ರಾಜ್ಯ

ಅನನ್ಯ ಭಟ್‌ ನಾಪತ್ತೆ ಪ್ರಕರಣ ಎಸ್‌ಐಟಿಗೆ ಹಸ್ತಾಂತರ

ಬೆಂಗಳೂರು : ಇಪ್ಪತ್ತೆರಡು ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣ ವಿಶೇಷ ತನಿಖಾ ದಳ ( ಎಸ್ ಐಟಿ) ಗೆ ಹಸ್ತಾಂತರ ಮಾಡಲಾಗಿದೆ.

ರಾಜ್ಯ ಪೊಲೀಸ್ ಮಹಾನಿದೇರ್ಶಕ ಸಲೀಂ ಅವರು ಪ್ರಕರಣವನ್ನು ಎಸ್ ಐಟಿಗೆ ಹಸ್ತಾಂತರಿಸಿ
ಆದೇಶ ಹೊರಡಿಸಿದ್ದಾರೆ.

ಅನನ್ಯ ಭಟ್ ತಾಯಿ ಸುಜಾತ ಭಟ್ ಅವರು ತಮ್ಮ ವಕೀಲರೊಂದಿಗೆ ಎಸ್ಪಿ ಅವರನ್ನು ಭೇಟಿಯಾಗಿ, ಮಗಳ ನಾಪತ್ತೆ ಪ್ರಕರಣದ ಬಗ್ಗೆ ದೂರು ನೀಡಿ, ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದರು.

ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯ ಭಟ್ ಅವರು 2003ರಲ್ಲಿ ಧರ್ಮಸ್ಥಳ ದೇವಸ್ಥಾನಕ್ಕೆ ಬಂದವರು ನಿಗೂಢವಾಗಿ ನಾಪತ್ತೆಯಾಗಿದ್ದರು.

ಧರ್ಮಸ್ಥಳದಲ್ಲಿ ಒತ್ತಡದಿಂದ ನೂರಾರು ಶವಗಳನ್ನು ಹೂತು ಹಾಕಿರುವುದಾಗಿ ವ್ಯಕ್ತಿಯೊಬ್ಬ ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದಿದ್ದ. ಪತ್ರ ಬರೆದ ಬರೆದ ಕೆಲವೇ ದಿನಗಳ ಬಳಿಕ ಅದೇ ವ್ಯಕ್ತಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿ ನ್ಯಾಯಾಧೀಶರ ಮುಂದೆ ಹೇಳಿಕೆಯನ್ನೂ ನೀಡಿದ್ದ. ಬರುವಾಗ ತನ್ನ ಜೊತೆ ಅಸ್ತಿಪಂಜರವೊಂದನ್ನು ತಂದಿದ್ದು, ಅದನ್ನು ಪೊಲೀಸರು ವಿಧಿ ವಿಜ್ಞಾನ ತನಿಖೆಗೆ ಒಳಪಡಿಸಿದ್ದಾರೆ. ಧರ್ಮಸ್ಥಳದ ಸುತ್ತಮುತ್ತ ಬಹಳಷ್ಟು ಕಡೆಗಳಲ್ಲಿ ತಾನು ಶವಗಳನ್ನು ಹೂತು ಹಾಕಿರುವುದಾಗಿಯು, ಪೊಲೀಸರು ತನಿಖೆ ನಡೆಸುವುದಾದರೆ ಆ ಸ್ಥಳಗಳನ್ನು ತೋರಿಸುವುದಾಗಿ ಆ ವ್ಯಕ್ತಿ ತಿಳಿಸಿದ್ದ. ಈಗ ಆ ವ್ಯಕ್ತಿಯನ್ನು ಪ್ರತಿನಿಧಿಸುವ ಇಬ್ಬರು ನ್ಯಾಯವಾದಿಗಳು ಎಸ್ ಐ ಟಿ ರಚನೆ ಬಗ್ಗೆ ಬೇಡಿಕೆ ಮುಂದಿಟ್ಟಿದ್ದರು.

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆಗಳು ಹಾಗು ಅವುಗಳನ್ನು ಒತ್ತಡದಿಂದಾಗಿ ತಾನೇ ಹೂತು ಹಾಕಿದ್ದೇನೆ ಎಂದು ವ್ಯಕ್ತಿಯೊಬ್ಬ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿರುವುದು
ರಾಜ್ಯ, ರಾಷ್ಟ್ರ ಮಟ್ಟದಲ್ಲಿ ದೊಡ್ಡ ಸಂಚಲನ ಮೂಡಿಸಿತ್ತು.

ಧರ್ಮಸ್ಥಳದಲ್ಲಿ ಅನನ್ಯಾ ಭಟ್ ನಾಪತ್ತೆ ಆರೋಪ​ ಪ್ರಕರಣ ಸಂಬಂಧ ಎಸ್​​ಐಟಿ ಸಿಪಿಐ ಮಂಜುನಾಥ್ ಗೌಡ ನೇತೃತ್ವದ ತಂಡ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್​ಪೇಟೆಗೆ ತೆರಳಿ ಮಾಹಿತಿ ಕಲೆ ಹಾಕಿದೆ.

ಸುಜಾತಾ ಭಟ್ 1999ರಿಂದ 2007ರವರೆಗೆ ರಿಪ್ಪನ್​ಪೇಟೆಯಲ್ಲಿ ವಾಸವಾಗಿದ್ದಾರೆ ಎನ್ನಲಾಗಿದೆ. ಧರ್ಮಸ್ಥಳ ಪ್ರಕರಣದಲ್ಲಿ ಸುಜಾತಾ ಭಟ್ ಪಾತ್ರವೇನು? ನಿಜವಾಗಿಯೂ ಅವರಿಗೆ ಮಗಳಿದ್ದರೇ? ಅನನ್ಯಾ ಭಟ್ ಹಿನ್ನೆಲೆ ಏನು ಎಂಬ ಬಗ್ಗೆ ಎಸ್​ಐಟಿ ಮಾಹಿತಿ ಕಲೆ ಹಾಕಿದೆ.

ಆಂದೋಲನ ಡೆಸ್ಕ್

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

2 hours ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

15 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

15 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

15 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

15 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

15 hours ago