಲಿದೆ : ಸಿಎಂ

ಬೆಂಗಳೂರು : ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ…

1 hour ago

ಒಂದು ಎಕರೆಯಲ್ಲಿ 102 ವಿವಿಧ ಬೆಳೆ : ರೋಗರಹಿತ ಬೆಳೆಗಳ ತಳಿ ಪ್ರದರ್ಶನ

ಸುತ್ತೂರು : ಕೇವಲ 1 ಎಕರೆ ಪ್ರದೇಶದಲ್ಲಿ ಸುಮಾರು 102 ಮಾದರಿಯ ವಿವಿಧ ತಳಿಯ ಬೆಳೆಗಳನ್ನು ಬೆಳೆಯಬಹುದೆಂಬುದನ್ನು ಸಾಬೀತು ಪಡಿಸಲಾಗಿದೆ.…

1 hour ago

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ 2 ತಿಂಗಳಲ್ಲಿ ದಾಖಲೆಯ ಆದಾಯ

ದಕ್ಷಿಣ ಕನ್ನಡ: ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣು ದೇವಸ್ಥಾನದ ಆದಾಯ 2025ರ ನವೆಂಬರ್‌ ಹಾಗೂ…

3 hours ago