ಬೆಂಗಳೂರು: ಇಂದಿರಾನಗರ ಸ್ಪಾ ವ್ಯವಸ್ಥಾಪಕನಿಗೆ ಬೆದರಿಸಿ ೧೫ ಲಕ್ಷ ರೂ ಹಣ ಸುಲಿಗೆಗೆ ಯತ್ನಿಸಿದ ಪ್ರಕರಣ ಸಂಬಂಧ ಖಾಸಗಿ ಸುದ್ದಿವಾಹಿನಿ ಕಾರ್ಯನಿರ್ವಾಹಕ ಅಧಿಕಾರಿ ಸೇರಿ ಇಬ್ಬರನ್ನು ಜೆ.ಬಿ.ನಗರ ಪೊಲೀಸರು ಬಂಧಿಸಿದ್ದಾರೆ.
ಖಾಸಗಿ ಸುದ್ದಿವಾಹಿನಿಯ ಸಿಇಓ ರಾಜಾನುಕುಂಟೆ ವೆಂಕಟೇಶ್ ಹಾಗೂ ನಿರೂಪಕಿ ದಿವ್ಯಾ ವಸಂತಾ ಸೋದರ ಸಂದೇಶ್ ಬಂಧಿತರಾಗಿದ್ದು, ಆರೋಪಿಗಳಿಂದ ೩ ಮೊಬೈಲ್ ಜಪ್ತಿ ಮಾಡಲಾಗಿದೆ.
ಕೃತ್ಯ ಬೆಳಕಿಗೆ ಬಂದ ನಂತರ ನಿರೂಪಕಿ ದಿವ್ಯಾ ವಸಂತ ನಾಪತ್ತೆಯಾಗಿದ್ದು, ಸಚಿನ್ ಹಾಗೂ ಆಕಾಶ್ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಇತ್ತೀಚೆಗೆ ಇಂದಿರಾನಗರದ ೧೦೦ ಅಡಿ ರಸ್ತೆ ೧೫ನೇ ಮುಖ್ಯರಸ್ತೆಯಲ್ಲಿರುವ ಬ್ಯೂಟಿ ಪಾರ್ಲರ್ನ ವ್ಯವಸ್ಥಾಪಕ ಶಿವಶಂಕರ್ ಅವರಿಗೆ ವೇಶ್ಯಾವಾಟಿಕೆ ನಡೆದಿದೆ ಎಂದು ಬೆದರಿಸಿ ಹಣ ಸುಲಿಗೆ ಮಾಡಲು ವೆಂಕಟೇಶ್ ತಂಡ ಯತ್ನಿಸಿತ್ತು. ಈ ಬಗ್ಗೆ ತನಿಖೆಗಿಳಿದ ಪೊಲೀಸರು, ತಾಂತ್ರಿಕ ಮಾಹಿತಿ ಆಧರಿಸಿ ಸಿಇಓ ಸೇರಿ ಇಬ್ಬರನ್ನು ಬಂಧಿಸಿದ್ದಾರೆ.
ಸುಲಿಗೆ ಕೃತ್ಯಗಳಿಗೆ ವಾಟ್ಸ್ ಆಪ್ನಲ್ಲಿ ಸೈ ರಿಸರ್ಚ್ ಟೀಂ ಹೆಸರಿನ ಗ್ರೂಪ್ನ್ನು ವೆಂಕಟೇಶ್ ಹಾಗೂ ದಿವ್ಯಾ ಮಾಡಿಕೊಂಡಿದ್ದರು. ಈ ಗ್ರೂಪ್ನಲ್ಲಿ ತಮ್ಮ ಕಾರ್ಯಸೂಚಿಗಳ ಬಗ್ಗೆ ಆರೋಪಿಗಳು ಚರ್ಚಿಸುತ್ತಿದ್ದರು ಎಂದು ಮೂಲಗಳು ಹೇಳಿವೆ.
ಖಾಸಗಿ ಸುದ್ದಿವಾಹಿನಿಯಲ್ಲಿ ನಿರೂಪಕಿಯಾಗಿದ್ದ ದಿವ್ಯಾ ಆರು ತಿಂಗಳ ಹಿಂದೆ ಕೆಲಸ ಬಿಟ್ಟಿದ್ದಳು. ಅಲ್ಲದೇ ಇನ್ಸ್ಸ್ಟಾಗ್ರಾಂ ಹಾಗೂ ಫೇಸ್ಬುಕ್ ಸೇರಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ, ರೀಲ್ಸ್ಗಳ ಮೂಲಕ ಆಕೆ ಖ್ಯಾತಿ ಪಡೆದಿದ್ದಳು. ಖಾಸಗಿ ಸುದ್ದಿವಾಹಿನಿಯಲ್ಲಿ ಆಕೆಗೆ ೧೫ ಸಾವಿರ ಸಂಬಳ ಇದ್ದರೆ, ಮನರಂಜನಾ ವಾಹಿನಿಯಲ್ಲಿ ಹಾಸ್ಯ ಕಾರ್ಯಕ್ರಮದಲ್ಲಿ ನಟಿಸುತ್ತಿದ್ದರು. ಆಕೆಗೆ ವಾರಕ್ಕೆ ೬ ರಿಂದ ೭ ಸಾವಿರ ರೂ ಸಂಭಾವನೆ ಸಿಗುತ್ತಿತ್ತು. ಐಷಾರಾಮಿ ಜೀವನಕ್ಕೆ ಬಿದ್ದಿದ್ದ ದಿವ್ಯಾ ಸಲಭವಾಗಿ ಹಣ ಸಂಪಾದಿಸಲು ಅಡ್ಡ ಮಾರ್ಗ ತುಳಿದು ಸಂಕಷ್ಟಕ್ಕೆ ತುತ್ತಾಗಿದ್ದಾಳೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…