ಹರಪನಹಳ್ಳಿ : ತಾಲ್ಲೂಕಿನ ಐತಿಹಾಸಿಕ ಪ್ರಸಿದ್ಧ ಉಚ್ಚಂಗಿದುರ್ಗ ಕೋಟೆ ಕ್ಯಾಂಪ್ನ ಮದ್ಯಕೋಟೆ ಬಳಿ ಪುರಾತನ ಕಾಲದ ಬಾವಿ ಪತ್ತೆಯಾಗಿದೆ.
ಗ್ವಾಲಿಯರ್ ಖ್ಯಾತಿಯ ಕೋಟೆಗೆ ತೆರಳುವ ಮಾರ್ಗ ದುರಸ್ತಿ ಕಾರ್ಯ ನಡೆಸುವಾಗ ಏಕಾಏಕಿ ವಾಹನ ಸಹಿತ ಚಕ್ರಗಳು ಕುಸಿದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಬಾವಿಯು ೨೦ ಅಡಿಯಷ್ಟು ಅಳವಾಗಿದ್ದು, ಅಡ್ಡವಾಗಿ ಕಲ್ಲುಗಳು ಇವೆ. ಮೇಲ್ನೋಟಕ್ಕೆ ಬಾವಿಯಂತೆ ಗೋಚರವಾಗುತ್ತಿದ್ದರೂ ಅಗೆವು ಅಥವಾ ಟಂಕಸಾಲೆಯಂತೆ ಕಾಣುತ್ತಿದೆ.
ಇತಿಹಾಸದಲ್ಲಿ ಹಿಂದೆ ಕೋಟೆ ಬೀದಿಯಲ್ಲಿ ಹಿಂದೆ ಗ್ರಾಮವೊಂದಿತ್ತು. ರಾಜರು ಆಳ್ವಿಕೆ ಕಾಲದಲ್ಲಿ ಪ್ರತಿ ಸಮುದಾಯಕ್ಕೊಂದು ಕುಡಿಯುವ ನೀರಿನ ಬಾವಿ ಕೊರೆಯಲಾಗಿತ್ತು. ಒಂದೆರಡು ಬಾವಿಯನ್ನು ಹೊರತು ಪಡಿಸಿದರೆ, ಹಲವು ಬಾವಿಗಳು ಮುಚ್ಚಲ್ಪಟ್ಟಿವೆ. ಅವುಗಳ ಉತ್ಖನನದ ಕುರಿತು ಅಧ್ಯಯನ ನಡೆಯಬೇಕು ಎನ್ನುತ್ತಾರೆ ಸ್ಥಳೀಯರು.
ಕೋಟೆಯ ಸುತ್ತಲೂ ಹಲವು ದೇವಾಲಯಗಳು, ಬಾವಿಗಳು ಪುರಾತತ್ವ ಇಲಾಖೆ ನಿರ್ಲಕ್ಷ್ಯಕ್ಕೆ ಒಳಗಾಗಿ ನಶಿಸಿಹೋಗಿವೆ. ಹಿರಿಯರು ನೀಡಿದ ಬಳುವಳಿಯನ್ನು ಪ್ರತಿಯೊಬ್ಬರೂ ರಕ್ಷಣೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಇಲಾಖೆ ಅಽಕಾರಿಗಳು ಸಮಗ್ರ ಉತ್ಖನನ ಕೈಗೊಳ್ಳಬೇಕು ಎಂದು ಸ್ಥಳೀಯ ಮುಖಂಡ ಕುಲುಮಿ ಸುರೇಶ್ ಒತ್ತಾಯಿಸಿದರು.
ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್ ಎಕ್ಸ್ಪ್ರೆಸ್ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…
ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…
ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…
ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್ ಠಾಣೆಯಿಂದ ಕೇವಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್ಗಳನ್ನು…