ಬೆಂಗಳೂರು: ಇಂದಿರಾನಗರ ಸ್ಪಾ ವ್ಯವಸ್ಥಾಪಕನಿಗೆ ಬೆದರಿಸಿ ೧೫ ಲಕ್ಷ ರೂ ಹಣ ಸುಲಿಗೆಗೆ ಯತ್ನಿಸಿದ ಪ್ರಕರಣ ಸಂಬಂಧ ಖಾಸಗಿ ಸುದ್ದಿವಾಹಿನಿ ಕಾರ್ಯನಿರ್ವಾಹಕ ಅಧಿಕಾರಿ ಸೇರಿ ಇಬ್ಬರನ್ನು ಜೆ.ಬಿ.ನಗರ ಪೊಲೀಸರು ಬಂಧಿಸಿದ್ದಾರೆ.
ಖಾಸಗಿ ಸುದ್ದಿವಾಹಿನಿಯ ಸಿಇಓ ರಾಜಾನುಕುಂಟೆ ವೆಂಕಟೇಶ್ ಹಾಗೂ ನಿರೂಪಕಿ ದಿವ್ಯಾ ವಸಂತಾ ಸೋದರ ಸಂದೇಶ್ ಬಂಧಿತರಾಗಿದ್ದು, ಆರೋಪಿಗಳಿಂದ ೩ ಮೊಬೈಲ್ ಜಪ್ತಿ ಮಾಡಲಾಗಿದೆ.
ಕೃತ್ಯ ಬೆಳಕಿಗೆ ಬಂದ ನಂತರ ನಿರೂಪಕಿ ದಿವ್ಯಾ ವಸಂತ ನಾಪತ್ತೆಯಾಗಿದ್ದು, ಸಚಿನ್ ಹಾಗೂ ಆಕಾಶ್ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಇತ್ತೀಚೆಗೆ ಇಂದಿರಾನಗರದ ೧೦೦ ಅಡಿ ರಸ್ತೆ ೧೫ನೇ ಮುಖ್ಯರಸ್ತೆಯಲ್ಲಿರುವ ಬ್ಯೂಟಿ ಪಾರ್ಲರ್ನ ವ್ಯವಸ್ಥಾಪಕ ಶಿವಶಂಕರ್ ಅವರಿಗೆ ವೇಶ್ಯಾವಾಟಿಕೆ ನಡೆದಿದೆ ಎಂದು ಬೆದರಿಸಿ ಹಣ ಸುಲಿಗೆ ಮಾಡಲು ವೆಂಕಟೇಶ್ ತಂಡ ಯತ್ನಿಸಿತ್ತು. ಈ ಬಗ್ಗೆ ತನಿಖೆಗಿಳಿದ ಪೊಲೀಸರು, ತಾಂತ್ರಿಕ ಮಾಹಿತಿ ಆಧರಿಸಿ ಸಿಇಓ ಸೇರಿ ಇಬ್ಬರನ್ನು ಬಂಧಿಸಿದ್ದಾರೆ.
ಸುಲಿಗೆ ಕೃತ್ಯಗಳಿಗೆ ವಾಟ್ಸ್ ಆಪ್ನಲ್ಲಿ ಸೈ ರಿಸರ್ಚ್ ಟೀಂ ಹೆಸರಿನ ಗ್ರೂಪ್ನ್ನು ವೆಂಕಟೇಶ್ ಹಾಗೂ ದಿವ್ಯಾ ಮಾಡಿಕೊಂಡಿದ್ದರು. ಈ ಗ್ರೂಪ್ನಲ್ಲಿ ತಮ್ಮ ಕಾರ್ಯಸೂಚಿಗಳ ಬಗ್ಗೆ ಆರೋಪಿಗಳು ಚರ್ಚಿಸುತ್ತಿದ್ದರು ಎಂದು ಮೂಲಗಳು ಹೇಳಿವೆ.
ಖಾಸಗಿ ಸುದ್ದಿವಾಹಿನಿಯಲ್ಲಿ ನಿರೂಪಕಿಯಾಗಿದ್ದ ದಿವ್ಯಾ ಆರು ತಿಂಗಳ ಹಿಂದೆ ಕೆಲಸ ಬಿಟ್ಟಿದ್ದಳು. ಅಲ್ಲದೇ ಇನ್ಸ್ಸ್ಟಾಗ್ರಾಂ ಹಾಗೂ ಫೇಸ್ಬುಕ್ ಸೇರಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ, ರೀಲ್ಸ್ಗಳ ಮೂಲಕ ಆಕೆ ಖ್ಯಾತಿ ಪಡೆದಿದ್ದಳು. ಖಾಸಗಿ ಸುದ್ದಿವಾಹಿನಿಯಲ್ಲಿ ಆಕೆಗೆ ೧೫ ಸಾವಿರ ಸಂಬಳ ಇದ್ದರೆ, ಮನರಂಜನಾ ವಾಹಿನಿಯಲ್ಲಿ ಹಾಸ್ಯ ಕಾರ್ಯಕ್ರಮದಲ್ಲಿ ನಟಿಸುತ್ತಿದ್ದರು. ಆಕೆಗೆ ವಾರಕ್ಕೆ ೬ ರಿಂದ ೭ ಸಾವಿರ ರೂ ಸಂಭಾವನೆ ಸಿಗುತ್ತಿತ್ತು. ಐಷಾರಾಮಿ ಜೀವನಕ್ಕೆ ಬಿದ್ದಿದ್ದ ದಿವ್ಯಾ ಸಲಭವಾಗಿ ಹಣ ಸಂಪಾದಿಸಲು ಅಡ್ಡ ಮಾರ್ಗ ತುಳಿದು ಸಂಕಷ್ಟಕ್ಕೆ ತುತ್ತಾಗಿದ್ದಾಳೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…