ಹರಪನಹಳ್ಳಿ : ತಾಲ್ಲೂಕಿನ ಐತಿಹಾಸಿಕ ಪ್ರಸಿದ್ಧ ಉಚ್ಚಂಗಿದುರ್ಗ ಕೋಟೆ ಕ್ಯಾಂಪ್ನ ಮದ್ಯಕೋಟೆ ಬಳಿ ಪುರಾತನ ಕಾಲದ ಬಾವಿ ಪತ್ತೆಯಾಗಿದೆ.
ಗ್ವಾಲಿಯರ್ ಖ್ಯಾತಿಯ ಕೋಟೆಗೆ ತೆರಳುವ ಮಾರ್ಗ ದುರಸ್ತಿ ಕಾರ್ಯ ನಡೆಸುವಾಗ ಏಕಾಏಕಿ ವಾಹನ ಸಹಿತ ಚಕ್ರಗಳು ಕುಸಿದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಬಾವಿಯು ೨೦ ಅಡಿಯಷ್ಟು ಅಳವಾಗಿದ್ದು, ಅಡ್ಡವಾಗಿ ಕಲ್ಲುಗಳು ಇವೆ. ಮೇಲ್ನೋಟಕ್ಕೆ ಬಾವಿಯಂತೆ ಗೋಚರವಾಗುತ್ತಿದ್ದರೂ ಅಗೆವು ಅಥವಾ ಟಂಕಸಾಲೆಯಂತೆ ಕಾಣುತ್ತಿದೆ.
ಇತಿಹಾಸದಲ್ಲಿ ಹಿಂದೆ ಕೋಟೆ ಬೀದಿಯಲ್ಲಿ ಹಿಂದೆ ಗ್ರಾಮವೊಂದಿತ್ತು. ರಾಜರು ಆಳ್ವಿಕೆ ಕಾಲದಲ್ಲಿ ಪ್ರತಿ ಸಮುದಾಯಕ್ಕೊಂದು ಕುಡಿಯುವ ನೀರಿನ ಬಾವಿ ಕೊರೆಯಲಾಗಿತ್ತು. ಒಂದೆರಡು ಬಾವಿಯನ್ನು ಹೊರತು ಪಡಿಸಿದರೆ, ಹಲವು ಬಾವಿಗಳು ಮುಚ್ಚಲ್ಪಟ್ಟಿವೆ. ಅವುಗಳ ಉತ್ಖನನದ ಕುರಿತು ಅಧ್ಯಯನ ನಡೆಯಬೇಕು ಎನ್ನುತ್ತಾರೆ ಸ್ಥಳೀಯರು.
ಕೋಟೆಯ ಸುತ್ತಲೂ ಹಲವು ದೇವಾಲಯಗಳು, ಬಾವಿಗಳು ಪುರಾತತ್ವ ಇಲಾಖೆ ನಿರ್ಲಕ್ಷ್ಯಕ್ಕೆ ಒಳಗಾಗಿ ನಶಿಸಿಹೋಗಿವೆ. ಹಿರಿಯರು ನೀಡಿದ ಬಳುವಳಿಯನ್ನು ಪ್ರತಿಯೊಬ್ಬರೂ ರಕ್ಷಣೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಇಲಾಖೆ ಅಽಕಾರಿಗಳು ಸಮಗ್ರ ಉತ್ಖನನ ಕೈಗೊಳ್ಳಬೇಕು ಎಂದು ಸ್ಥಳೀಯ ಮುಖಂಡ ಕುಲುಮಿ ಸುರೇಶ್ ಒತ್ತಾಯಿಸಿದರು.
ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ…
ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ…
ಕೇರಳ: ಕೇರಳ ಮತ್ತು ತಮಿಳುನಾಡು ಚುನಾವಣೆಗೆ ದಿನಾಂಕ ಘೋಷಣೆಯಾಗಲು ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಮಾರ್ಚ್.11ರಂದು ಪ್ರಧಾನಿ…
ಗುಂಡ್ಲುಪೇಟೆ: ಸೋಮವಾರ ಬೆಳಗ್ಗೆ ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು ಏಕಕಾಲದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಕಿರುಬನ ಕೊಳಚಿ ಕೆರೆಯಲ್ಲಿ ಒಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಡೆಯುತ್ತಿರುವ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಪ್ರಯುಕ್ತ…
ಮಹಾದೇಶ್ ಎಂ.ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಎರಡನೇ ದಿನ…