ರಾಜ್ಯ

ಬೆಂಗಳೂರಿಗೆ ಭೇಟಿ ನೀಡಿದ ಆಂಧ್ರ ಸರ್ಕಾರದ ನಿಯೋಗ: ಕಾರಣ ಇಷ್ಟೆ

ಬೆಂಗಳೂರು: ಅಂಧ್ರ ಪ್ರದೇಶ ಸರ್ಕಾರವು ಶಕ್ತಿ ಯೋಜನೆಯನ್ನು ತಮ್ಮ ರಾಜ್ಯದಲ್ಲಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಇಂದು ಆಂಧ್ರ ಸರ್ಕಾರ ನಿಯೋಗ ಬೆಂಗಳೂರಿಗೆ ಭೇಟಿ ನೀಡಿ ಮಾಹಿತಿ ಕಲೆಹಾಕಿದೆ.

ಚುನಾವಣೆ ವೇಳೆ ನೀಡಿದ ಭರವಸೆಯಂತೆ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಲು ಆಂಧ್ರಪ್ರದೇಶ ಸರ್ಕಾರ ಮುಂದಾಗಿದೆ.

ಈ ಹಿನ್ನೆಲೆಯಲ್ಲಿ ಇಂದು ಶಕ್ತಿ ಯೋಜನೆ ಜಾರಿಗೆ ಸಂಬಂಧಿಸಿದಂತೆ ಅಗತ್ಯ ಮಾಹಿತಿಗಳನ್ನು ಪಡೆಯುವ ನಿಟ್ಟಿನಲ್ಲಿ ಆಂಧ್ರದ ಗೃಹ ಸಚಿವೆ ಅನಿತಾ, ಸಾರಿಗೆ ಸಚಿವ ರಾಮಮೋಹನ್‌ ರೆಡ್ಡಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಸಂಧ್ಯಾರಾಣಿ ಒಳಗೊಂಡ ನಿಯೋಗ ಇಂದು ಬೆಂಗಳೂರಿಗೆ ಆಗಮಿಸಿತ್ತು.

ಶಕ್ತಿ ಯೋಜನೆ ಸಂಬಂಧ ಶಾಂತಿನಗರ ಬಿಎಂಟಿಸಿ ಬಸ್‌ ನಿಲ್ದಾಣಕ್ಕೆ ಬಂದು ಪ್ರಯಾಣಿಕರ ಪ್ರತಿಕ್ರಿಯೆ ಪಡೆದುಕೊಂಡಿತು. ಈ ಯೋಜನೆಯಿಂದ ಎಷ್ಟು ಉಪಯೋಗವಾಗಿದೆ? ಹೇಗೆ ಉಪಯೋಗವಾಗಿದೆ ಎಂಬುದರ ಪ್ರಶ್ನೆಗೆ ಮಹಿಳಾ ಪ್ರಯಾಣಿಕರು ಉತ್ತರಿಸಿ ಶಕ್ತಿ ಯೋಜನೆಯಿಂದ ನಮಗೆಲ್ಲಾ ಅನುಕೂಲವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಬಳಿಕ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್‌ ಅವರಿಂದ ಮಾಹಿತಿ ಪಡೆದುಕೊಂಡ ನಿಯೋಗ ಶಕ್ತಿ ಯೋಜನೆ ಬಗ್ಗೆ ಸಂತಸ ವ್ಯಕ್ತಪಡಿಸಿತು.

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೊಡಗು | ಟ್ರೆಕ್ಕಿಂಗ್ ಹೊರಟಿದ್ದ 36 ವರ್ಷದ ಮಹಿಳೆ ನಾಪತ್ತೆ

ಮಡಿಕೇರಿ : ಕೊಡಗು ಜಿಲ್ಲೆಯ ಅತ್ಯುನ್ನತ ಶಿಖರವಾದ ತಾಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್ ಮಾಡಲು ಹೊರಟಿದ್ದ 36 ವರ್ಷದ ಮಹಿಳೆ ಶರಣ್ಯ…

26 mins ago

ಮಹದೇಶ್ವರ ಬೆಟ್ಟ | ರಸ್ತೆಬದಿಯಲ್ಲೇ ಮತ್ತೆ ಚಿರತೆ ಪ್ರತ್ಯಕ್ಷ ; ಆತಂಕ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಭಕ್ತರಿಗೆ ರಸ್ತೆ ಬದಿಯಲ್ಲಿಯೇ ಚಿರತೆ ಕಾಣಿಸಿಕೊಂಡಿದೆ. ವಾಹನ ಮುಂದೆ…

48 mins ago

ಮಾಲ್ದಾರೆ : ರಸ್ತೆ ಕಾಮಗಾರಿ ಬಳಿಕ ಸಿಮೆಂಟ್ ಚೀಲಗಳ ತ್ಯಾಜ್ಯ ; ಪಂಚಾಯಿತಿ ವಾಹನ ದುರುಪಯೋಗ ಆರೋಪ

ಸಿದ್ದಾಪುರ : ಮಾಲ್ದಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲ್ದಾರೆ–ಗುಡ್ಲೂರು ರಸ್ತೆ ಹಾಗೂ ಮೈಲಾಪುರ–ಗುಡ್ಲೂರು ರಸ್ತೆ ಕಾಮಗಾರಿಗಳು ಪೂರ್ಣಗೊಂಡಿದ್ದರೂ, ಕಾಮಗಾರಿಯಲ್ಲಿ ಬಳಸಿದ…

2 hours ago

ಅನಿಲ ಬಿಕ್ಕಟ್ಟಿನ ನಡುವೆ ಆಟೋ ಎಲ್‌ಪಿಜಿ ಪೂರೈಕೆ ಹೆಚ್ಚಳ

ಬೆಂಗಳೂರು : ಪಶ್ಚಿಮ ಕೊಲ್ಲಿ ರಾಷ್ಟ್ರಗಳ ಯುದ್ಧದಿಂದಾಗಿ ಇದೀಗ ದೇಶದಲ್ಲಿ ಅನಿಲ ಬಿಕ್ಕಟ್ಟು ಎದುರಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಇತರೆ…

2 hours ago

ಇಂದಿನಿಂದ ಕೊಡವ ಕೌಟುಂಬಿಕ ಕ್ರಿಕೆಟ್‌ ಉತ್ಸವ

24ನೇ ವರ್ಷದ ಕ್ರಿಕೆಟ್ ಪಂದ್ಯಾವಳಿಗೆ ಬೇತ್ರಿ ಮುಕ್ಕಾಟೀರ ಕುಟುಂಬಸ್ಥರಿಂದ ಸಿದ್ದತೆ; 24 ದಿನಗಳ ಕಾಲ ಕ್ರಿಕೆಟ್ ಹಬ್ಬ ಪುನೀತ್ ಮಡಿಕೇರಿ…

4 hours ago

ಓದುಗರ ಪತ್ರ | ಕಠಿಣ ಕ್ರಮ ಕೈಗೊಳ್ಳಿ

ಮುರ್ಖರ ದಿನ ವಾದ ಏಪ್ರಿಲ್ ಒಂದರಂದು ( ಬುಧವಾರ), ಕೆಲವು ಜಾಲತಾಣಗಳಲ್ಲಿ ದೇಶದ ರಾಷ್ಟ್ರೀಯ ಲಾಂಛನದ ಅಡಿಯಲ್ಲಿ,(ಸಿಂಹ ಮತ್ತು ಅಶೋಕ…

4 hours ago