ರಾಜ್ಯ

ಅನನ್ಯ ಭಟ್‌ ನಾಪತ್ತೆ ಪ್ರಕರಣ ಎಸ್‌ಐಟಿಗೆ ಹಸ್ತಾಂತರ

ಬೆಂಗಳೂರು : ಇಪ್ಪತ್ತೆರಡು ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣ ವಿಶೇಷ ತನಿಖಾ ದಳ ( ಎಸ್ ಐಟಿ) ಗೆ ಹಸ್ತಾಂತರ ಮಾಡಲಾಗಿದೆ.

ರಾಜ್ಯ ಪೊಲೀಸ್ ಮಹಾನಿದೇರ್ಶಕ ಸಲೀಂ ಅವರು ಪ್ರಕರಣವನ್ನು ಎಸ್ ಐಟಿಗೆ ಹಸ್ತಾಂತರಿಸಿ
ಆದೇಶ ಹೊರಡಿಸಿದ್ದಾರೆ.

ಅನನ್ಯ ಭಟ್ ತಾಯಿ ಸುಜಾತ ಭಟ್ ಅವರು ತಮ್ಮ ವಕೀಲರೊಂದಿಗೆ ಎಸ್ಪಿ ಅವರನ್ನು ಭೇಟಿಯಾಗಿ, ಮಗಳ ನಾಪತ್ತೆ ಪ್ರಕರಣದ ಬಗ್ಗೆ ದೂರು ನೀಡಿ, ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದರು.

ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯ ಭಟ್ ಅವರು 2003ರಲ್ಲಿ ಧರ್ಮಸ್ಥಳ ದೇವಸ್ಥಾನಕ್ಕೆ ಬಂದವರು ನಿಗೂಢವಾಗಿ ನಾಪತ್ತೆಯಾಗಿದ್ದರು.

ಧರ್ಮಸ್ಥಳದಲ್ಲಿ ಒತ್ತಡದಿಂದ ನೂರಾರು ಶವಗಳನ್ನು ಹೂತು ಹಾಕಿರುವುದಾಗಿ ವ್ಯಕ್ತಿಯೊಬ್ಬ ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದಿದ್ದ. ಪತ್ರ ಬರೆದ ಬರೆದ ಕೆಲವೇ ದಿನಗಳ ಬಳಿಕ ಅದೇ ವ್ಯಕ್ತಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿ ನ್ಯಾಯಾಧೀಶರ ಮುಂದೆ ಹೇಳಿಕೆಯನ್ನೂ ನೀಡಿದ್ದ. ಬರುವಾಗ ತನ್ನ ಜೊತೆ ಅಸ್ತಿಪಂಜರವೊಂದನ್ನು ತಂದಿದ್ದು, ಅದನ್ನು ಪೊಲೀಸರು ವಿಧಿ ವಿಜ್ಞಾನ ತನಿಖೆಗೆ ಒಳಪಡಿಸಿದ್ದಾರೆ. ಧರ್ಮಸ್ಥಳದ ಸುತ್ತಮುತ್ತ ಬಹಳಷ್ಟು ಕಡೆಗಳಲ್ಲಿ ತಾನು ಶವಗಳನ್ನು ಹೂತು ಹಾಕಿರುವುದಾಗಿಯು, ಪೊಲೀಸರು ತನಿಖೆ ನಡೆಸುವುದಾದರೆ ಆ ಸ್ಥಳಗಳನ್ನು ತೋರಿಸುವುದಾಗಿ ಆ ವ್ಯಕ್ತಿ ತಿಳಿಸಿದ್ದ. ಈಗ ಆ ವ್ಯಕ್ತಿಯನ್ನು ಪ್ರತಿನಿಧಿಸುವ ಇಬ್ಬರು ನ್ಯಾಯವಾದಿಗಳು ಎಸ್ ಐ ಟಿ ರಚನೆ ಬಗ್ಗೆ ಬೇಡಿಕೆ ಮುಂದಿಟ್ಟಿದ್ದರು.

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆಗಳು ಹಾಗು ಅವುಗಳನ್ನು ಒತ್ತಡದಿಂದಾಗಿ ತಾನೇ ಹೂತು ಹಾಕಿದ್ದೇನೆ ಎಂದು ವ್ಯಕ್ತಿಯೊಬ್ಬ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿರುವುದು
ರಾಜ್ಯ, ರಾಷ್ಟ್ರ ಮಟ್ಟದಲ್ಲಿ ದೊಡ್ಡ ಸಂಚಲನ ಮೂಡಿಸಿತ್ತು.

ಧರ್ಮಸ್ಥಳದಲ್ಲಿ ಅನನ್ಯಾ ಭಟ್ ನಾಪತ್ತೆ ಆರೋಪ​ ಪ್ರಕರಣ ಸಂಬಂಧ ಎಸ್​​ಐಟಿ ಸಿಪಿಐ ಮಂಜುನಾಥ್ ಗೌಡ ನೇತೃತ್ವದ ತಂಡ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್​ಪೇಟೆಗೆ ತೆರಳಿ ಮಾಹಿತಿ ಕಲೆ ಹಾಕಿದೆ.

ಸುಜಾತಾ ಭಟ್ 1999ರಿಂದ 2007ರವರೆಗೆ ರಿಪ್ಪನ್​ಪೇಟೆಯಲ್ಲಿ ವಾಸವಾಗಿದ್ದಾರೆ ಎನ್ನಲಾಗಿದೆ. ಧರ್ಮಸ್ಥಳ ಪ್ರಕರಣದಲ್ಲಿ ಸುಜಾತಾ ಭಟ್ ಪಾತ್ರವೇನು? ನಿಜವಾಗಿಯೂ ಅವರಿಗೆ ಮಗಳಿದ್ದರೇ? ಅನನ್ಯಾ ಭಟ್ ಹಿನ್ನೆಲೆ ಏನು ಎಂಬ ಬಗ್ಗೆ ಎಸ್​ಐಟಿ ಮಾಹಿತಿ ಕಲೆ ಹಾಕಿದೆ.

ಆಂದೋಲನ ಡೆಸ್ಕ್

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

4 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

4 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

4 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

15 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

16 hours ago