ಹರಪನಹಳ್ಳಿ : ತಾಲ್ಲೂಕಿನ ಐತಿಹಾಸಿಕ ಪ್ರಸಿದ್ಧ ಉಚ್ಚಂಗಿದುರ್ಗ ಕೋಟೆ ಕ್ಯಾಂಪ್ನ ಮದ್ಯಕೋಟೆ ಬಳಿ ಪುರಾತನ ಕಾಲದ ಬಾವಿ ಪತ್ತೆಯಾಗಿದೆ.
ಗ್ವಾಲಿಯರ್ ಖ್ಯಾತಿಯ ಕೋಟೆಗೆ ತೆರಳುವ ಮಾರ್ಗ ದುರಸ್ತಿ ಕಾರ್ಯ ನಡೆಸುವಾಗ ಏಕಾಏಕಿ ವಾಹನ ಸಹಿತ ಚಕ್ರಗಳು ಕುಸಿದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಬಾವಿಯು ೨೦ ಅಡಿಯಷ್ಟು ಅಳವಾಗಿದ್ದು, ಅಡ್ಡವಾಗಿ ಕಲ್ಲುಗಳು ಇವೆ. ಮೇಲ್ನೋಟಕ್ಕೆ ಬಾವಿಯಂತೆ ಗೋಚರವಾಗುತ್ತಿದ್ದರೂ ಅಗೆವು ಅಥವಾ ಟಂಕಸಾಲೆಯಂತೆ ಕಾಣುತ್ತಿದೆ.
ಇತಿಹಾಸದಲ್ಲಿ ಹಿಂದೆ ಕೋಟೆ ಬೀದಿಯಲ್ಲಿ ಹಿಂದೆ ಗ್ರಾಮವೊಂದಿತ್ತು. ರಾಜರು ಆಳ್ವಿಕೆ ಕಾಲದಲ್ಲಿ ಪ್ರತಿ ಸಮುದಾಯಕ್ಕೊಂದು ಕುಡಿಯುವ ನೀರಿನ ಬಾವಿ ಕೊರೆಯಲಾಗಿತ್ತು. ಒಂದೆರಡು ಬಾವಿಯನ್ನು ಹೊರತು ಪಡಿಸಿದರೆ, ಹಲವು ಬಾವಿಗಳು ಮುಚ್ಚಲ್ಪಟ್ಟಿವೆ. ಅವುಗಳ ಉತ್ಖನನದ ಕುರಿತು ಅಧ್ಯಯನ ನಡೆಯಬೇಕು ಎನ್ನುತ್ತಾರೆ ಸ್ಥಳೀಯರು.
ಕೋಟೆಯ ಸುತ್ತಲೂ ಹಲವು ದೇವಾಲಯಗಳು, ಬಾವಿಗಳು ಪುರಾತತ್ವ ಇಲಾಖೆ ನಿರ್ಲಕ್ಷ್ಯಕ್ಕೆ ಒಳಗಾಗಿ ನಶಿಸಿಹೋಗಿವೆ. ಹಿರಿಯರು ನೀಡಿದ ಬಳುವಳಿಯನ್ನು ಪ್ರತಿಯೊಬ್ಬರೂ ರಕ್ಷಣೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಇಲಾಖೆ ಅಽಕಾರಿಗಳು ಸಮಗ್ರ ಉತ್ಖನನ ಕೈಗೊಳ್ಳಬೇಕು ಎಂದು ಸ್ಥಳೀಯ ಮುಖಂಡ ಕುಲುಮಿ ಸುರೇಶ್ ಒತ್ತಾಯಿಸಿದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…